ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿಷೇಧ

ಕಾರವಾರ: ನೈಋತ್ಯ ಮಾನ್ಸೂನ್‌ ಹಂಗಾಮಿನ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲಾದ್ಯಂತ 2026ರ ಜೂನ್ 1 ರಿಂದ ಆಗಸ್ಟ್ 31ರ ವರೆಗೆ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳು ಹಾಗೂ ನೀರು ಆಧರಿತ ಮನರಂಜನಾ ಚಟುವಟಿಕೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷ್ಮೀಪ್ರಿಯಾ ಕೆ. ಆದೇಶ ಹೊರಡಿಸಿದ್ದಾರೆ. ಮಳೆಗಾಲದ … Continued

ರಷ್ಯಾದಲ್ಲಿ ವ್ಯಾಟ್ಸಾಪ್‌ ಸಂಪೂರ್ಣ ನಿರ್ಬಂಧ…

ಮಾಸ್ಕೋ: ಜಗತ್ತಿನ ಜನಪ್ರಿಯ ಸಂದೇಶ ರವಾನೆ ಅಪ್ಲಿಕೇಶನ್ ಆದ ‘ವ್ಯಾಟ್ಸಾಪ್‌’ (WhatsApp) ಅನ್ನು ರಷ್ಯಾದಲ್ಲಿ ಗುರುವಾರದಿಂದ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸ್ಥಳೀಯ ಕಾನೂನುಗಳನ್ನು ಪಾಲಿಸುವಲ್ಲಿ ವಿಫಲವಾದ ಕಾರಣ ಅಮೆರಿಕ ಮೂಲದ ಮೆಟಾ (Meta) ಕಂಪನಿಯ ಒಡೆತನದ ಈ ಆ್ಯಪ್ ಅನ್ನು ರಷ್ಯಾ ಸರ್ಕಾರ ಅಧಿಕೃತವಾಗಿ ನಿಷೇಧಿಸಿದೆ. ಇದರ ಬದಲಿಗೆ ರಷ್ಯನ್ನರು ಸರ್ಕಾರಿ ಪ್ರಾಯೋಜಿತ ಮ್ಯಾಕ್ಸ್‌ (‘MAX’) ಎಂಬ … Continued

ಶಿರಸಿ-ಕುಮಟಾ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಮೂರ್ನಾಲ್ಕು ಬಾರಿ ಗುಡ್ಡ ಕುಸಿತ ಉಂಟಾಗಿದೆ. ಬಹುತೇಕ ರಾತ್ರಿ ವೇಳೆಯೇ ಗುಡ್ಡ ಕುಸಿತ ಆಗುವುದನ್ನು ಪರಿಗಣಿಸಿ ಈ ಮಾರ್ಗವಾಗಿ ರಾತ್ರಿ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಹಾಗೂ ಮತ್ತೆ ಕುಸಿಯುವ ಆತಂಕವಿರುವುದರಿಂದ … Continued

ಪತಂಜಲಿ ಔಷಧ ಜಾಹೀರಾತಿಗೆ ತಾತ್ಕಾಲಿಕ ನಿರ್ಬಂಧ ಹೇರಿದ ಸುಪ್ರೀಂ ಕೋರ್ಟ್ : ಪತಂಜಲಿ ಆಯುರ್ವೇದಕ್ಕೆ ನ್ಯಾಯಾಂಗ ನಿಂದನೆ ನೋಟಿಸ್‌

ನವದೆಹಲಿ: ಪತಂಜಲಿ ಆಯುರ್ವೇದ ಔಷಧಿಗಳ ಜಾಹೀರಾತುಗಳನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ತನ್ನ ಔಷಧಿಗಳು ಕೆಲವು ರೋಗಗಳನ್ನು ಗುಣಪಡಿಸುತ್ತವೆ ಎಂದು ಯಾವುದೇ ಪ್ರಾಯೋಗಿಕ ಸಾಕ್ಷ್ಯಗಳಿಲ್ಲದಿದ್ದರೂ ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನೀಡುವ ಮೂಲಕ ಪತಂಜಲಿ ದೇಶದ ಜನರ ದಿಕ್ಕುತಪ್ಪಿಸುತ್ತಿದೆ ಎಂದು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠ ತೀವ್ರ ಅಸಮಾಧಾನ … Continued

ಶಿವಮೊಗ್ಗ ಪ್ರವೇಶಿಸದಂತೆ ಪ್ರಮೋದ ಮುತಾಲಿಕಗೆ ನಿರ್ಬಂಧ

ಶಿವಮೊಗ್ಗ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ ಅವರಿಗೆ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ. ಶಿವಮೊಗ್ಗದ ಗಲಭೆ ಪೀಡಿತ ಪ್ರದೇಶ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಪ್ರಮೋದ್ ಮುತಾಲಿಕ್ ಅವರನ್ನು ಮಂಗಳವಾರ ರಾತ್ರಿ ಹೊಸನಗರದ ತಾಲೂಕಿನ ಮಾಸ್ತಿಕಟ್ಟೆ ಬಳಿ ತಡೆದ ಪೊಲೀಸರು ಮುಂದಿನ ಮೂವತ್ತು ದಿನಗಳ ಮಟ್ಟಿಗೆ ಶಿವಮೊಗ್ಗ ತೆರಳದಂತೆ ನಿರ್ಬಂಧ ಹೇರಲಾಗಿರುವ … Continued