‘ದೇಶದ್ರೋಹಿ’-‘ದೇಶದ ಶತ್ರು’ ; ರಾಹುಲ್ ಗಾಂಧಿ, ಕೇಂದ್ರ ಸಚಿವರ ಮಧ್ಯೆ ಮಾತಿನ ಚಕಮಕಿ

ನವದೆಹಲಿ: ಗುರುವಾರ (ಜನವರಿ 4) ಬೆಳಿಗ್ಗೆ ಸಂಸತ್ತಿನ ಆವರಣದಲ್ಲಿ ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಅಧಿವೇಶನಕ್ಕೂ ಮುನ್ನ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿ ಅವರು ಮಾಜಿ ಕಾಂಗ್ರೆಸ್ ನಾಯಕರಾದ ಬಿಟ್ಟು ಅವರನ್ನು “ನನ್ನ ದೇಶದ್ರೋಹಿ ಗೆಳೆಯ” … Continued

ಈಗ ಲೋಕಸಭೆ ಚುನಾವಣೆ ನಡೆದರೆ ಗೆಲ್ಲುವುದು ಯಾರು..? : ʼಮೂಡ್ ಆಫ್ ದಿ ನೇಷನ್ʼ ಸರ್ವೆ ಏನು ಹೇಳುತ್ತದೆ…?

2025ರಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಚುನಾವಣಾ ಪ್ರಾಬಲ್ಯವನ್ನು ಮುಂದುವರೆಸಿತು, ದೆಹಲಿ ಮತ್ತು ಬಿಹಾರದಲ್ಲಿ ಗೆಲುವು ಸಾಧಿಸಿತು.  ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಮತ್ತು ಮಹಾರಾಷ್ಟ್ರದ ಇತರ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಭಾರೀ ಗೆಲುವಿನೊಂದಿಗೆ 2026 ಪ್ರಾರಂಭವಾಯಿತು. ಇದೇವೇಳೆ ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಈಗ … Continued

ದೆಹಲಿಯ ಕಾಂಗ್ರೆಸ್‌ ಸಭೆಗೆ ಗೈರು : ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ಕೇರಳದಲ್ಲೇ ಉಳಿದ ಶಶಿ ತರೂರ್

ನವದೆಹಲಿ/ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆ ಕುರಿತು ಚರ್ಚಿಸಲು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕರೆದಿದ್ದ ಮಹತ್ವದ ಸಭೆಗೆ ಸಂಸದ ಶಶಿ ತರೂರ್ ಗೈರಾಗಿದ್ದಾರೆ. ಇದು ಪಕ್ಷದೊಳಗೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ರಾಹುಲ್ ಗಾಂಧಿ ಮತ್ತು ಪಕ್ಷದ ನಾಯಕತ್ವದ ಮೇಲೆ ತರೂರ್ ಅಸಮಾಧಾನಗೊಂಡಿದ್ದಾರೆ ಎಂಬ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿವೆ.  ಆರಂಭದಲ್ಲಿ ತರೂರ್ ಅವರು ತಮಗೆ … Continued

ಜರ್ಮನ್ ಚಾನ್ಸಲರ್ ನಿರ್ಲಕ್ಷಿಸಿ ರಾಹುಲ್ ಗಾಂಧಿ ಸ್ವಾಗತಕ್ಕೆ ಸಿಎಂ, ಡಿಸಿಎಂ ಆದ್ಯತೆ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಜರ್ಮನ್ ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್ ಅವರ ಸ್ವಾಗತಕ್ಕೆ ಸಚಿವರೊಬ್ಬರನ್ನು ನಿಯೋಜಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಳ್ಳಲು ಮೈಸೂರು ವಿಮಾನ ನಿಲ್ದಾಣಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಕಾಂಗ್ರೆಸ್‌ಗೆ ‘ಹೈಕಮಾಂಡ್ ಓಲೈಕೆ’ಯೇ ಮುಖ್ಯವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಜರ್ಮನ್ ಚಾನ್ಸಲರ್ … Continued

‘ಸುಳ್ಳು ಹೇಳುತ್ತಲೇ ಇರುತ್ತಾರೆ….’: ಕಾಂಗ್ರೆಸ್ ಸರ್ಕಾರದ ಸಮೀಕ್ಷೆ ಮುಂದಿಟ್ಟು ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ‘ಮತ ಕಳ್ಳತನ’ದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರಿಗೆ ಈಗ ಸ್ವಪಕ್ಷದ ಸರ್ಕಾರವಿರುವ ಕರ್ನಾಟಕದಲ್ಲೇ ಇರಿಸುಮುರಿಸಾಗುವ ಸಮೀಕ್ಷೆ ಹೊರಬಿದ್ದಿದೆ. ರಾಜ್ಯ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಶೇ. 83ಕ್ಕೂ ಹೆಚ್ಚು ಜನ ಎವಿಎಂ ಮತಯಂತ್ರಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದು, ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ತೀವ್ರ … Continued

ರಾಹುಲ್ ಗಾಂಧಿ ಶ್ರೀರಾಮನ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದ ನಾನಾ ಪಟೋಲೆ ; ಇದು “ಅತಿರೇಕದ ಚಮಚಾಗಿರಿ” ಎಂದ ಬಿಜೆಪಿ

ನವದೆಹಲಿ : ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರು ರಾಹುಲ್ ಗಾಂಧಿ ಅವರನ್ನು ಭಗವಾನ್ ಶ್ರೀರಾಮನಿಗೆ ಹೋಲಿಸಿರುವುದು ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪಟೋಲೆ ಅವರ ಈ ಹೇಳಿಕೆಯನ್ನು ಬಿಜೆಪಿ “ಅತಿರೇಕದ ಚಮಚಾಗಿರಿ” (Sycophancy Pro Max) ಎಂದು ಟೀಕಿಸಿದೆ. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯಾದ ನಂತರ ರಾಹುಲ್ ಗಾಂಧಿ ಅವರು ಅಲ್ಲಿಗೆ ಭೇಟಿ ನೀಡದಿರುವ … Continued

ನಿನ್ನೆ ನೀವು ಸರಿಯಾಗಿ ನಡೆದುಕೊಂಡಿಲ್ಲ…: ಆರ್‌ ಎಸ್‌ಎಸ್-ಬಿಜೆಪಿ ಹೊಗಳಿದ್ದ ದಿಗ್ವಿಜಯ ಸಿಂಗ್ ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನವದೆಹಲಿ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರು ಭಾನುವಾರ ಕಾಂಗ್ರೆಸ್ ಪ್ರಧಾನ ಕಚೇರಿಯಾದ ಇಂದಿರಾ ಭವನದಲ್ಲಿ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರನ್ನು ವೈಯಕ್ತಿಕವಾಗಿ ಭೇಟಿಯಾದರು. ಅವರ ಸಂಕ್ಷಿಪ್ತ ಮಾತುಕತೆ ಶೀಘ್ರದಲ್ಲೇ ಪಕ್ಷದ ವಲಯಗಳಲ್ಲಿ ಚರ್ಚೆಯ ವಿಷಯವಾಯಿತು. ಭಾನುವಾರ ಇಂದಿರಾ ಭವನದಲ್ಲಿ ನಡೆದ ಸಂಸ್ಥಾಪನಾ ದಿನಾಚರಣೆಯ ನಂತರ, ನಾಯಕರೆಲ್ಲರೂ ಚಹಾ ಮತ್ತು … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ ; ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ದೂರನ್ನು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಜಾರಿ ನಿರ್ದೇಶನಾಲಯ (ED) ಈಗ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಈ ಅರ್ಜಿಯು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಲೈವ್‌ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ : ರಾಹುಲ್, ಸೋನಿಯಾ ಗಾಂಧಿಗೆ ರಿಲೀಫ್

ನವದೆಹಲಿ : ನ್ಯಾಷನಲ್ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯವು  ರಿಲೀಫ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ED) ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ಮಂಗಳವಾರ ನಿರಾಕರಿಸಿದೆ. ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ಅವರು ಈ … Continued

ʼವೋಟ್ ಚೋರಿʼ ; ನಾಳೆ (ಡಿ.14) ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್‌ ರ‍್ಯಾಲಿ

ನವದೆಹಲಿ : ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ `ವೋಟ್ ಚೋರಿ’ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಭಾನುವಾರ (ಡಿ.14) ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ `ವೋಟ್ ಚೋರ್ ಗದ್ದಿ ಛೋಡ್ ಮಹಾ ರ‍್ಯಾಲಿ’ ಆಯೋಜಿಸಿದೆ. ಈ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ … Continued