ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಸಂಗ್ರೂರ್ : ಭಾರತೀಯ ಜನತಾ ಪಕ್ಷ (ಬಿಜೆಪಿ) ಕಚೇರಿಗೆ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಪಂಜಾಬ್‌ನ ಸಂಗ್ರೂರಿನಲ್ಲಿ ನಡೆದಿದೆ. ಈ ದಾಳಿಯಿಂದ ಕಚೇರಿಯ ಹೊರಗೋಡೆಯಲ್ಲಿ ಸುಟ್ಟ ಗುರುತುಗಳು ಕಂಡುಬಂದಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಅಥವಾ ಯಾರಿಗೂ ಗಾಯಗಳಾಗಿಲ್ಲ. ಪ್ರಕರಣ ಸಂಬಂಧ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಸೋಮವಾರ ಮುಂಜಾನೆ … Continued

ಕೇಂದ್ರ ಸಚಿವ ಸ್ಥಾನಕ್ಕೆ ರವ್ನೀತ್ ಸಿಂಗ್ ಬಿಟ್ಟು ರಾಜೀನಾಮೆ

ನವದೆಹಲಿ: ಪಂಜಾಬ್ ಬಿಜೆಪಿ ನಾಯಕ ರವ್ನೀತ್ ಸಿಂಗ್ ಬಿಟ್ಟು ಅವರು ರೈಲ್ವೆ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆಗಳ ಕೇಂದ್ರ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ, ರಾಜ್ಯಸಭಾ ಸದಸ್ಯರಾಗಿದ್ದ ಅವರ ಅವಧಿಯೂ ಜೂನ್ ತಿಂಗಳಲ್ಲೇ ಅಂತ್ಯಗೊಂಡಿತ್ತು. ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಟ್ಟು ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು … Continued

ಪಂಜಾಬ್ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು : ಸಮಸ್ಯೆ ಬಗೆಹರಿಸಲು ಹೈಕಮಾಂಡ್‌ಗೆ ಚನ್ನಿ ಬಣದ ಗಡುವು; ಅಮಿತ್ ಶಾ ಭೇಟಿಯಾದ ರಾಂಧವಾ

ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷಕ್ಕಿಂತ ಕಡಿಮೆ ಅವಧಿ ಉಳಿದಿರುವ ಸಂದರ್ಭದಲ್ಲಿ ಪಂಜಾಬ್ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಬಹಿರಂಗವಾಗಿದೆ. ಮಾಜಿ ಮುಖ್ಯಮಂತ್ರಿ ಚರಣಜೀತ ಸಿಂಗ್ ಚನ್ನಿ ಅವರ ಬೆಂಬಲಿಗರ ಬಣವು ತಾವು ಮುಂದಿಟ್ಟಿರುವ ಬೇಡಿಕೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್‌ಗೆ ಒಂದು ವಾರದ ಗಡುವು ನೀಡಿದೆ. ರಾಜ್ಯದ … Continued

ಕಚೇರಿಯಲ್ಲೇ ಸಹೋದ್ಯೋಗಿ ಯುವತಿಗೆ 20 ಬಾರಿ ಚಾಕುವಿನಿಂದ ಇರಿದು ಕೊಲೆ ; ನಂತರ ತನ್ನ ಗಂಟಲನ್ನೇ ಸೀಳಿಕೊಂಡ ಪಾಗಲ್‌ ಪ್ರೇಮಿ !

ನವದೆಹಲಿ: ಪಂಜಾಬ್‌ನ ಮೊಹಾಲಿಯಲ್ಲಿ ಅತ್ಯಂತ ಭೀಕರ ಮತ್ತು ನಡುಕ ತರಿಸುವ ಘಟನೆಯೊಂದು ನಡೆದಿದೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಆಕೆಯ ಮಾಜಿ ಪ್ರಿಯಕರ ಎಂದು ನಂಬಲಾದ ಸಹೋದ್ಯೋಗಿ ಕಚೇರಿಯ ಒಳಗಡೆಯೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಯುವತಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿಯೂ ಸಹ ತನ್ನದೇ … Continued

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆ: ‘ಕೈ’ ಕೋಟೆಯಲ್ಲಿ ಎಎಪಿ ಜಯಭೇರಿ; ಸ್ಥಾನ ಸುಧಾರಿಸಿಕೊಂಡ ಬಿಜೆಪಿ

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಇರುವಾಗಲೇ ನಡೆದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಾರ್ಟಿ (ಎಎಪಿ) ಜಯಭೇರಿ ಬಾರಿಸಿದೆ. ರಾಜ್ಯದ ಪ್ರಮುಖ ಮಹಾನಗರ ಪಾಲಿಕೆಗಳು ಮತ್ತು ಮುನ್ಸಿಪಲ್ ಕೌನ್ಸಿಲ್‌ಗಳಲ್ಲಿ ಎಎಪಿ ಸ್ಪಷ್ಟ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಫಲಿತಾಂಶವನ್ನು ತಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಸೂಚಿಗೆ … Continued

ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಿಜೆಪಿ

ನವದೆಹಲಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಗುರುವಾರ ಪಕ್ಷದ ಸಂಘಟನಾತ್ಮಕ ವಿಭಾಗದಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದ್ದು, ದೇಶದ ಪ್ರಮುಖ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ತ್ರಿಪುರಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಈ ಕುರಿತು ಪಕ್ಷದ … Continued

ಹೆದ್ದಾರಿಯಲ್ಲಿ ಸಿಸಿಟಿವಿ ಇಟ್ಟು ಸೇನೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ವ್ಯಕ್ತಿಯ ಬಂಧನ

ನವದೆಹಲಿ: ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಸಕ್ರಿಯವಾಗಿದ್ದ ಶಂಕಿತ ಬೇಹುಗಾರಿಕಾ ( espionage) ಜಾಲವನ್ನು ಭೇದಿಸುವಲ್ಲಿ ಪಂಜಾಬ್ ಪೊಲೀಸರು ಯಶಸ್ವಿಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಗೆ (ನಿರ್ವಹಣಾಕಾರರು) ರವಾನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಚಕ್ ಧರಿವಾಲ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂದು ಗುರುತಿಸಲಾಗಿದೆ. ಈತ ಸೇನೆ … Continued

ಮೈ ಜುಂ ಎನಿಸುವ ವಿಡಿಯೋ | ದೇವಸ್ಥಾನದಿಂದ ಬರುವಾಗ 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು, ಇಬ್ಬರು ಸಜೀವ ದಹನ

ಉನಾ : ದೇವಿಯ ದರ್ಶನ ಮುಗಿಸಿ ಮನೆಗೆ ಮರಳುತ್ತಿದ್ದಾಗ ಚಲಿಸುತ್ತಿದ್ದ ಕಾರಿನಲ್ಲೇ ಬೆಂಕಿ ಕಾಣಿಸಿಕೊಂಡು, ನಿಯಂತ್ರಣ ತಪ್ಪಿದ ವಾಹನ ಕಾರು 200 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದು ಇಬ್ಬರು ಭಕ್ತರು ಭೀಕರವಾಗಿ ಸಾವಿಗೀಡಾದ ಘಟನೆ ಪಂಜಾಬ್-ಹಿಮಾಚಲ ಗಡಿಯ ಭರ್ವೈನ್-ಹೋಷಿಯಾರ್‌ಪುರ ರಸ್ತೆಯಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಪವಿತ್ರ ಚಿಂತಪೂರ್ಣಿ ದೇವಸ್ಥಾನದಿಂದ … Continued

ಪತಿ ನಾಪತ್ತೆ…ಮೈದುನನನ್ನೇ ಮದುವೆಯಾಗಿದ್ದ ಪತ್ನಿ…25 ವರ್ಷಗಳ ನಂತರ ಮರಳಿ ಬಂದ ಪತಿ…ಪತ್ನಿಗೆ ಈಗ ಧರ್ಮಸಂಕಟ

ಬಿಜ್ನೋರ್​ : ಇದು ಸಿನಿಮೀಯ ತಿರುವುಗಳನ್ನೂ ಮೀರಿಸುವಂತಹ ಒಂದು ಹೃದಯವಿದ್ರಾವಕ ಮತ್ತು ಅಷ್ಟೇ ಸಂಕೀರ್ಣವಾದ ಘಟನೆ. 25 ವರ್ಷಗಳ ಹಿಂದೆ ನಾಪತ್ತೆಯಾಗಿ, ಮನೆಯವರು ಸತ್ತೇ ಹೋಗಿದ್ದಾನೆ ಎಂದು ಭಾವಿಸಿದ್ದ ವ್ಯಕ್ತಿಯೊಬ್ಬ ಹಠಾತ್ ಪ್ರತ್ಯಕ್ಷನಾಗಿದ್ದಾನೆ. ಈತನ ಪುನರಾಗಮನವು ಕುಟುಂಬದಲ್ಲಿ ಸಂತೋಷಕ್ಕಿಂತ ಹೆಚ್ಚಾಗಿ ಕಾನೂನಾತ್ಮಕ ಮತ್ತು ಸಾಮಾಜಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಶಿವದಯಾಳ ವಾಲಾ ಗ್ರಾಮದ … Continued

ಚಂಡೀಗಢದ ಪಂಜಾಬ್ ಬಿಜೆಪಿ ಕಚೇರಿ ಬಳಿ ಸ್ಫೋಟ

ಚಂಡೀಗಢ: ಚಂಡೀಗಢದ ಸೆಕ್ಟರ್ 37ರಲ್ಲಿರುವ ಪಂಜಾಬಿನ ಬಿಜೆಪಿ ರಾಜ್ಯ ಕಚೇರಿಯ ಪಾರ್ಕಿಂಗ್ ಪ್ರದೇಶದಲ್ಲಿ ಬುಧವಾರ ಸಂಜೆ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಸಾವು-ನೋವು ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ, ಇಬ್ಬರು ವ್ಯಕ್ತಿಗಳು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಒಬ್ಬ ವ್ಯಕ್ತಿ ಕೈಯಲ್ಲಿ ಹೆಲ್ಮೆಟ್ ಹಿಡಿದಿದ್ದರೆ, ಮತ್ತೊಬ್ಬ ವಿಡಿಯೋ … Continued