ಕರ್ನಾಟಕದಲ್ಲಿ ಇಂದಿನಿಂದ (ಮೇ19) 5 ದಿನ ಧಾರಾಕಾರ ಮಳೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ಭಾನುವಾರ(ಮೇ 19)ದಿಂದ ಐದು ದಿನ 17 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ … Continued

ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

 ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಶನಿವಾರ (ಮೇ 18)ರಂದು ಸಿಡಿಲು ಬಡಿದು ಏಳು ಹಸುಗಳು ಸಾವಿಗೀಡಾಗಿವೆ ಎಂದು ವರದಿಯಾಗಿದೆ. ಶನಿವಾರ 4 ಗಂಟೆಗೆ ಸುಮಾರಿಗೆ ಸುರಿದ ಭಾರಿ ಮಳೆಯ ಸಮಯದಲ್ಲಿ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಸಿಡಿಲು ಬಡಿದು ಬೂರಿಯಾ ಕನ್ನಾ ನಾಯ್ಕ ಎಂಬವರಿಗೆ ಸೇರಿದ 2 … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರದ ವರೆಗೆ ಜೋರಾಗಿ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಸುಮಾರು 10 ಜಿಲ್ಲೆಗಳಲ್ಲಿ ಇಂದಿನಿಂದ (ಮೇ 15) ಒಂದು ವಾರ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗಲಿದೆ. ಮಳೆಯ … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued

ಕರ್ನಾಟಕದಲ್ಲಿ ಮೇ 13ರಿಂದ ಎರಡ್ಮೂರು ದಿನ ಜೋರು ಮಳೆ ಸಾಧ್ಯತೆ ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಹಾಗೂ ಭಾನುವಾರ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಮಳೆ ಸುರಿದಿದೆ. ಮೇ 13ರಿಂದ ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವವಿದ್ದು, ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, … Continued

ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೇ 7ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ … Continued

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ 3-4 ದಿನ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದಾರು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು ಹಾಗೂ ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 4ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು -ಸಿಡಿಲಿನಿಂದ ಕೂಡಿದ ಮಳೆಯಾಗಬಹುದು. ಅಲ್ಲದೆ, … Continued

ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟ ರಾಜಧಾನಿ ಬೆಂಗಳೂರು ಜನತೆಗೆ ಮಳೆರಾಯ ಬುಧವಾರ ಕೊಂಚ ತಂಪೆರೆದಿದ್ದಾನೆ. ನಗರದ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಜನ ಕೊಂಚ ರಿಲೀಫ್ ಆಗಿದ್ದಾರೆ. ಸುಮಾರು 5 ತಿಂಗಳ ಬಳಿಕ ಬೆಂಗಳೂರಿನಲ್ಲಿ ಜೋರಾಗಿ ಮಳೆಯಾಗಿದೆ. ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆಯು ತುಸು ಕಾಲ ಜೋರಾಗಿ ಸುರಿಯಿತು. ಆ … Continued

ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಮಳೆ ಏಪ್ರಿಲ್‌ 30ರಿಂದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ ಏಪ್ರಿಲ್‌ 27, 28 ಮತ್ತು 29ರಂದು ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಏಪ್ರಿಲ್‌ 30 ರಿಂದ ಮೇ 3 ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಏಪ್ರಿಲ್‌ 30ರಂದು ಬೀದರ, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, … Continued

ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ಕರಾವಳಿಯಲ್ಲಿ ಒಣಹವೆ ಮುಂದುವರಿದಿದ್ದರೆ, ಹಲವೆಡೆ ಮಳೆಯಾಗಿದೆ. ಏಪ್ರಿಲ್‌ 19 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, … Continued