‘ತುಂಬಿದ ಕೊಡ ತುಳಕಿತಲೇ ಪರಾಕ್..’ : ಮೈಲಾರಲಿಂಗೇಶ್ವರ ಸ್ವಾಮಿಯ ದೈವವಾಣಿ

ವಿಜಯನಗರ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಪ್ರಸಕ್ತ ವರ್ಷದ ದೈವವಾಣಿ ಕಾರ್ಣಿಕರ ನುಡಿ ಹೊರಬಿದ್ದಿದ್ದು, ‘ತುಂಬಿದಕೊಡ ತುಳುಕೀತಲೇ ಪರಾಕ್’ ಎಂದು ಗೊರವಯ್ಯ ರಾಮಪ್ಪಜ್ಜ ಕಾರ್ಣಿಕ ನುಡಿದಿದ್ದಾರೆ. ರಾಜ್ಯದ ಭವಿಷ್ಯವಾಣಿ ಎಂದೇ ಪರಿಗಣಿಸುವ ಮೈಲಾರಲಿಂಗೇಶ್ವರ ಕಾರ್ಣಿಕ ಕೇಳಲು ಮೈಲಾರ ಸುಕ್ಷೇತ್ರದ ಡೆಂಕನಮರಡಿಯಲ್ಲಿ ರಾಜ್ಯ-ಹೊರ ರಾಜ್ಯದ ಹಲವೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಅವರ ಸಮ್ಮುಖದಲ್ಲಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನ ಮಳೆಯ ಮುನ್ಸೂಚನೆ

ಬೆಂಗಳೂರು : ಹವಾಮಾನ ಇಲಾಖೆಯು ದಕ್ಷಿಣ ಭಾರತದ ಹೆಚ್ಚಿನ ರಾಜ್ಯಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಅದು ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡು … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಮಳೆಯ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆಗ್ನೇಯ ಮತ್ತು ನೈರುತ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆಯ ಇದ್ದು, ಸಮುದ್ರ ಮಟ್ಟದಿಂದ 3.1 ಕಿ.ಮೀ.ವರೆಗೆ ವಿಸ್ತರಿಸಿದೆ. ಜನವರಿ 13 ಮತ್ತು 14ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ

ಹೈದರಾಬಾದ್‌: ಡಿಸೆಂಬರ್‌ 23ರಿಂದ ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಡಿಸೆಂಬರ್‌ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, … Continued

ಡಿಸೆಂಬರ್ 17 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ : ಮುನ್ಸೂಚನೆ

ಬೆಂಗಳೂರು: ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಡಿ.17 ರಿಂದ ಮೂರು ದಿನ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.17 ರಂದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಮೈಸೂರು, ಚಾಮರಾಜನಗರ, … Continued

ಭಾರಿ ಮಳೆ ಮುನ್ಸೂಚನೆ; ತಮಿಳುನಾಡಿನ 11 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಚೆನ್ನೈ: ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ತಮಿಳುನಾಡಿನ ಇತರ 10 ಜಿಲ್ಲೆಗಳಲ್ಲಿ ಇಂದು, ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೈಋತ್ಯ ಬಂಗಾಳ ಕೊಲ್ಲಿಯಲ್ಲಿ “ವಾಯುಭಾರ ಕುಸಿತ” ದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭಾರಿ ಮಳೆಯಾಗಲಿದೆ ಎಂದು‌ ಎಚ್ಚರಿಕೆಯನ್ನು ನೀಡಿದೆ. ಚೆನ್ನೈ, ವಿಲ್ಲುಪುರಂ, ತಂಜಾವೂರು, ಮೈಲಾಡುತುರೈ, ಪುದುಕ್ಕೊಟ್ಟೈ, … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ; ಹಳದಿ ಅಲರ್ಟ್‌ ಘೋಷಣೆ

ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪೂರ್ವ ಹಿಂದೂ ಮಹಾಸಾಗರ ವಲಯಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪರಿಚಲನೆಗಳಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 12 ಮತ್ತು 13 … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆ ; ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತದ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಲವೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 4-5 ದಿನ ಮಳೆ ; ಮುನ್ಸೂಚನೆ

ಬೆಂಗಳೂರು ; ಫೆಂಗಲ್ ಚಂಡಮಾರುತದ ದುರ್ಬಲವಾಗುತ್ತಿದೆ, ಆದರೆ ಕರ್ನಾಟಕದಲ್ಲಿ ಅದರ ಪ್ರಭಾವದಿಂದ ಮಳೆ ಬೀಳುತ್ತಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಡಿಸೆಂಬರ್ 9ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, … Continued

ಫೆಂಗಲ್ ಚಂಡಮಾರುತದಿಂದ ಭಾರಿ ಮಳೆ ; ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ

ಮಂಗಳೂರು : ಫೆಂಗಲ್ ಚಂಡಮಾರುತ ಪರಿಣಾಮದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ರಸ್ತೆ ಕುಸಿದಿದೆ. ರಸ್ತೆ ಅಗೆದ ಕಾರಣದಿಂದ ಗುಂಡಿಯಲ್ಲಿ ಮಳೆ ನೀರು ಶೇಖರಣೆಯಾಗಿ ಹೆದ್ದಾರಿ ಕುಸಿದಿದೆ ಎಂದು ಹೇಳಲಾಗಿದೆ. ಬೈಕ್, ಕಾರು, ಲಾರಿಗಳು ಸಂಚರಿಸುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ರಸ್ತೆ ಕುಸಿದಿದೆ. ಭಾರೀ ಅನಾಹುತ ತಪ್ಪಿದೆ … Continued