ಕರ್ನಾಟಕದ ಪಶ್ಚಿಮ ಘಟ್ಟದ ಮಂಜಿನ ಮಧ್ಯೆ ಕಿತ್ತಳೆ ಹಾವಿನಂತೆ ಸಾಗಿದ ʼವಂದೇ ಭಾರತʼ ರೈಲು ; ಅದ್ಭುತ ವಿಡಿಯೊಕ್ಕೆ ಭಾರೀ ಮೆಚ್ಚುಗೆ

ಬೆಂಗಳೂರು : ಪಶ್ಚಿಮ ಘಟ್ಟದ ದಟ್ಟ ಹಸಿರು ಕಾಡುಗಳು, ಎತ್ತರದ ಪರ್ವತಗಳು ಹಾಗೂ ಮಳೆಗಾಲದ ಮಂಜಿನ ಹೊದಿಕೆಯ ನಡುವೆ ಕಿತ್ತಳೆ-ಬಿಳಿ ಬಣ್ಣದ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸಾಗುತ್ತಿರುವ ಮನಮೋಹಕ ವೈಮಾನಿಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿವೆ. ಎಫ್‌ಪಿವಿ (FPV) ಕ್ರಿಯೇಟರ್‌ @hemisphere.fpv ಸೆರೆಹಿಡಿದ ಈ ಸಿನೆಮಾಟಿಕ್ ಡ್ರೋನ್ ವಿಡಿಯೊವನ್ನು ಕೇಂದ್ರ ರೈಲ್ವೆ … Continued

ಸಕಲೇಶಪುರ : ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ; ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ

ಹಾಸನ: ಸಕಲೇಶಪುರ ತಾಲ್ಲೂಕಿನ ಯಡಕುಮರಿ ಮತ್ತು ಶಿರಿವಾಗಿಲು ರೈಲು ನಿಲ್ದಾಣಗಳ ನಡುವಿನ ರೈಲ್ವೆ ಹಳಿಯ ಮೇಲೆ ಶನಿವಾರ ರಾತ್ರಿ 8:45ರ ಸುಮಾರಿಗೆ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಆ ಮಾರ್ಗದ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಘಟನೆ ಕುರಿತು ಮಾಹಿತಿ ನೀಡಿರುವ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ, “ಭೂಕುಸಿತ ಸಂಭವಿಸಿದ … Continued

ವಿಡಿಯೊ | ಮುರುಡೇಶ್ವರ : ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಸಿಬ್ಬಂದಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಪ್ರಯಾಣಿಕನೊಬ್ಬ ಕಾಲು ಜಾರಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೆ ಸಿಬ್ಬಂದಿ ಎಳೆದು ಪಾರುಮಾಡಿದ ವಿದ್ಯಮಾನ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕೊಚ್ಚಿವಲ್ಲಿಯಿಂದ ಗಂಗಾನಗರಕ್ಕೆ ಹೋಗುತ್ತಿದ್ದ ರೈಲು ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗಿತ್ತು.  ನಂತರ … Continued

ವಿವಿಧ ಕೋಚ್‌ ಗಳಿಗೆ ರೈಲು ಟಿಕೆಟ್‌ ದರ ಹೆಚ್ಚಳ

ನವದೆಹಲಿ: ರೈಲ್ವೆ ಇಲಾಖೆಯು ಡಿಸೆಂಬರ್ 26 ರಿಂದ ಜಾರಿಗೆ ಬರುವಂತೆ ಪ್ರಯಾಣ ದರವನ್ನು ಹೆಚ್ಚಿಸಿದೆ. ಉಪನಗರ (Suburban) ರೈಲು ಪ್ರಯಾಣದ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲವಾದರೂ, ಸುದೀರ್ಘ ಪ್ರಯಾಣದ ದರಗಳು ಏರಿಕೆಯಾಗಲಿವೆ. ಸಾಮಾನ್ಯ ದರ್ಜೆ (General Class): 215 ಕಿ.ಮೀ ವರೆಗಿನ ಪ್ರಯಾಣಕ್ಕೆ ದರದಲ್ಲಿ ಏರಿಕೆ ಇಲ್ಲ. ಆದರೆ 215 ಕಿ.ಮೀ ಗಿಂತ ಹೆಚ್ಚಿನ ದೂರದ … Continued

ವೀಡಿಯೊ..| ರೈಲಿನ ಕಿಟಕಿಗೆ ಗುದ್ದಿ ಕ್ಯಾಬಿನ್‌ ಒಳಗೆ ನುಗ್ಗಿದ ಹದ್ದು: ಲೋಕೋ ಪೈಲಟ್‌ಗೆ ಗಾಯ

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ಹದ್ದು ರೈಲಿನ ಮುಂಭಾಗದ ಕಿಟಕಿಯನ್ನು ಒಡೆದು ಕ್ಯಾಬಿನ್‌ನೊಳಗೆ ಇಳಿದ ಪರಿಣಾಮ ಒಬ್ಬ ಲೋಕೋ ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ರೈಲ್ವೆಗೆ ಸೇರಿದ ಈ ರೈಲು ಬಾರಾಮುಲ್ಲಾದಿಂದ ಬನಿಹಾಲ್‌ ಎಂಬಲ್ಲಿಗೆ ಪ್ರಯಾಣಿಸುತ್ತಿತ್ತು. ಈ ಸಂದರ್ಭದಲ್ಲಿ ಬಿಜ್‌ಬೆಹರಾ ಮತ್ತು ಅನಂತನಾಗ್ ರೈಲು ನಿಲ್ದಾಣಗಳ ನಡುವೆ … Continued

ಐಆರ್‌ ಸಿಟಿಸಿ ಹಗರಣ: ಲಾಲು, ತೇಜಸ್ವಿ ಯಾದವ್, ರಾಬ್ಡಿ ದೇವಿ ವಿರುದ್ಧ ನ್ಯಾಯಾಲಯ ಆರೋಪ ನಿಗದಿ

 ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿ ಯಾದವ್ ಮತ್ತು ಇತರರ ವಿರುದ್ಧದ ಬಹುಚರ್ಚಿತ ಐಆರ್‌ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಇಂದು, ಸೋಮವಾರ (ಸೋಮವಾರ) ವಿವಿಧ ಕ್ರಿಮಿನಲ್ ಆರೋಪಗಳನ್ನು ನಿಗದಿಪಡಿಸಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಭ್ರಷ್ಟಾಚಾರ ನಿಯಂತ್ರಣ … Continued

ಬೆಂಗಳೂರು-ಮುಂಬೈ ಮಧ್ಯೆ ನೂತನ ಸೂಪರ್‌ ಫಾಸ್ಟ್ ರೈಲು ಆರಂಭಕ್ಕೆ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯವು ಅನುಮೋದನೆ ನೀಡಿದೆ. ಇದರಿಂದ ಸುಮಾರು 30 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆ ಬಹುತೇಕ ಈಡೇರುವ ಹಂತಕ್ಕೆ ಬಂದುನಿಂತಂತಾಗಿದೆ. ಬಿಜೆಪಿ ನಾಯಕ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ಈ ವಿಷಯ ಪ್ರಕಟಿಸಿದ್ದಾರೆ. ಸಂಸತ್ತು, … Continued

ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಸಮ್ಮತಿ

ನವದೆಹಲಿ: ಕೇಂದ್ರ ಸರ್ಕಾರ ಗಣೇಶ ಹಬ್ಬದ ವೇಳೆ ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದು ಹೇಳಿದೆ. ʼಹುಬ್ಬಳ್ಳಿ-ಜೋಧಪುರʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ … Continued

ವೀಡಿಯೊ..| ರೈಲಿನ ಹವಾನಿಯಂತ್ರಣದ ಬಗ್ಗೆ ದೂರು ನೀಡಿದ್ರೆ ತಪಾಸಣೆ ವೇಳೆ ಎಸಿ ಡಕ್ಟ್‌ನಲ್ಲಿ ಮದ್ಯದ ಬಾಟಲಿಗಳು ಪತ್ತೆ…!

ನವದೆಹಲಿ: ಲಕ್ನೋ-ಬರೌನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹವಾನಿಯಂತ್ರಣ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸದ ಬಗ್ಗೆ ದಿನನಿತ್ಯದ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆಗೆ ಹೋದಾಗ ಎಸಿ-2 ಟೈರ್ ಕೋಚ್‌ನ ಎಸಿ ಡಕ್ಟ್‌ನಲ್ಲಿ ಅಡಗಿಸಿಟ್ಟಿದ್ದ ನೂರಾರು ವಿಸ್ಕಿ ಬಾಟಲಿಗಳು ಪತ್ತೆಯಾಗಿವೆ. ಪ್ರಯಾಣಿಕರು ಕೂಲಿಂಗ್ ವ್ಯವಸ್ಥೆಯಲ್ಲಿನ ತೊಂದರೆ ಇರುವ ವರದಿ ಮಾಡಿದಾಗ ಇದು ಬೆಳಕಿಗೆ ಬಂದಿದೆ. ದೂರಿನ ನಂತರ ತಾಂತ್ರಿಕ ತಪಾಸಣೆ ನಡೆಸಿದಾಗ 32 … Continued

ಕರ್ನಾಟಕಕ್ಕೆ 42,517 ಕೋಟಿ ರೂ. ವೆಚ್ಚದ 25 ರೈಲ್ವೆ ಯೋಜನೆಗಳು ಮಂಜೂರು : ರೈಲ್ವೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಕರ್ನಾಟಕದಲ್ಲಿ ರೈಲು ಸಂಪರ್ಕವನ್ನು ಹೆಚ್ಚಿಸಲು ಭಾರತೀಯ ರೈಲ್ವೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಆದಾಗ್ಯೂ, ಭೂಸ್ವಾಧೀನದ ವಿಳಂಬದಿಂದಾಗಿ ಅನೇಕ ಯೋಜನೆಗಳು ವಿಳಂಬವಾಗುತ್ತಿವೆ. ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಅಜಯ್ ಮಾಕನ್ ಅವರ ನಕ್ಷತ್ರ ಚಿಹ್ನೆಯ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಹೆಚ್ಚಿಸಲು, ಭಾರತೀಯ ರೈಲ್ವೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. … Continued