ಬೆಂಗಳೂರು : ಕೇರಳ ಪೊಲೀಸರ ಕಾರ್ಯಾಚರಣೆ ; 1 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ

ಬೆಂಗಳೂರು : ಅಂತಾರಾಜ್ಯ ಮಾದಕವಸ್ತು ಜಾಲದ ವಿರುದ್ಧ ಕೇರಳ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಅಸ್ಸಾಂ ಮೂಲದ ಪೆಡ್ಲರ್ ಧೀರೇಶ ಕುಟುಮ್ (27) ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಮಾದಕವಸ್ತು ನಿಗ್ರಹ ದಳದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಕಾಶ್ಮೀರ್ ಟೈಮ್ಸ್’ ಕಚೇರಿ ಮೇಲೆ ಎಸ್‌ ಐಎ ದಾಳಿ ; ಗುಂಡುಗಳು, ಕಾರ್ಟ್ರಿಡ್ಜ್‌ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರ ರಾಜ್ಯ ತನಿಖಾ ಸಂಸ್ಥೆ (SIA) ಗುರುವಾರ ಜಮ್ಮುವಿನಲ್ಲಿರುವ ‘ಕಾಶ್ಮೀರ್ ಟೈಮ್ಸ್’ ಪತ್ರಿಕೆಯ ಕಚೇರಿ ಮೇಲೆ ದಾಳಿ ನಡೆಸಿದೆ. ದೇಶ ವಿರೋಧಿ ಚಟುವಟಿಕೆಗಳನ್ನು ಉತ್ತೇಜಿಸುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಈ ವೇಳೆ ಎಕೆ ರೈಫಲ್‌ನ ಕಾರ್ಟ್ರಿಜ್‌ಗಳು, ಪಿಸ್ತೂಲ್‌ ಗುಂಡುಗಳು ಮತ್ತು ಹ್ಯಾಂಡ್ ಗ್ರೆನೇಡ್ ಪಿನ್‌ಗಳು … Continued

ನಿವೃತ್ತ ಎಂಜಿನಿಯರ್‌ ನ ಐಷಾರಾಮಿ ಸಾಮ್ರಾಜ್ಯ : ಪತ್ತೆಯಾಯ್ತು ಕೇಜಿ ಗಟ್ಟಲೆ ಚಿನ್ನ-ಬೆಳ್ಳಿ, ಐಷಾರಾಮಿ ಕಾರುಗಳು, 17 ಟನ್ ಜೇನುತುಪ್ಪ…!

ಭೋಪಾಲ (ಮಧ್ಯಪ್ರದೇಶ): ಭೋಪಾಲ ನಗರದಲ್ಲಿ ಲೋಕೋಪಯೋಗಿ ಇಲಾಖೆಯ (PWD) ನಿವೃತ್ತ ಮುಖ್ಯ ಇಂಜಿನಿಯರ್ ಜಿ.ಪಿ. ಮೆಹ್ರಾ ಅವರ ನಿವಾಸ ಮತ್ತು ಆಸ್ತಿಗಳ ಮೇಲೆ ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಲೋಕಾಯುಕ್ತ ನಡೆಸಿದ ದಾಳಿಯ ನಂತರ ಅಲ್ಲಿ ಪತ್ತೆಯಾದ ಸಂಪತ್ತು ನೋಡಿ ಲೋಕಾಯುಕ್ತವೇ ಬೆಚ್ಚಿಬಿದ್ದಿದೆ…! ಹೆಚ್ಚಿನ ಆಸ್ತಿಗಳ ತನಿಖೆಯು, ಮಧ್ಯಪ್ರದೇಶದ ರಾಜ್ಯದಲ್ಲಿ ಇತ್ತೀಚಿನ ವರ್ಷಗಳ ಅತ್ಯಂತ ಸಂಚಲನ ಮೂಡಿಸಿದ  … Continued

ಧರ್ಮಸ್ಥಳ ಪ್ರಕರಣ | ಮಹೇಶ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಎಸ್‌ಐಟಿ ದಾಳಿ : ಆರೋಪಿ ಚಿನ್ನಯ್ಯನ ಮೊಬೈಲ್‌ ಪತ್ತೆ…?

ಮಂಗಳೂರು : ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪದ ಮೇಲೆ ಉಜಿರೆಯಲ್ಲಿರುವ ಮಹೇಶ ಶೆಟ್ಟಿ ತಿಮರೋಡಿ ಅವರ ನಿವಾಸದ ಮೇಲೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ (ಆಗಸ್ಟ್ 26) ದಾಳಿ ನಡೆಸಿದೆ ಎಸ್‌ಐಟಿಯಿಂದ ಬೆಳಿಗ್ಗೆ 9:20 ರ ಸುಮಾರಿಗೆ ದಾಳಿ ನಡೆದಿದ್ದು, … Continued

2,000 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣ : ಅನಿಲ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಸಿಬಿಐ ದಾಳಿ ; ಮೂಲಗಳು

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಸಿಒಎಂ) ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಆರ್‌ಕಾಮ್ ಮತ್ತು … Continued

ಕಾರವಾರ : ಶಾಸಕ ಸತೀಶ ಸೈಲ್ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ: ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದ್ದು, ಸದಾಶಿವಗಡದಲ್ಲಿರುವ ಅವರ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ನಾಲ್ಕು ಕಾರುಗಳಲ್ಲಿ ಬಂದಿರುವ ಇ.ಡಿ.ಅಧಿಕಾರಿಗಳ ತಂಡವು … Continued

ವೀಡಿಯೊ…| ಭ್ರಷ್ಟಾಚಾರ ನಿಗ್ರಹ ದಳದ ದಾಳಿ ವೇಳೆ ಕಿಟಕಿಯಿಂದ ಹಣ ಎಸೆದ ಇಂಜಿನಿಯರ್‌ ; 2.1 ಕೋಟಿ ರೂ. ಪತ್ತೆ

ಭುವನೇಶ್ವರ : ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಶುಕ್ರವಾರ ಭುವನೇಶ್ವರದ ಗ್ರಾಮೀಣ ಕಾಮಗಾರಿ ಇಲಾಖೆಯ ಮುಖ್ಯ ಎಂಜಿನಿಯರ್ (ಯೋಜನಾ ರಸ್ತೆಗಳು) ಬೈಕುಂಠನಾಥ ಸಾರಂಗಿ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ನಡೆಸಿದ ದಾಳಿಯ ಸಂದರ್ಭದಲ್ಲಿ 2.1 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ ಹೊಂದಿರುವ ಆರೋಪದ ನಂತರ ಈ ದಾಳಿಗಳನ್ನು ನಡೆಸಲಾಯಿತು. … Continued

ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ ಬಾಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ಇಡಿ (ED) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಗುಂಪು…!

ನವದೆಹಲಿ: ಆಪಾದಿತ ಮದ್ಯ ಹಗರದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಮುಂಜಾನೆ, ಇಡಿಯು ಆಪಾದಿತ ಮದ್ಯ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಬೂಪೇಶ … Continued

ಮೈಸೂರಿನ ಮುಡಾ ಕಚೇರಿ ಮೇಲೆ ಇ.ಡಿ. ದಾಳಿ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತಾ ಸಂಕಷ್ಟ..?

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 20 ಮಂದಿ ಇ.ಡಿ. ಅಧಿಕಾರಿಗಳು ಗುರುವಾರ ಮುಡಾ ಕಚೇರಿ ಆರಂಭದ ಹೊತ್ತಿಗೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳ ಪರಿಶೀಲನೆ … Continued

ಬೆಳಗಾವಿ ಜಿಲ್ಲೆ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ : ನಿಪ್ಪಾಣಿಯ ಕೋಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತರ ದಾಳಿ ನಡೆದಿದೆ. ಅದರಂತೆ ಬೆಳಗಾವಿ ಜಿಲ್ಲೆಬೆಯಲ್ಲೂ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಚೆಕ್ ಪೋಸ್ಟ್ ನಲ್ಲಿ ಲಾರಿ ಚಾಲಕರಿಂದ … Continued