3 ವರ್ಷದ ಬಾಲಕಿ ಮೇಲೆ ಅತ್ಯಾಚಾರ-ಹತ್ಯೆ : 65 ವರ್ಷದ ಆರೋಪಿಗೆ ಗಲ್ಲು ಶಿಕ್ಷೆ, ‘ಅಪರೂಪದಲ್ಲೇ ಅಪರೂಪದ’ ಪ್ರಕರಣ ಎಂದ ಕೋರ್ಟ್‌

ಪುಣೆ : ಮಹಾರಾಷ್ಟ್ರದ ಪುಣೆ ಜಿಲ್ಲೆಯ ನಸ್ರಾಪುರ ಗ್ರಾಮದಲ್ಲಿ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣದಲ್ಲಿ 65 ವರ್ಷದ ಭೀಮರಾವ್ ಕಾಂಬ್ಳೆಗೆ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಅಪರಾಧ ನಡೆದ ಕೇವಲ 60 ದಿನಗಳೊಳಗೆ ತೀರ್ಪು ಪ್ರಕಟವಾಗಿದ್ದು, ಪರಿಸ್ಥಿತಿಜನ್ಯ ಸಾಕ್ಷ್ಯಗಳು ಹಾಗೂ ‘ಕೊನೆಯದಾಗಿ ಬಾಲಕಿಯೊಂದಿಗೆ ಕಂಡುಬಂದ ವ್ಯಕ್ತಿ’ (Last Seen Together) … Continued

ಉರಿ ಬಿಸಿಲಿನಲ್ಲಿ ʼತಲೆಗವಸುʼ..: ಸಿಸಿಟಿವಿ ಸುಳಿವಿನ ಮೇಲೆ ಪೊಲೀಸರು ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣ ಭೇದಿಸಿದ್ದು ಹೇಗೆ ?

ಪುಣೆ: ರಿಯಲ್ ಎಸ್ಟೇಟ್ ಸಂಸ್ಥೆಯ ನಿರ್ದೇಶಕರಾಗಿದ್ದ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ಇದು ಆಕಸ್ಮಿಕ ಸಾವಲ್ಲ, ಇದು ಭೀಕರ ಕೊಲೆ ಎಂಬುದು ಬೆಳಕಿಗೆ ಬಂದಿದೆ. ನವೆಂಬರ್‌ನಲ್ಲಿ ಅದ್ದೂರಿಯಾಗಿ ಮದುವೆಯಾಗಬೇಕಾಗಿದ್ದ ಭಾವಿ ಪತ್ನಿಯೇ ತನ್ನ ಪ್ರೇಮಿಯೊಂದಿಗೆ ಸೇರಿ ಕೇತನ್‌ ಅವರನ್ನು ಲೋಹಗಢ ಕೋಟೆಯಿಂದ … Continued

ಎರಡು ಕೊಲೆ ಸಂಚು ವಿಫಲ ; ನಂತ್ರ ಜನ್ಮದಿನದ ನೆಪದಲ್ಲಿ ಕರೆದೊಯ್ದು ಭಾವಿ ಪತಿಯನ್ನೇ 400 ಅಡಿ ಪ್ರಪಾತಕ್ಕೆ ತಳ್ಳಿ ಸಾಯಿಸಿದ ಯುವತಿ !

ಪುಣೆ : ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಲೋಹಗಢ್ ಕೋಟೆಯಲ್ಲಿ ನಡೆದ ಭೀಕರ ಚಾರಣ ದುರಂತ ಎಂದು ಆರಂಭದಲ್ಲಿ ವರದಿಯಾಗಿದ್ದ ಪ್ರಕರಣವೊಂದು ಈಗ ಒಂದು ಅತ್ಯಂತ ಕ್ರೂರ ಹಾಗೂ ವ್ಯವಸ್ಥಿತ ಕೊಲೆ ಸಂಚು ಎಂದು ಬೆಳಕಿಗೆ ಬಂದಿದೆ. ತನ್ನ ಭಾವಿ ಪತಿ, 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್‌ ಅವರನ್ನು ಅತ್ಯಂತ … Continued

ನೀಟ್‌ ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ‘ಕಿಂಗ್‌ಪಿನ್’ ಬಂಧಿಸಿದ ಸಿಬಿಐ

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್‌ ಯುಜಿ (NEET UG) 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸೂತ್ರಧಾರಿಯನ್ನು (Kingpin) ಕೇಂದ್ರ ತನಿಖಾ ದಳ (CBI) ಬಂಧಿಸಿದೆ. ಹಲವು ವರ್ಷಗಳಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರವಾಗಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದ ರಸಾಯನಶಾಸ್ತ್ರ ಉಪನ್ಯಾಸಕ ಪಿ. ವಿ. ಕುಲಕರ್ಣಿ ಈ ಹಗರಣದ ಮುಖ್ಯ ಆರೋಪಿ … Continued

ವಿಡಿಯೋ | ಆಸ್ಪತ್ರೆ ತಲುಪುವ ಮೊದಲೇ ಪ್ರಸವ ವೇದನೆ ; ರಸ್ತೆಯೇ ಹೆರಿಗೆ ಕೋಣೆ : ಮರದ ಕೆಳಗೆ ಹೆರಿಗೆ ಮಾಡಿಸಿದ ವೈದ್ಯೆ !

ಪುಣೆ : ಪುಣೆಯ ಶಿರೂರು ತಾಲ್ಲೂಕಿನ ಜೋಶಿವಾಡಿಯಲ್ಲಿ ನಡೆದ ಘಟನೆಯೊಂದು ಮನುಷ್ಯನ ಅಸಹಾಯಕತೆ ಮತ್ತು ಅಷ್ಟೇ ವೇಗವಾಗಿ ಸ್ಪಂದಿಸುವ ಮಾನವೀಯತೆಯನ್ನು ಜಗತ್ತಿಗೆ ತೋರಿಸಿಕೊಟ್ಟಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರ ನೆರವಿಗೆ ಧಾವಿಸಿದ ವೈದ್ಯೆ ಹಾಗೂ ಸಾರ್ವಜನಿಕರು ಈ ಮಹಿಳೆಗೆ ನಡುರಸ್ತೆಯಲ್ಲಿಯೇ ಹೆರಿಗೆ ಮಾಡಿಸಿದ್ದಾರೆ. ಬೆಳ್ಳಂಬೆಳಗ್ಗೆ ಗರ್ಭಿಣಿಯೊಬ್ಬರಿಗೆ ತೀವ್ರವಾದ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಶಿರೂರು … Continued

11 ದಿನದಲ್ಲಿ ಹಣ ದುಪ್ಪಟ್ಟು ಮಾಡುವ ಆಸೆಗೆ ಬಿದ್ದು ₹12.31 ಕೋಟಿ ಕಳೆದುಕೊಂಡ ವೈದ್ಯ…!

ಪುಣೆ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಕೇವಲ 11 ದಿನಗಳಲ್ಲಿ ಹಣವನ್ನು ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ, 75 ವರ್ಷದ ಹಿರಿಯ ವೈದ್ಯರೊಬ್ಬರಿಗೆ ಸೈಬರ್ ವಂಚಕರು ಬರೋಬ್ಬರಿ 12.31 ಕೋಟಿ ರೂಪಾಯಿ ವಂಚಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಈ ವರ್ಷದ ಜನವರಿಯಲ್ಲಿ ಈ ವೈದ್ಯರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿತ್ತು. ಅದರಲ್ಲಿ ಷೇರು … Continued

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು

ಪುಣೆ: ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ, ಸೋಮವಾರ ಮಧ್ಯಾಹ್ನ ಅವರನ್ನು ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗೆ ಕರೆತರುವ ಸಂದರ್ಭದಲ್ಲಿ ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ಪತ್ನಿ ಪ್ರತಿಭಾ ಪವಾರ್ ಜೊತೆಗಿದ್ದರು. 85 ವರ್ಷದ ಹಿರಿಯ ರಾಜಕೀಯ ನಾಯಕ ಶರದ್ ಪವಾರ್ ಅವರು ಕೆಮ್ಮು, … Continued

ವೀಡಿಯೊ…| ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾದ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಬುಧವಾರ (ಜನವರಿ 28) ಬೆಳಿಗ್ಗೆ 8.46:02 ಗಂಟೆಗೆ ಮಹಾರಾಷ್ಟ್ರದ ಬಾರಾಮತಿಯ ವಿಮಾನ ನಿಲ್ದಾಣದಿಂದ ಕೆಲವೇ ನಿಮಿಷಗಳ ದೂರದಲ್ಲಿರುವ ಹೆದ್ದಾರಿಯಲ್ಲಿ ಬೆಂಕಿಯ ಚೆಂಡು ಮತ್ತು ಬೃಹತ್ ಹೊಗೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರಿದ್ದ ವಿಮಾನ ಪತನಗೊಂಡಿದ್ದು, ಆ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಅಜಿತ ಪವಾರ್ ಆರು … Continued

2 ವರ್ಷಗಳಿಂದ ಪ್ರೀತಿಸಿ ವಿವಾಹವಾದರು… ಆದ್ರೆ ಮದುವೆಯಾದ 24 ಗಂಟೆಗಳಲ್ಲೇ ಡೈವೋರ್ಸ್…!

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಅತ್ಯಂತ ವಿಚಿತ್ರ ಹಾಗೂ ಅಚ್ಚರಿಯ ಪ್ರಕರಣವೊಂದು ವರದಿಯಾಗಿದೆ. ಎರಡು-ಮೂರು ವರ್ಷಗಳಿಂದ ಪ್ರೀತಿಸಿ, ಸಂಭ್ರಮದಿಂದ ಮದುವೆಯಾಗಿದ್ದ ಜೋಡಿಯೊಂದು ಹಸೆಮಣೆ ಏರಿದ ಕೇವಲ 24 ಗಂಟೆಗಳಲ್ಲಿ ವಿಚ್ಛೇದನ ಪಡೆದು ಕಾನೂನುಬದ್ಧವಾಗಿ ಬೇರ್ಪಟ್ಟಿದ್ದಾರೆ….! ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿ ಹಾಗೂ ಇಂಜಿನಿಯರ್ ಆಗಿರುವ ಯುವಕ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ಇತ್ತೀಚೆಗೆ … Continued

ʼಡಿಜಿಟಲ್ ಅರೆಸ್ಟ್ʼ ವಂಚನೆ ಪ್ರಕರಣ ; 1.2 ಕೋಟಿ ರೂ. ಕಳೆದುಕೊಂಡ ನಂತ್ರ ಶಾಕ್‌ ನಿಂದ ಮೃತಪಟ್ಟ ನಿವೃತ್ತ ಸರ್ಕಾರಿ ಅಧಿಕಾರಿ

ಪುಣೆ: ‘ಡಿಜಿಟಲ್ ಬಂಧನ’ ವಂಚನೆಗೆ ₹1.19 ಕೋಟಿ ಕಳೆದುಕೊಂಡ ಆಘಾತದಲ್ಲಿ ನಿವೃತ್ತ ಅಧಿಕಾರಿಯ ಸಾವು ಪುಣೆ: ಪುಣೆಯ 82 ವರ್ಷದ ನಿವೃತ್ತ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರು, ತಾವು ಮತ್ತು ತಮ್ಮ 80 ವರ್ಷದ ಪತ್ನಿ ‘ಡಿಜಿಟಲ್ ಬಂಧನ’ (Digital Arrest) ವಂಚನೆ ಪ್ರಕರಣದಲ್ಲಿ ₹1.19 ಕೋಟಿ ಕಳೆದುಕೊಂಡಿರುವುದು ತಿಳಿದ ನಂತರ ವೃದ್ಧ ಆಘಾತದಿಂದ ಮೃತಪಟ್ಟಿದ್ದಾರೆ ಎಂದು … Continued