ಚೆನ್ನೈ ರಾಜಭವನದ ಹೊರಗೆ ಪೆಟ್ರೋಲ್ ಬಾಂಬ್ ಎಸೆತ : ಓರ್ವನ ಬಂಧನ

ಚೆನ್ನೈ : ತಮಿಳುನಾಡಿನ ರಾಜಧಾನಿ ಚೆನ್ನೈನ ರಾಜಭವನದ ಹೊರಗೆ ಪೆಟ್ರೋಲ್ ಬಾಂಬ್ ಎಸೆದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ವಿನೋದ ಎಂದು ಗುರುತಿಸಲಾಗಿದೆ. ನೀಟ್ ಮಸೂದೆಗೆ ರಾಜ್ಯಪಾಲ ಟಿ.ಎನ್.ರವಿ ಅವರು ಒಪ್ಪಿಗೆ ನೀಡದ ಕಾರಣ ಪೆಟ್ರೋಲ್ ಬಾಂಬ್ ಎಸೆದಿರುವುದಾಗಿ ಆರೋಪಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಮೂರು ದಿನಗಳ ಹಿಂದಷ್ಟೆ ಈತ ಜೈಲಿನಿಂದ ಬಿಡುಗಡೆಯಾಗಿದ್ದ. … Continued