ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣ : ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ :  ಡಿನೋಟಿಫಿಕೇಷನ್  ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆಕ್ಷನ್ 17Aಗೆ ಸಂಬಂಧಿಸಿದ ಸ್ಪಷ್ಟನೆಗಾಗಿ ಸುಪ್ರೀಂ ಕೋರ್ಟ್ ವಿಸ್ತೃತ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿದೆ. ನ್ಯಾ. ಜೆ.ಬಿ ಪರ್ದಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠ ವಿಸ್ತೃತ ವಿಚಾರಣೆ ನಡೆಸಿತ್ತು. ಸೋಮವಾರ ಈ ಬಗ್ಗೆ ತೀರ್ಪು ನೀಡಿದ … Continued

ಮುಡಾ ಪ್ರಕರಣ : ಸಿದ್ದರಾಮಯ್ಯ ಅವಧಿಯಲ್ಲೇ ಈ ಹಗರಣ ; ಸುಣ್ಣಕ್ಕೆ ಬೆಣ್ಣೆ ಹಂಚಿಕೆ: ಹಿರಿಯ ವಕೀಲ ರಾಘವನ್‌ ಆಕ್ಷೇಪ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅಭಿಯೋಜನಾ ಮಂಜೂರಾತಿ ನೀಡಿರುವುದನ್ನು ವಜಾ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು … Continued

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ : ಲಂಚ ಪಡೆದ ಆರೋಪದ ಪ್ರಕರಣದಲ್ಲಿ ಮರು ತನಿಖೆಗೆ ಕೋರ್ಟ್ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಪ್ರಕಣದ ಮುಕ್ತಾಯ ವರದಿ(ಬಿ ರಿಪೋರ್ಟ್‌)ಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಹಾಗೂ ಪ್ರಕರಣವನ್ನು ಮರುತನಿಖೆ ನಡೆಸಿ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ … Continued