ಐಐಟಿ ಮದ್ರಾಸ್ ನಿರ್ದೇಶಕರನ್ನು ‘ಗೋಮೂತ್ರ ತಜ್ಞ’ ಎಂದ ಪ್ರಿಯಾಂಕಾ ಗಾಂಧಿಗೆ 215 ಶಿಕ್ಷಣ ತಜ್ಞರಿಂದ ತೀವ್ರ ತರಾಟೆ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರನ್ನು “ಗೋಮೂತ್ರ ತಜ್ಞ” ಎಂದು ಕರೆದಿರುವುದಕ್ಕೆ ದೇಶದಾದ್ಯಂತದ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಪಕುಲಪತಿಗಳು ಹಾಗೂ ಮಾಜಿ ಉಪಕುಲಪತಿಗಳನ್ನು ಒಳಗೊಂಡಂತೆ ಒಟ್ಟು 215 ಶಿಕ್ಷಣ ತಜ್ಞರು ಪ್ರಿಯಾಂಕಾ ಗಾಂಧಿ ಅವರಿಗೆ ಬಹಿರಂಗ ಪತ್ರ ಬರೆದು … Continued

ವಿಡಿಯೊ | ಪ್ರಧಾನಿ ಮೋದಿ ನಿವಾಸದ ಬಳಿ ಕಾಂಗ್ರೆಸ್ ಪ್ರತಿಭಟನೆ : ರಾಹುಲ್, ಪ್ರಿಯಾಂಕಾ ಗಾಂಧಿ ವಶಕ್ಕೆ, ಬಸ್‌ನಲ್ಲಿ ಕರೆದೊಯ್ದ ಪೊಲೀಸರು

ನವದೆಹಲಿ: ಅತ್ಯಂತ ನಾಟಕೀಯ ಘಟನೆಗಳಿಗೆ ದೇಶದ ರಾಜಧಾನಿ ಮಂಗಳವಾರ ಸಾಕ್ಷಿಯಾಯಿತು. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ “ದೌರ್ಜನ್ಯ”ವನ್ನು ಖಂಡಿಸಿ, ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಸೇರಿದಂತೆ ಹಲವು … Continued

ವಯನಾಡು ಮುಂದಿನ ಅಮೇಥಿ ‘: ರಾಹುಲ್-ಪ್ರಿಯಾಂಕಾ ವಿರುದ್ಧ ವಿವಾದಾತ್ಮಕ ಪೋಸ್ಟರ್ ; ಪೊಲೀಸರಿಂದ ಪ್ರಕರಣ ದಾಖಲು

ವಯನಾಡು (ಕೇರಳ): ಕೇರಳದ ವಯನಾಡ್‌ನಲ್ಲಿರುವ ಕಾಂಗ್ರೆಸ್ ಕಚೇರಿ (DCC) ಗೋಡೆ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಟಾರ್ಗೆಟ್‌ ಮಾಡಿ ವಿವಾದಾತ್ಮಕ ಪೋಸ್ಟರ್‌ಗಳನ್ನು ಅಂಟಿಸಲಾಗಿದ್ದು, ಈ ಸಂಬಂಧ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಕಾಂಗ್ರೆಸ್ ಶಾಸಕ ಟಿ. ಸಿದ್ದಿಕ್ ನೀಡಿದ ದೂರಿನ ಮೇರೆಗೆ ಕಲ್ಪೆಟ್ಟಾ ಪೊಲೀಸ್ … Continued

ದೆಹಲಿ ಯುವತಿ ಜೊತೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರನ ಮದುವೆ ನಿಶ್ಚಯ..?

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ, ತಮ್ಮ ದೀರ್ಘಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅನೇಕ ಮಾಧ್ಯಮ ವರದಿಗಳ ಪ್ರಕಾರ, ಇವರಿಬ್ಬರು ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು ರೈಹಾನ್ ವಾದ್ರಾ … Continued

ವಯನಾಡು ಉಪಚುನಾವಣೆ: ರಾಹುಲ್‌ ಗಾಂಧಿಗಿಂತ ಹೆಚ್ಚಿನ ಅಂತರದಲ್ಲಿ ಜಯಗಳಿಸಿದ ಸಹೋದರಿ ಪ್ರಿಯಾಂಕಾ ಗಾಂಧಿ…!

ತಿರುವನಂತಪುರಂ: ಇಡೀ ದೇಶದ ಗಮನ ಸೆಳೆದಿದ್ದ ವಯನಾಡು (Wayanad) ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ (Priyanka Gandhi) 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ. ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಸಹೋದರ ರಾಹುಲ್‌ ಗಾಂಧಿ … Continued

ವಯನಾಡು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ಆಸ್ತಿ ಘೋಷಣೆ ; ಇವರಿಗಿಂತ ಪತಿಯ ಆಸ್ತಿ 5 ಪಟ್ಟು ಹೆಚ್ಚು

 ವಯನಾಡು : ವಯನಾಡು ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿರುವ ಪ್ರಿಯಾಂಕಾ ತಮ್ಮ ಬಳಿ ಇರುವ ಆಸ್ತಿಯ ಮೌಲ್ಯವನ್ನು ಘೋಷಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಅವರ ಪತಿ ರಾಬರ್ಟ್ ವಾದ್ರಾ ಅವರು ಸುಮಾರು 66 ಕೋಟಿ ರೂಪಾಯಿ ಮೌಲ್ಯದ ಆಸ್ತಿ … Continued

ವಯನಾಡು ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡು : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಅವರು ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, … Continued

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ; ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಹೆಸರು ಘೋಷಣೆ

ನವದೆಹಲಿ: ಚುನಾವಣಾ ಆಯೋಗವು (EC) ವಯನಾಡು ಮತ್ತು ನಾಂದೇಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಮಂಗಳವಾರ ಘೋಷಿಸಿದೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಮಂಗಳವಾರ (ಅಕ್ಟೋಬರ್ 15) ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. … Continued

ರಾಯ್ಬರೇಲಿ ಲೋಕಸಭಾ ಕ್ಷೇತ್ರ ಉಳಿಸಿಕೊಂಡ ರಾಹುಲ್‌ ಗಾಂಧಿ : ವಯನಾಡಿನಿಂದ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ…!

ನವದೆಹಲಿ: ಎರಡು ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳಿಗೆ ಸೋಮವಾರ (ಜೂನ್‌ 17) ತೆರೆಬಿದ್ದಿದೆ. ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಯನಾಡ ಕ್ಷೇತ್ರವನ್ನು ತೊರೆಯಲಿದ್ದಾರೆ. ಆದರೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ವಯನಾಡಿನಿಂದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ವಯಾನಾಡಿನಿಂದ ಪ್ರಿಯಾಂಕಾ ಗಾಂಧಿ … Continued

ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ವಿವಾದ ; ಮಲಿವಾಲ್‌ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ, ಪ್ರಶ್ನೆಗೆ ಉತ್ತರಿಸದೆ ಮೈಕ್‌ ಮತ್ತೊಬ್ಬರಿಗೆ ಕೊಟ್ಟ ಕೇಜ್ರಿವಾಲ್

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ವಿಭವಕುಮಾರ ಹಲ್ಲೆ ಮಾಡಿದ ಆರೋಪಿತ ಘಟನೆಯ ಬಗ್ಗೆ ವಿವಿಧ ರಾಜಕೀಯ ಪಕ್ಷಗಳು ಪ್ರತಿಕ್ರಿಯಿಸುತ್ತಿದ್ದು, ಇದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಈ ವಿಷಯದ … Continued