‘ಅಜ್ಞಾನ, ಸೋಮಾರಿತನ, ದುರಹಂಕಾರ’ ಇದುವೇ ಕಾಂಗ್ರೆಸ್‌ ಯಶಸ್ಸು ಪಡೆಯಲು ಇರುವ ಅಡ್ಡಿ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಅಭಿಪ್ರಾಯ

ನವದೆಹಲಿ : “ಅಜ್ಞಾನ, ಸೋಮಾರಿತನ, ದುರಹಂಕಾರ” ಇವುಗಳು ಚುನಾವಣೆಯಲ್ಲಿ ಯಶಸ್ಸು ಪಡೆಯಲು ಕಾಂಗ್ರೆಸ್ಸಿಗೆ ಅಡ್ಡಿಯಾಗುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಹೇಳಿದ್ದಾರೆ. ಹಾಗೂ ರಾಜಕೀಯದಿಂದ ಕೆಲಕಾಲ ವಿರಾಮ ತೆಗೆದುಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ. ಇಂಡಿಯಾ ಟುಡೇ ಜೊತೆಗಿನ ವಿಶೇಷ ಸಂವಾದದಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವು ಅದರಿಂದ … Continued

ವೀಡಿಯೊ..: ಮುಸ್ಲಿಂ ಮೀಸಲಾತಿ ಬಗ್ಗೆ ಕಾಂಗ್ರೆಸ್‌ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ ಮೋದಿ : ರಾಹುಲ್ ಗಾಂಧಿ ವೈರಲ್ ವೀಡಿಯೊ ಉಲ್ಲೇಖ

ಪಶ್ಚಿಮ ಬಂಗಾಳದ ಜಾರ್‌ಗ್ರಾಮದಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಮರಿಗೆ ಮೀಸಲಾತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಸಿದುಕೊಳ್ಳಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಪಕ್ಷವು ಇನ್ನೂ ಮುಸ್ಲಿಂ ಲೀಗ್‌ನ ಚಿಂತನೆ ಹೊಂದಿರುವ ಕೋಮುವಾದಿ ಪಕ್ಷವಾಗಿದೆ ಎಂದು ಪ್ರಧಾನಿ ಆರೋಪಿಸಿದರು. “ನನ್ನ ಇತ್ತೀಚಿನ ಸಂದರ್ಶನಗಳಲ್ಲಿ … Continued

ಲೋಕಸಭೆ ಚುನಾವಣೆ : ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ನಿವೃತ್ತ ನ್ಯಾಯಮೂರ್ತಿಗಳು

ನವದೆಹಲಿ: ಲೋಕಸಭೆ ಚುನಾವಣೆ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕ್ರಮವಾಗಿ ಸುಪ್ರೀಂ ಕೋರ್ಟ್‌ ಮತ್ತು ದೆಹಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳಾದ ಮದನ್ ಲೋಕೂರ ಮತ್ತು ಎ.ಪಿ. ಶಾ ಅವರು ಸಾರ್ವಜನಿಕ ಚರ್ಚೆಗೆ ಆಹ್ವಾನಿಸಿದ್ದಾರೆ. ಈ ಪ್ರಸ್ತಾವನೆ ಪಕ್ಷಾತೀತವಾಗಿದ್ದು ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿದೆ ಎಂದು ಈ ಇಬ್ಬರೂ ನಿವೃತ್ತ … Continued

‘ಪ್ರಿಯಾಂಕಾ ಗಾಂಧಿ ವಿರುದ್ಧ ಪಕ್ಷದಲ್ಲೇ ದೊಡ್ಡ ಪಿತೂರಿ…ಜೂನ್ 4ರ ನಂತರ ಕಾಂಗ್ರೆಸ್ ಅಣ್ಣ-ತಂಗಿ ಬಣಗಳಾಗಿ ವಿಭಜನೆ’ : ಕಾಂಗ್ರೆಸ್‌ ಮಾಜಿ ನಾಯಕನ ಸ್ಫೋಟಕ ಹೇಳಿಕೆ

ನವದೆಹಲಿ: ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿತರಾದ ಆಚಾರ್ಯ ಪ್ರಮೋದ ಕೃಷ್ಣಂ ಅವರು ಲೋಕಸಭೆ ಚುನಾವಣೆಗೆ ರಾಯ್ಬರೇಲಿ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಪ್ರವೇಶಿಸುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಒಂದು ದಿನದ ನಂತರ, ಕಾಂಗ್ರೆಸ್‌  ಪಕ್ಷದಲ್ಲಿ ನಡೆಯುತ್ತಿರುವ ಷಡ್ಯಂತ್ರಕ್ಕೆ ಪ್ರಿಯಾಂಕಾ ಗಾಂಧಿ ಬಲಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. … Continued

ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ನವದೆಹಲಿ : ರಾಹುಲ್‌ ಗಾಂಧಿ ಅಮೇಥಿಯನ್ನು ಮರಳಿ ಗೆಲ್ಲಲು ಸಂಪೂರ್ಣ ಪ್ರಯತ್ನ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷವು ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಕಣಕ್ಕಿಳಿಸುವುದಾಗಿ ಪ್ರಕಟಿಸಿದೆ. ಕಾಂಗ್ರೆಸ್ ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಉತ್ತರ ಪ್ರದೇಶದ … Continued

ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಏಪ್ರಿಲ್ 29 ರೊಳಗೆ ಉತ್ತರಿಸುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ನೋಟಿಸ್‌ ಜಾರಿ ಮಾಡಿದೆ. ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು … Continued

ರಾಹುಲ್ ಗಾಂಧಿ ಸ್ಪರ್ಧೆಯ ಸಸ್ಪೆನ್ಸ್ ನಡುವೆ ಅಮೇಥಿಯಲ್ಲಿ ರಾರಾಜಿಸುತ್ತಿರುವ “ರಾಬರ್ಟ್ ವಾದ್ರಾ ಅಬ್ ಕಿ ಬಾರ್” ಪೋಸ್ಟರ್…!

ಅಮೇಥಿ : ಉತ್ತರ ಪ್ರದೇಶದ ಅಮೇಥಿಯ ಕಾಂಗ್ರೆಸ್‌ ಅಭ್ಯರ್ಥಿಯ ಬಗ್ಗೆ ಸಸ್ಪೆನ್ಸ್ ನಡುವೆ, ಪಕ್ಷದ ಸ್ಥಳೀಯ ಕಚೇರಿಯ ಹೊರಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸುವ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಪೋಸ್ಟರ್‌ಗಳಲ್ಲಿ “ಅಮೇಥಿ ಕಿ ಜನತಾ ಕರೇ ಪುಕಾರ್, ರಾಬರ್ಟ್ ವಾದ್ರಾ ಅಬ್ ಕಿ ಬಾರ್”, ಅಂದರೆ “ಅಮೇಥಿಯ … Continued

ವಯನಾಡಿನಲ್ಲಿ ರಾಹುಲ್‌ ಗಾಂಧಿಗೆ ಶಾಕ್‌ ನೀಡಿದ ಬಿಜೆಪಿ : ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆ

ತಿರುವನಂತಪುರಂ: ಲೋಕಸಭೆ ಚುನಾವಣೆಗೆ ಮುಂಚಿತವಾಗಿ ರಾಹುಲ್‌ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‌ನಲ್ಲಿ ಕಾಂಗ್ರೆಸ್ಸಿಗೆ ಬಿಜೆಪಿ ಬಿಗ್‌ ಶಾಕ್‌ ನೀಡಿದೆ. ನಿರ್ಣಾಯಕ ಲೋಕಸಭೆ ಸ್ಪರ್ಧೆಗೆ ಮುಂಚಿತವಾಗಿ ಹಿನ್ನಡೆಯಾಗಿ, ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಅವರು ಕಾಂಗ್ರೆಸ್‌ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ. ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ … Continued

ಲೋಕಸಭೆ ಚುನಾವಣೆ : ಅಮೇಥಿಯಲ್ಲಿ ಸ್ಪರ್ಧೆ ವಿಚಾರ, ರಾಹುಲ್‌ ಗಾಂಧಿ ಹೇಳಿದ್ದೇನು..?

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರ ಪ್ರದೇಶದ ಅಮೇಥಿಯಿಂದಲೂ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಮೆಥಿಯಲ್ಲಿ ಸ್ಪರ್ಧಸಿಉವ ಕುರಿತಾದ ಪ್ರಶ್ನೆಗೆ, “ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಮತ್ತು ಕಾಂಗ್ರೆಸ್ ಅಧ್ಯಕ್ಷರು ನನ್ನನ್ನು ಏನು ಮಾಡಲು ಕೇಳುತ್ತಾರೋ ಅದನ್ನು ನಾನು ಮಾಡುತ್ತೇನೆ… ಅಂತಹ ನಿರ್ಧಾರಗಳನ್ನು … Continued