ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಈಗ ಒಡೆದ ಮನೆ..? ಎಎಪಿ, ಟಿಎಂಸಿ ನಂತ್ರ ಈಗ ಪ್ಲಗ್‌ ಎಳೆಯಲು ನಿತೀಶಕುಮಾರ ತಯಾರಿ..?!

ನವದೆಹಲಿ /ಪಾಟ್ನಾ: ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿಮಾಡಿಕೊಳ್ಳಲು ಒಪ್ಪದೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದಲ್ಲಿ ಚುನಾವಣೆ ಮೊದಲೇ ಅಲುಗಾಟ ಶುರುವಾಗಿದೆ. ಇಂದು, ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಮಾರ್ಚ್ 30 ರಂದು ಭಾರತ ಜೋಡಿ … Continued

ಅಸ್ಸಾಂನಲ್ಲಿ ʼಹಿಂಸಾಚಾರ, ಹಲ್ಲೆʼ ನಡೆಸಿದ ಆರೋಪ : ರಾಹುಲ್ ಗಾಂಧಿ, ಇತರ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್

ಗುವಾಹತಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ ಮತ್ತು ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ. ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅದರ ಪ್ರಮುಖ ಮಾರ್ಗಗಳ ಮೂಲಕ ಗುವಾಹತಿ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ … Continued

ವೀಡಿಯೊ….| ರಾಹುಲ್ ಗಾಂಧಿ ಯಾತ್ರೆಗೆ ನಗರದೊಳಕ್ಕೆ ಪ್ರವೇಶ ನಿರಾಕರಣೆ : ಗುವಾಹತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು-ಪೊಲೀಸರ ಘರ್ಷಣೆ

ಗುವಾಹತಿ : ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ರಾಜಧಾನಿ ಗುವಾಹತಿ ಪ್ರಮುಖ ಮಾರ್ಗಗಳ ಮೂಲಕ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ನಂತರ ಮಂಗಳವಾರ ಗುವಾಹಟಿತಿಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಉದ್ವಿಗ್ನತೆ ಉಂಟಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಯಾತ್ರೆಯನ್ನು ನಗರದಿಂದ ದೂರವಿರಿಸಲು ಮತ್ತು … Continued

ರಾಹುಲ್ ಗಾಂಧಿ ‘ಭಾರತ ಜೋಡೋ ನ್ಯಾಯ ಯಾತ್ರೆ’ ವಿರುದ್ಧ ಎಫ್‌ಐಆರ್ ದಾಖಲು

ಗುವಾಹತಿ : ಗುರುವಾರ ಜೋರ್ಹತ್ ಪಟ್ಟಣದಲ್ಲಿ ಅನುಮತಿಸಲಾದ ಮಾರ್ಗ ಬಿಟ್ಟು ಬೇರೆ ಮಾರ್ಗದಲ್ಲಿ ತೆರಳಿದ ಆರೋಪದ ಮೇಲೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಅದರ ಮುಖ್ಯ ಸಂಘಟಕ ಕೆ.ಬಿ. ಬೈಜು ಅವರ ನೇತೃತ್ವದ ‘ಭಾರತ ಜೋಡೋ ನ್ಯಾಯ ಯಾತ್ರೆ’ ವಿರುದ್ಧ ಅಸ್ಸಾಂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್‌ನ ಭಾರತ ಜೋಡೋ ನ್ಯಾಯ ಯಾತ್ರೆ ಗುರುವಾರ … Continued

ಕಾಂಗ್ರೆಸ್‌ ತೊರೆಯುತ್ತಿರುವ ರಾಹುಲ್ ಗಾಂಧಿ ತಂಡದ ನಾಯಕರು : 2019ರಿಂದ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಇವರು…

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಕಾಂಗ್ರೆಸ್ ತನ್ನ ಭಾರತ ಜೋಡಿ ನ್ಯಾಯ ಯಾತ್ರೆಗೆ ಮುಂಚಿತವಾಗಿ ಇಂದು, ಭಾನುವಾರ ದೊಡ್ಡ ಆಘಾತವನ್ನು ಅನುಭವಿಸಿದೆ. ಪಕ್ಷದ ಮಹಾರಾಷ್ಟ್ರದ ವರ್ಚಸ್ವಿ ನಾಯಕ ಮಿಲಿಂದ್ ದಿಯೋರಾ ಅವರು ರಾಜೀನಾಮೆ ನೀಡಿದ್ದು, ಇದು ಪಕ್ಷದೊಂದಿಗಿನ ತಮ್ಮ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದೆ ಎಂದು … Continued

ಇಂದು ಭಾರತ ಜೋಡೋ ನ್ಯಾಯ ಯಾತ್ರೆಗೆ ಚಾಲನೆ : 67 ದಿನಗಳಲ್ಲಿ 15 ರಾಜ್ಯಗಳ 110 ಜಿಲ್ಲೆಗಳಲ್ಲಿ ಸಾಗಲಿದ್ದಾರೆ ರಾಹುಲ್‌ ಗಾಂಧಿ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ‘ಭಾರತ ಜೋಡೋ ನ್ಯಾಯ ಯಾತ್ರೆ’ ಭಾನುವಾರ (ಜನವರಿ ೧೪) ಆರಂಭವಾಗಲಿದೆ. 15 ರಾಜ್ಯಗಳು, 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿರುವ ಈ ಯಾತ್ರೆ ಮಣಿಪುರದ ತೌಬಲ್‌ನಲ್ಲಿ ಆರಂಭವಾಗಲಿದೆ. ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಚುನಾವಣೆ ಮೇಲೆ ದೃಷ್ಟಿ ಇಟ್ಟು ಈ ಪಾದಯಾತ್ರೆಯನ್ನು ಕಾಂಗ್ರೆಸ್‌ ಆಯೋಜಿಸಿದೆ ಎಂದು ಗ್ರಹಿಸಲಾಗುತ್ತಿದೆ. … Continued

ರಾಹುಲ್‌ ಗಾಂಧಿ ಸೇರಿದಂತೆ ಯಾವ ಕಾಂಗ್ರೆಸ್‌ ನಾಯಕರೂ ಮೋದಿಗೆ ಸರಿಸಾಟಿಯಲ್ಲ’ ಎಂದ ಸಂಸದ ಕಾರ್ತಿ ಚಿದಂಬರಂ : ಕಾಂಗ್ರೆಸ್ ನಿಂದ ನೋಟಿಸ್

ಚೆನ್ನೈ: ರಾಹುಲ್ ಗಾಂಧಿ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರದ ತಂತ್ರಕ್ಕೆ ಸರಿಸಾಟಿಯಾಗುವುದಿಲ್ಲ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ, ಸಂಸದ ಕಾರ್ತಿ ಚಿದಂಬರಂ ಅವರಿಗೆ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಶೋಕಾಸ್ ನೋಟಿಸ್ ನೀಡಿದೆ. ಈ ಕ್ರಮವು ಪಕ್ಷದ ನಾಯಕತ್ವದ ಟೀಕೆ ಮತ್ತು … Continued

ಕಾಂಗ್ರೆಸ್‌ ಸೇರಿದ ಆಂಧ್ರ ಸಿಎಂ ಜಗನ್ಮೋಹನ ರೆಡ್ಡಿ ಸಹೋದರಿ

ನವದೆಹಲಿ: ವೈ.ಎಸ್. ಆರ್. ತೆಲಂಗಾಣ ಪಕ್ಷದ ಸಂಸ್ಥಾಪಕಿ ಹಾಗೂ ಆಂಧ್ರ ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಬುಧವಾರ ತಡರಾತ್ರಿ ನವದೆಹಲಿಗೆ ಆಗಮಿಸಿದ್ದರು. ಸೇರ್ಪಡೆ ಸಮಾರಂಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅವರು ತಮ್ಮ … Continued

ಜನವರಿ 14ರಿಂದ ಮಣಿಪುರದಿಂದ ಮುಂಬೈ ವರೆಗೆ ‘ಭಾರತ ನ್ಯಾಯ ಯಾತ್ರೆ’ ನಡೆಸಲಿರುವ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆಯ ಎರಡನೇ ಆವೃತ್ತಿಯನ್ನು ಜನವರಿ 14 ರಿಂದ ಪ್ರಾರಂಭಿಸಲಿದ್ದಾರೆ. ಇದಕ್ಕೆ ‘ಭಾರತ ನ್ಯಾಯ ಯಾತ್ರೆ’ ಎಂದು ಮರುನಾಮಕರಣ ಮಾಡಲಾಗಿದ್ದು, ಈ ಜಾಥಾವು ಈಶಾನ್ಯದಲ್ಲಿ ಮಣಿಪುರದಿಂದ ಆರಂಭಗೊಂಡು ದೇಶದ ಪೂರ್ವದಿಂದ ಪಶ್ಚಿಮದೆಡೆಗೆ ಸಾಗಿ ಮಹಾರಾಷ್ಟ್ರದ ಮುಂಬೈನಲ್ಲಿ ಮುಕ್ತಾಯವಾಗಲಿದೆ ಎಂದು ಹೇಳಲಾಗಿದೆ. ರಾಹುಲ್ ಗಾಂಧಿಯವರ ಭಾರತ ನ್ಯಾಯ … Continued

ನೀವೇಕೆ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ….: ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ನಂತರ ರಾಜ್ಯ ನಾಯಕರನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಷ್ಟ್ರೀಯ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋಲು ಗುರುವಾರ ನಡೆದ ಪಕ್ಷದ ಉನ್ನತ ನಾಯಕತ್ವದ ಸಭೆಯಲ್ಲಿ ಭಾರಿ ಮಹತ್ವ ಪಡೆದಿದ್ದು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಅಗತ್ಯವನ್ನು ರಾಹುಲ್ ಗಾಂಧಿ ಅವರು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ … Continued