ಪತಿ ಜೊತೆ ಲಂಡನ್‌ ಗೆ ತೆರಳಲು 2 ದಿನದ ಹಿಂದೆ ಹುದ್ದೆಗೆ ರಾಜೀನಾಮೆ ನೀಡಿದ್ದ ವೈದ್ಯೆ ; ವಿಮಾನ ಅಪಘಾತದಲ್ಲಿ 3 ಮಕ್ಕಳು ಸೇರಿ ಇಡೀ ಕುಟುಂಬ ಸಾವು

ಅಹಮದಾಬಾದ್‌ನಲ್ಲಿ ಸಂಭವಿಸಿದ ವಿನಾಶಕಾರಿ ಏರ್ ಇಂಡಿಯಾ ವಿಮಾನ ಅಪಘಾತವು ಲಂಡನ್‌ನಲ್ಲಿ ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಹೊರಟಿದ್ದ ರಾಜಸ್ಥಾನದ ಬನ್ಸ್ವಾರಾದ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡಿತು. ಈ ವಿಮಾನ ಅಪಘಾತದಲ್ಲಿ ರಾಜಸ್ತಾನದವರು 10 ಮಂದಿ ಸಾವಿಗೀಡಾಗಿದ್ದು, ಅವರಲ್ಲಿ ಐವರು ಡಾ. ಪ್ರತೀಕ್ ಜೋಶಿ ಕುಟುಂಬದವರು. ಪ್ರತೀಕ್ ಜೋಶಿ ಕಳೆದ ಆರು ವರ್ಷಗಳಿಂದ ಲಂಡನ್‌ನಲ್ಲಿ ವಾಸಿಸುತ್ತಿದ್ದರು. ಜೋಶಿ … Continued

ಐಎಸ್‌ಐ ಪರ ಬೇಹುಗಾರಿಕೆ, ಪಾಕಿಸ್ತಾನಕ್ಕೆ 7 ಬಾರಿ ಭೇಟಿ : ಸರ್ಕಾರಿ ನೌಕರನ ಬಂಧನ…

ಜೈಸಲ್ಮೇರ್‌ : ಮೇ 7-10 ರಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ದೇಶಾದ್ಯಂತ ಬೇಹುಗಾರಿಕೆ ಜಾಲಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಸರ್ಕಾರಿ ನೌಕರನನ್ನು ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಉದ್ಯೋಗಿಯನ್ನು ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಜೈಸಲ್ಮೇರ್‌ನಲ್ಲಿರುವ ಆತನ ಕಚೇರಿಯಲ್ಲಿ ಸಿಐಡಿ … Continued

ಡಾಕ್ಟರ್ ಡೆತ್‌ ! ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ…!!

ನವದೆಹಲಿ: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ … Continued

ಆಮಿಷ…ಮದುವೆ.. ನಂತರ ಚಿನ್ನಾಭರಣ-ಹಣದೊಂದಿಗೆ ಪಲಾಯನ…: ಕೊನೆಗೂ ಬಲೆಗೆಬಿದ್ದ 25 ಪುರುಷರನ್ನು ವಂಚಿಸಿದ್ದ ‘ಲೂಟಿಕೋರ ವಧು’…!

ಜೈಪುರ: ವಿವಾಹವಾಗಬೇಕು ಎಂದು ಬಯಸುತ್ತಿದ್ದ ಅಮಾಯಕರನ್ನು ವಂಚಿಸಿ ಲಕ್ಷಾಂತರ ಮೌಲ್ಯದ ಆಭರಣ ಮತ್ತು ನಗದು ಜೊತೆ ಪರಾರಿಯಾಗಿದ್ದಕ್ಕಾಗಿ ‘ಲೂಟಿಕೋರ ವಧು’ ಎಂದೇ ಕುಖ್ಯಾತಿ ಪಡೆದಿದ್ದ ಅನುರಾಧಾ ಪಾಸ್ವಾನ್ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆಕೆ ಹೊಸ ಹೆಸರು ಇಟ್ಟುಕೊಂಡು, ಅನೇಕ ಶಹರ ಮತ್ತು ಗುರುತನ್ನು ಬದಲಿಸಿಕೊಂಡು ಅನೇಕ ಬಾರಿ ಮದುವೆಯಾಗಿ ಆಭರಣ ಮತ್ತು ನಗದು ಜೊತೆ … Continued

ಗಣಿಗಾರಿಕೆ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೆ ಕೇಳದೇ ಇರಲು 20 ಲಕ್ಷ ರೂ. ಲಂಚ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಾಸಕ…!

ಜೈಪುರ: ರಾಜಸ್ತಾನ ವಿಧಾನಸಭೆಯಲ್ಲಿ ಮೂರು ಪ್ರಶ್ನೆಗಳನ್ನು ಕೇಳುವುದನ್ನು ಕೈಬಿಡಲು 20 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಭಾರತ್ ಆದಿವಾಸಿ ಪಕ್ಷದ ಶಾಸಕ ಜೈಕೃಷ್ಣ ಪಟೇಲ್ ಅವರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ACB) ಭಾನುವಾರ ಬಂಧಿಸಿದೆ ಎಂದು ಹಿರಿಯ ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಸ್ಥಾನದ ಎಸಿಬಿ (ACB) ಇತಿಹಾಸದಲ್ಲಿ ಶಾಸಕರೊಬ್ಬರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ … Continued

ದಂಪತಿ ಮಧ್ಯೆ ನಡೆದ ಜಗಳ ವಿಕೋಪಕ್ಕೆ ; ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡತಿ…!

ಆಘಾತಕಾರಿ ಘಟನೆಯೊಂದರಲ್ಲಿ ಗಂಡ-ಹೆಂಡಿರ ಮಧ್ಯೆ ನಡೆದ ಜಗಳದಲ್ಲಿ ಪತ್ನಿ ತನ್ನ ಪತಿಯ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಜಲಾವರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ 23 ವರ್ಷದ ರವಿನಾ ಸೈನ್ ಎಂಬ ಮಹಿಳೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು … Continued

ಪ್ರಧಾನಿ ಮೋದಿ ನನ್ನ ನೆಚ್ಚಿನ ನಟ ಎಂದು ಹೇಳಿಕೆ ನೀಡಿ ಬಿಜೆಪಿಯನ್ನೇ ಪೇಚಿಗೆ ಸಿಲುಕಿಸಿದ ರಾಜಸ್ಥಾನ ಸಿಎಂ…!

ಜೈಪುರ: ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಭಜನಲಾಲ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ನೆಚ್ಚಿನ ನಟ ಎಂದು ಹೇಳಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜಸ್ಥಾನ ಮುಖ್ಯಮಂತ್ರಿಗಳ ಈ ಹೇಳಿಕೆಗೆ ವಿಪಕ್ಷಗಳು ಬಿಜೆಪಿಯನ್ನು ಅಪಹಾಸ್ಯ ಮಾಡಿವೆ. ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ … Continued

ಮದುವೆ ಆಮಂತ್ರಣ ಕಾರ್ಡ್‌ ನಲ್ಲಿ ವಧು-ವರರ ಜನ್ಮ ದಿನಾಂಕ ಮುದ್ರಿಸುವುದನ್ನು ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ…! ಯಾಕೆಂದರೆ…

ಜೈಪುರ: ಬಾಲ್ಯವಿವಾಹಗಳನ್ನು ತಡೆಗಟ್ಟುವ ಸಲುವಾಗಿ ರಾಜಸ್ಥಾನ ಸರ್ಕಾರವು ವಧು-ವರರ ವಯಸ್ಸಿನ ಪುರಾವೆಗಳನ್ನು ಸಂಬಂಧಪಟ್ಟ ಕುಟುಂಬಗಳಿಂದ ಪಡೆಯುವಂತೆ ಮತ್ತು ಆಮಂತ್ರಣ ಪತ್ರಿಕೆಯಲ್ಲಿ ವಧು-ವರ ಇಬ್ಬರ ಜನ್ಮದಿನಾಂಕವನ್ನು ಮುದ್ರಿಸುವಂತೆ ಮುದ್ರಣಾಲಯಗಳಿಗೆ ಸೂಚಿಸಿದೆ. ಅಲ್ಲದೆ, ಬಾಲ್ಯ ವಿವಾಹಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಪ್ರಚಲಿತ ಕಾನೂನಿನ ವಿರುದ್ಧ ಜಾಗೃತಿ ಮೂಡಿಸಲು ಹಲ್ವಾಯಿಗಳು, ಪಂಡಿತರು, ಟೆಂಟ್ ಹೌಸ್‌ಗಳು, ಬ್ಯಾಂಡ್ ಟ್ರೂಪ್‌ಗಳು, … Continued

ರಾಜಸ್ಥಾನದ ಬಿಜೆಪಿ ಅಧ್ಯಕ್ಷರ ಎದುರೇ ಹೊಡೆದಾಡಿಕೊಂಡ ಇಬ್ಬರು ಬಿಜೆಪಿ ನಾಯಕರು ; ವೀಡಿಯೊ ವೈರಲ್‌

ಜೈಪುರ: ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ಅವರ ಸಮ್ಮುಖದಲ್ಲಿ ಬಿಜೆಪಿಯ ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದು, ಪರಸ್ಪರ ಕಪಾಳಮೋಕ್ಷ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುರುವಾರ ನಡೆದಿದೆ. ಬಿಜೆಪಿ ಅಲ್ಪಸಂಖ್ಯಾತ ಘಟಕದ ಸಭೆಯಲ್ಲಿ ಇಬ್ಬರು ಬಿಜೆಪಿ ನಾಯಕರ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ಇಬ್ಬರು ನಾಯಕರು ಪರಸ್ಪರ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಜಗಳ ನಡೆಯುತ್ತಿದ್ದಂತೆ … Continued

ಇದು ಪೈಸೆ ವಾಲಿ ಕಾರ್‌ | ಒಂದು ರೂಪಾಯಿ ನಾಣ್ಯದಿಂದಲೇ ಕಾರನ್ನು ಅಲಂಕರಿಸಿದ ವ್ಯಕ್ತಿ ; ವೀಡಿಯೊ ವೈರಲ್

ಈಗಿನ ಕಾಲಘಟ್ಟದಲ್ಲಿ ಜನರು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲು ಏನಾದರೂ ವಿಚಿತ್ರವಾದದ್ದನ್ನು ಮಾಡಲು ಯೋಚಿಸುತ್ತಾರೆ. ಈಗ ಇದೇ ತರಹ ಕಾರಿಗೆ ಸಂಬಂಧಿಸಿದ ವಿಡಿಯೋವೊಂದು ಹೊರಬಿದ್ದಿದೆ. ಈ ವೀಡಿಯೊದಲ್ಲಿ ವ್ಯಕ್ತಿಯೊಬ್ಬರು ಸಂಪೂರ್ಣ ಕಾರನ್ನು ಒಂದು ರೂ. ನಾಣ್ಯಗಳಿಂದ ಅಲಂಕರಿಸಿದ್ದಾರೆ. ಒಂದು ರೂಪಾಯಿ ನಾಣ್ಯದಿಂದ ಅಲಂಕರಿಸಲಾದ ಈ ಕಾರಿನ ವಿನ್ಯಾಸವನ್ನು ನೋಡಿದ ಜನರು ಅಚ್ಚರಿಪಟ್ಟಿದ್ದಾರೆ, ಇದಕ್ಕೆ ಕಾರಣ ನಾಣ್ಯಗಳನ್ನು … Continued