ಭಾರತದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವಿಗೀಡಾದ ನಂತರ ನಕ್ಕು ಅಪಹಾಸ್ಯ : ಅಮೆರಿಕ ಪೊಲೀಸ್ ಅಧಿಕಾರಿ ವೀಡಿಯೊ ಬಹಿರಂಗ, ತನಿಖೆ ಆರಂಭ

ಅಮೆರಿಕದ ಸಿಯಾಟಲ್‌ ನಲ್ಲಿ ಈ ವರ್ಷದ ಜನವರಿಯಲ್ಲಿ ಪೊಲೀಸ್ ಗಸ್ತು ವಾಹನ ಡಿಕ್ಕಿ ಹೊಡೆದು ಭಾರತೀಯ ಮೂಲದ ಯುವತಿ ಮೃತಪಟ್ಟಿದ್ದರು. ಯುವತಿ ಸಾವಿನ ಬಗ್ಗೆ ಪೊಲೀಸ್‌ ಅಧಿಕಾರಿಯೊಬ್ಬರು ಅಪಹಾಸ್ಯ ಮಾಡಿರುವುದು ಬೆಳಕಿಗೆ ಬಂದಿದೆ. ಅಧಿಕಾರಿ, 23 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಸಾವಿನ ಬಗ್ಗೆ ಅಪಹಾಸ್ಯ ಮಾಡಿರುವುದು ಬಾಡಿ- ವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದು … Continued

4ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಅತಿಥಿ ಶಿಕ್ಷಕ…!

ಗದಗ: ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಗ್ರಾಮದಲ್ಲಿ ಅತಿಥಿ ಶಿಕ್ಷಕರೊಬ್ಬರು 4 ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆವರಣದಲ್ಲಿಯೇ ಹೊಡೆದು ಕೊಂದಿದ್ದಾನೆ. ಆರೋಪಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಮುತ್ತಪ್ಪ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದಾನೆ. ಮೂಲಗಳ ಪ್ರಕಾರ ಶಿಕ್ಷಕ … Continued

ಅಭಯಾರಣ್ಯದಲ್ಲಿ ಸಫಾರಿ ವೇಳೆ ಹುಲಿಯ ಸಮೀಪವೇ ಬಾಲಿವುಡ್‌ ನಟಿ ರವೀನಾ ಟಂಡನ್ ವಾಹನದ ವೀಡಿಯೊ ಕಂಡುಬಂದ ನಂತರ ತನಿಖೆ ಆರಂಭ | ವೀಕ್ಷಿಸಿ

ನರ್ಮದಾಪುರಂ (ಮಧ್ಯಪ್ರದೇಶ): ಬಾಲಿವುಡ್ ನಟಿ ರವೀನಾ ಟಂಡನ್ ಸಫಾರಿ ವೇಳೆ ಹುಲಿಯ ಸಮೀಪದಲ್ಲಿ ಪ್ರಯಾಣಿಸುತ್ತಿದ್ದ ವಾಹನವೊಂದು ವೀಡಿಯೊದಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಸತ್ಪುರ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವೀಡಿಯೊದಲ್ಲಿ ಸಫಾರಿ ವಾಹನವು ಹುಲಿಯ ಸಮೀಪಕ್ಕೆ ಬಂದಿರುವುದನ್ನು ತೋರಿಸಿದೆ. ಕ್ಲಿಪ್‌ನಲ್ಲಿ, ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ … Continued

ಬಟ್ಟೆ ಶೋ ರೂಂಗೆ ನುಗ್ಗಿ ಬಿಜೆಪಿ ನಾಯಕನ ಗುಂಡಿಟ್ಟು ಹತ್ಯೆ ಮಾಡಿದ ಐವರು ದುಷ್ಕರ್ಮಿಗಳು

ಗುರ್‌ಗಾಂವ್ : ಹರ್ಯಾಣದ ಬಿಜೆಪಿ ನಾಯಕ ಸುಖ್ಬೀರ್ ಖಟನಾ ಾವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗುರ್‌‌ಗಾಂವ್ ಬಟ್ಟೆ ಶೋ ರೂಂ ಒಳಗೆಡೆ ಇದ್ದ ಸುಖ್ಬೀರ್ ಖಟನಾ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ನೇರವಾಗಿ ಶೋ ರೂಂ ಒಳಗೆ ನುಗ್ಗಿ ಗುಂಡಿನ ಸುರಿಮಳೆಗೈದಿದ್ದಾರೆ. ಸುಖ್ಬೀರ್ ಗನ್‌ಮ್ಯಾನ್ ಕೂಗಳತೆ ದೂರದಲ್ಲಿರುವಾಗಲೇ ಈ ಘಟನೆ ನಡೆದಿದೆ. … Continued

ಸರ್ಕಾರಿ ಹಾಸ್ಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಂದ ಮದ್ಯದ ಪಾರ್ಟಿ: ಫೋಟೋ ವೈರಲ್‌ ಆದ ನಂತ್ರ ತನಿಖೆ ಆರಂಭ

ಹೈದರಾಬಾದ್‌: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಚಿತ್ರಗಳು ವೈರಲ್ ಆಗಿವೆ. ದಂಡೇಪಲ್ಲಿಯ ಬಾಲಕರ ವಸತಿ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ವಿದಾಯ ಪಾರ್ಟಿ ವೇಳೆ ಬಿಯರ್ ಸೇವಿಸುತ್ತಿರುವ ಘಟನೆ ವರದಿಯಾಗಿದೆ. 10ನೇ ತರಗತಿಯ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಬೀಳ್ಕೊಡುಗೆ ಪಾರ್ಟಿಯನ್ನು ಆಯೋಜಿಸಲು ಬಯಸಿದ್ದರು. ಅಭಿವೃದ್ಧಿ ಅಧಿಕಾರಿ ಭಗವತಿ ಮಾತನಾಡಿ, ”ಬೇಸಿಗೆ ರಜೆ … Continued