ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರವಾರ: ಉತ್ತರ ಜಿಲ್ಲೆಯ ಭಟ್ಕಳ ತಾಲೂನಿಲ್ಲಿ ನಡೆದ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಯೊಬ್ಬನಿಗೆ ಮರಣ ದಂಡನೆ, ಇನ್ನೊಬ್ಬ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಭಟ್ಕಳ ತಾಲೂಕಿನ ಹಾಡವಳ್ಳಿಯ ಗ್ರಾಮದ ವಿನಯ ಶ್ರೀಧರ ಭಟ್ಟನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಆತನ ತಂದೆ ಶ್ರೀಧರ ಭಟ್ಟನಿಗೆ … Continued

ಬೈಲಹೊಂಗಲ : ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಗ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಸಾರಾಯಿ ಕುಡಿದ ಅಮಲಿನಲ್ಲಿ ಮಗ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ಮಹಾದೇವಿ ಗುರಪ್ಪ ತೊಲಗಿ (70) ಎಂದು ಗುರುತಿಸಲಾಗಿದೆ. ಈಕೆಯ ಪುತ್ರ ಈರಣ್ಣ ಗುರಪ್ಪ ತೊಲಗಿ (34) ಕೊಲೆ ಆರೋಪಿಯಾಗಿದ್ದಾನೆ. ಈತ ಕುಡಿತದ ದಾಸನಾಗಿದ್ದ ಹಾಗೂ … Continued

ಹಾಸನದಲ್ಲಿ ಹಾಡಹಗಲೇ ಗುಂಡಿನ ಸದ್ದು; ಇಬ್ಬರು ಸಾವು, ಒಬ್ಬನ ಹತ್ಯೆಗೈದು ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಹಾಸನ : ಹಾಸನದಲ್ಲಿ (Hassan) ಹಾಡಹಗಲೇ ಗುಂಡಿನ (Shooting) ದಾಳಿ ನಡೆದಿದ್ದು ಗುಂಡೇಟಿಗೆ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ದಾಳಿ ನಡೆದಿದ್ದು, ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ಸದ್ದು ಕೇಳಿಬಂದ … Continued

ಕೌಟುಂಬಿಕ ಕಲಹ: ನಾಲ್ವರು ಸಹೋದರರಿಗೆ 20,000 ಕೋಟಿ ರೂ. ನೀಡುವಂತೆ ಭಾರತೀಯ ಉದ್ಯಮಿಗೆ ನ್ಯಾಯಾಲಯ ಆದೇಶ : ಏನಿದು ಪ್ರಕರಣ..?

ಅಮೆರಿಕದಲ್ಲಿ ಐವರು ಭಾರತೀಯ ಮೂಲದ ಸಹೋದರರನ್ನು ಒಳಗೊಂಡ ಕೌಟಿಂಬಿಕ ಉದ್ಯಮ ಪಾಲುದಾರಿಕೆಯ ವ್ಯವಹಾರದ ಸುದೀರ್ಘ ಕಾನೂನು ಹೋರಾಟದಲ್ಲಿ ನ್ಯಾಯಾಧೀಶರು ನಾಲ್ವರು ಸಹೋದರರಿಗೆ ಮತ್ತೋರ್ವ ಸಹೋದರ ಭಾರಿ ಬಹು-ಶತಕೋಟಿ ಡಾಲರ್ ಹಾನಿಯ ಮೊತ್ತವನ್ನು ಪಾವತಿಸಬೇಕು ಎಂದು ಆದೇಶಿಸಿದ್ದಾರೆ. 21 ವರ್ಷಗಳಷ್ಟು ಹಳೆಯದಾದ ಆಸ್ತಿ ವಿವಾದದಲ್ಲಿ ಈ ತೀರ್ಪು ಬಂದಿದ್ದು, ಬ್ಲೂಮ್‌ಬರ್ಗ್ ವರದಿಯ ಪ್ರಕಾರ, ಉದ್ಯಮಿ ಹರೇಶ ಜೋಗನಿ … Continued

ಜಮೀನು ಜಗಳ : ಜಮಖಂಡಿಯಲ್ಲಿ ನಾಲ್ವರ ಸಹೋದರರ ಭೀಕರ ಹತ್ಯೆ

ಬಾಗಲಕೋಟೆ : ಮಾರಕಾಸ್ತ್ರಗಳಿಂದ ಕೊಚ್ಚಿ ನಾಲ್ವರು ಸಹೋದರರನ್ನು ಬರ್ಬರವಾಗಿ ಕೊಲೆ ಮಾಡಿದ  ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಖಂಡಿಯಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರು ಸಹೋದರರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಣಮಂತ  (45), ಬಸವರಾಜ   (37), ಈಶ್ವರ   (35) ಮತ್ತು ಮಲ್ಲಪ್ಪ  (33) ಕೊಲೆಯಾದ ಸಹೋದರರು ಎಂದು ಗುರುತಿಸಲಾಗಿದೆ. ತೋಟದ … Continued