ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ರಾಜಸ್ಥಾನ ಸಂಸದ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ, ರಾಜಸ್ಥಾನದಿಂದ ಎರಡು ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ (ಮಾರ್ಚ್ 11) ಬಿಜೆಪಿ ಪ್ರಾಥಮಿಕ ಸದಸ್ಯತ್ವ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಅವರು ನವದೆಹಲಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿಯು ರಾಹುಲ್‌ ಕಸ್ವಾನ್ … Continued

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ; ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವು, ಪುತ್ರ-ಮೊಮ್ಮಗನಿಗೆ ಗಾಯ

ಜೈಪುರ: ಮಂಗಳವಾರ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಾಜಿ ಕೇಂದ್ರ ಸಚಿವ ಜಸ್ವಂತ ಸಿಂಗ್‌ ಪುತ್ರ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ಮಾನವೇಂದ್ರ ಸಿಂಗ್ ಅವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. 59 ವರ್ಷದ ಮಾನವೇಂದ್ರ ಸಿಂಗ್‌ ಕೂಡ ಕಾರಿನಲ್ಲಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದಾರೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಸಮಯದಲ್ಲಿ ಮಾನವೇಂದ್ರ ಸಿಂಗ್ … Continued

ಮಥುರಾದಲ್ಲಿ ಭವ್ಯ ಕೃಷ್ಣ ದೇವಾಲಯ ನಿರ್ಮಾಣ ಆಗುವವರೆಗೆ ದಿನಕ್ಕೆ ಒಂದೇ ಊಟ ಮಾಡುವ ಪ್ರತಿಜ್ಞೆ ಮಾಡಿದ ರಾಜಸ್ಥಾನದ ಸಚಿವ…!

ನವದೆಹಲಿ : ಶ್ರೀಕೃಷ್ಣನ ಜನ್ಮಸ್ಥಳವಾದ ಮಥುರಾದಲ್ಲಿ ಭವ್ಯ ಮಂದಿರ ನಿರ್ಮಾಣ ಆಗುವವರೆಗೆ ದಿನಕ್ಕೆ ಒಂದು ಹೊತ್ತು ಮಾತ್ರ ಊಟ ಮಾಡುವುದಾಗಿ ರಾಜಸ್ಥಾನದ ಶಿಕ್ಷಣ ಸಚಿವ ಮದನ ದಿಲಾವರ್ ಸೋಮವಾರ ಪ್ರತಿಜ್ಞೆ ಮಾಡಿದ್ದಾರೆ. “ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಿಸದಿದ್ದರೆ, ಇಂದಿನಿಂದ ನಾನು ದಿನಕ್ಕೆ ಒಂದು ಬಾರಿ ಮಾತ್ರ ಊಟ ಮಾಡುತ್ತೇನೆ” ಎಂದು ದಿಲಾವರ್ ಕೋಟಾದ ತಮ್ಮ … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಬಳಕೆ ಮಾಡಿದ್ದ ಸುಟ್ಟ ಫೋನ್ ಗಳ ಭಾಗಗಳು ರಾಜಸ್ಥಾನದಲ್ಲಿ ಪತ್ತೆ

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಸಂಸತ್‌ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿ ಲಲಿತ್‌ ಝಾ ನಾಶಪಡಿಸಿದ್ದ ಮೊಬೈಲ್‌ ಫೋನ್‌ಗಳ ಭಾಗಗಳನ್ನು ದೆಹಲಿ ಪೊಲೀಸರು ಭಾನುವಾರ ರಾಜಸ್ಥಾನದಲ್ಲಿ ವಶಪಡಿಸಿಕೊಂಡಿದ್ದಾರೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಎಲ್ಲಾ ಫೋನ್‌ಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಲೋಕಸಭೆ ಭದ್ರತಾ ಉಲ್ಲಂಘನೆ ಘಟನೆಯ ಮಾಸ್ಟರ್ ಮೈಂಡ್ ಲಲಿತ್ ಝಾ ಎಲ್ಲಾ ಆರೋಪಿಗಳ … Continued

ರಾಜಸ್ಥಾನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೂ ಮೊದಲು ತಂದೆ-ತಾಯಿಯ ಪಾದ ತೊಳೆದ ಭಜನಲಾಲ ಶರ್ಮಾ | ವೀಕ್ಷಿಸಿ

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೂ ಮೊದಲು ಭಜನಲಾಲ ಶರ್ಮಾ ಅವರು ಶುಕ್ರವಾರ ತಮ್ಮ ಮನೆಯಲ್ಲಿ ತಂದೆ ಸ್ವರೂಪ್ ಶರ್ಮಾ ಅವರ ಆಶೀರ್ವಾದ ಪಡೆದರು. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡ ವೀಡಿಯೊದಲ್ಲಿ ಅವರು ತಮ್ಮ ತಂದೆ-ತಾಯಿಯ ಪಾದಗಳನ್ನು ತೊಳೆಯುತ್ತಿರುವುದನ್ನು ಕಾಣಬಹುದು. ಶರ್ಮಾ ಶುಕ್ರವಾರ (ಡಿಸೆಂಬರ್‌ ೧೫) ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. … Continued

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ… ಈಗ ರಾಜಸ್ಥಾನದ ನೂತನ ಮುಖ್ಯಮಂತ್ರಿ : ಸಿಎಂ ಸ್ಥಾನಕ್ಕೆ ಹೆಸರು ಘೋಷಿಸಿದ ವಸುಂಧರಾ ರಾಜೇ

ಜೈಪುರ: ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜಸ್ಥಾನದ ಮುಖ್ಯಮಂತ್ರಿಯಾಗಿ ಸಂಗನೇರ್ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭಜಲಲಾಲ ಶರ್ಮಾ ಅವರು ರಾಜಸ್ಥಾನದ ನೂತನ ಮುಖ್ಯಮಂತ್ರಿ ಆಯ್ಕೆಯಾಗಿದ್ದಾರೆ. ರಾಜಸ್ಥಾನವು ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಮರಳಿದ ಪ್ರಮುಖ ರಾಜ್ಯವಾಗಿದೆ. ಇಂದು, ಸೋಮವಾರ ಬೆಳಿಗ್ಗೆ, ರಕ್ಷಣಾ ಸಚಿವ ರಾಜನಾಥ ಸಿಂಗ್ ನೇತೃತ್ವದಲ್ಲಿ ಮೂವರು … Continued

ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನದಲ್ಲಿ ಗೆದ್ದ ನಂತರ 17 ರಾಜ್ಯಗಳಿಗೆ ವಿಸ್ತರಿಸಿದ ಬಿಜೆಪಿ-ಮಿತ್ರ ಪಕ್ಷಗಳ ಆಡಳಿತ : ರಾಜ್ಯಗಳ ಪಟ್ಟಿ ಇಲ್ಲಿದೆ…

ನವದೆಹಲಿ: ಬಿಜೆಪಿಯು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಭಾರಿ ಜಯ ಸಾಧಿಸಿದೆ, ಈ ನಿರ್ಣಾಯಕ ʼಹಿಂದಿ-ಬೆಲ್ಟ್ʼ ರಾಜ್ಯಗಳಲ್ಲಿ ಮುಂದಿನ ರಾಜಕೀಯ ಭೂದೃಶ್ಯವನ್ನು ಗಮನಾರ್ಹವಾಗಿ ಮರುರೂಪಿಸಿದೆ. ಈ ಅಮೋಘ ವಿಜಯವು 2024 ರ ಲೋಕಸಭೆ ಚುನಾವಣೆಗೆ ಭಾರತದ ರಾಜಕೀಯ ಡೈನಾಮಿಕ್ಸ್‌ ಗೆ ಗಮನಾರ್ಹ ದಿಕ್ಸೂಚಿ ಎಂದೇ ಹೇಳಬಹುದು. ಈ ನಿರ್ಣಾಯಕ ಗೆಲುವುಗಳೊಂದಿಗೆ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು … Continued

ಕಾಂಗ್ರೆಸ್‌ಗೆ ಶಾಕ್‌ ನೀಡಿದ ʼಹಿಂದಿ ಬೆಲ್ಟ್‌; ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು, ತೆಲಂಗಾಣ ಕಾಂಗ್ರೆಸ್‌ ತೆಕ್ಕೆಗೆ, ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ

 ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಆಘಾತಕಾರಿ ಫಲಿತಾಂಶವಾಗಿದೆ . 2018ರಲ್ಲಿ ಗೆಲುವು ಸಾಧಿಸಿದ್ದ ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ ಸೋಲನುಭವಿಸಿದೆ. ದೇಶದ ‘ಹಿಂದಿ ಬೆಲ್ಟ್‌’ನ ಪ್ರಮುಖ 3 ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಆಘಾತ ನೀಡಿದ್ದಾರೆ . ಇದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ರಾಹುಲ್ ಗಾಂಧಿ … Continued

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ

ಪಂಚ ರಾಜ್ಯಗಳಿಗೆ ನಡೆದ ವಿದಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಮತ ಎಣಿಕೆ ಇಂದು ಭಾನುವಾರ ಬೆಳಿಗ್ಗೆ ಆರಂಭವಾಗಿದ್ದು, ಆರಂಭದ ಮತ ಎಣಿಕೆಯ ಟ್ರೇಂಡ್‌ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಹಾಗೂ ಕಾಂಗ್ರೆಸ್‌ ಒಂದು ರಾಜ್ಯದಲ್ಲಿ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂಛತ್ತೀಸ್ ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದಾರೆ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಛತ್ತೀಸ್ … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued