ಪಾಕ್ ಪರ ಘೋಷಣೆ ಪ್ರಕರಣ: ಸಂಸದ ಸೈಯದ್ ನಾಸಿರ್ ಹುಸೇನಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಪತ್ರ

ಬೆಂಗಳೂರು : ಕಳೆದ ವಾರ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಜಯಗಳಿಸಿದ ನಂತರ ವಿಧಾನಸಭೆಯೊಳಗೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಮೂವರನ್ನು ಬಂಧಿಸಿದ ಕೆಲವು ದಿನಗಳ ನಂತರ, ಈ ಪ್ರಕರಣದಲ್ಲಿ ತನಿಖೆ ಪೂರ್ಣವಾಗುವವರೆಗೂ ಸೈಯದ್ ನಾಸಿರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು … Continued

ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ಎಫ್​ಎಸ್​ಎಲ್​​ ವರದಿಯಲ್ಲಿ ದೃಢ: ಬಿಜೆಪಿ ಟ್ವೀಟ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ಸಿನ ಡಾ ನಾಸಿರ್‌ ಹುಸೇನ್ ಪರ ಬೆಂಬಲಿಗರು ವಿಧಾನಸೌಧ ಆವರಣದಲ್ಲಿ ಸಂಭ್ರಮಾಚರಣೆ ಮಾಡುವ ವೇಳೆ ‘ಪಾಕಿಸ್ತಾನ​ ಜಿಂದಾಬಾದ್​​ ಘೋಷಣೆ’ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ (FSL)​ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ “ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ … Continued

ರಾಜ್ಯಸಭೆ ಚುನಾವಣೆ | ನನಗೆ ಅನಾರೋಗ್ಯ ಇದ್ದ ಕಾರಣ ಮತದಾನ ಮಾಡ್ಲಿಕ್ಕೆ ಆಗ್ಲಿಲ್ಲ ; ಶಿವರಾಮ ಹೆಬ್ಬಾರ

ಯಲ್ಲಾಪುರ: ‘ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆಂದು ದಾಖಲಾಗಿದ್ದೆ, ಮತದಾನ ಮಾಡಲು ಆಗದೇ ಇರುವುದಕ್ಕೆ ನನಗೆ ಬೇಸರವಿದೆ. ಮಂಗಳವಾರ ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಅವರು ಮಧ್ಯಾಹ್ನದ ಒಳಗೆ … Continued

ತನಿಖೆಯಲ್ಲಿ ಪಾಕ್ ಪರ ಘೋಷಣೆ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಂಗಳವಾರ ನೂತನ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್ ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದ್ದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ತೀವ್ರ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ವೀಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ … Continued

ರಾಜ್ಯಸಭಾ ಚುನಾವಣೆ: ಉತ್ತರಪ್ರದೇಶದ 10 ಸ್ಥಾನಗಳಲ್ಲಿ ಬಿಜೆಪಿ 8 ರಲ್ಲಿ, ಸಮಾಜವಾದಿ ಪಕ್ಷ 2 ರಲ್ಲಿ ಗೆಲುವು

ನವದೆಹಲಿ: ಜಯಂತ ಚೌಧರಿ ಅವರ ರಾಷ್ಟ್ರೀಯ ಲೋಕದಳ ಮತ್ತು ಸಮಾಜವಾದಿ ಪಕ್ಷದ ಕೆಲವು ಬಂಡಾಯ ಶಾಸಕರ ಸಹಾಯದಿಂದ ಬಿಜೆಪಿ ಉತ್ತರ ಪ್ರದೇಶದಿಂದ ರಾಜ್ಯಸಭೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಹೆಚ್ಚುವರಿ ಸ್ಥಾನವನ್ನು ಪಡೆದುಕೊಂಡಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆದ್ದ ನಂತರ ಉತ್ತರ ಪ್ರದೇಶದಲ್ಲಿಯೂ ಬೋನಸ್ ಸ್ಥಾನಗಳನ್ನು ಪಡೆಯಲು ಬಿಜೆಪಿ … Continued

ರಾಜ್ಯಸಭೆ ಚುನಾವಣೆ : ಕಾಂಗ್ರೆಸ್‌ ಶಾಸಕರ ಅಡ್ಡಮತದಾನ, ಹಿಮಾಚಲದಲ್ಲಿ ಅಭಿಷೇಕ ಮನು ಸಿಂಘ್ವಿಗೆ ಸೋಲು

ಶಿಮ್ಲಾ: ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಮಂಗಳವಾರ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸೋಲಿಸಿದ್ದಾರೆ..! ಮತ ಎಣಿಕೆಯ ವೇಳೆ ಇಬ್ಬರು ಅಭ್ಯರ್ಥಿಗಳು ತಲಾ 34-34 ಮತಗಳನ್ನು ಪಡೆದ ನಂತರ ಸಮನಾದ ಟಾಸ್‌ ಮಾಡುವ ಮೂಲಕ ವಿಜೇತರನ್ನು ನಿರ್ಧರಿಸಲಾಯಿತು. 68 ಸದಸ್ಯ … Continued

ವೀಡಿಯೊ..| ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್‌ ಹುಸೇನ್‌ ಗೆಲುವಿನ ಸಂಭ್ರಮದ ವೇಳೆ ಬೆಂಬಲಿಗರಿಂದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ; ಬಿಜೆಪಿ ಆಕ್ರೋಶ

ಬೆಂಗಳೂರು : ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಮಂಗಳವಾರ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ಅವರು ಜಯಗಳಿಸಿದ ನಂತರ ವಿಧಾನಸೌಧದಲ್ಲಿ ಅವರ ಬೆಂಬಲಿಗರು ವಿಜಯೋತ್ಸವದ ವೇಳೆ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ … Continued

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‌ ಪಟ್ಟಿ ಬಿಡುಗಡೆ ; ಕರ್ನಾಟಕದಿಂದ ಮೂವರ ಹೆಸರು ಪ್ರಕಟ

ಬೆಂಗಳೂರು : ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದ್ದು, ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಜೊತೆಗೆ ತೆಲಂಗಾಣ ಹಾಗೂ ಮಧ್ಯಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆಗೊಳಿಸಲಾಗಿದ್ದು, ಅಜಯ್ ಮಾಕೇನ್, ಡಾ. ಸೈಯ್ಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಹಾಗೂ ಕಾಂಗ್ರೆಸ್‌ ನಾಯಕ ಹಾಗೂ … Continued

ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ನಾರಾಯಣಸಾ ಭಾಂಡಗೆಗೆ ಬಿಜೆಪಿ ಟಿಕೆಟ್ ಘೋಷಣೆ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕದಿಂದ ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಬಿಜೆಪಿ ಮಾಜಿ ರಾಜ್ಯ ಉಪಾಧ್ಯಕ್ಷ ನಾರಾಯಣ ಭಾಂಡಗೆ ಅವರಿಗೆ ಟಿಕೆಟ್‌ ನೀಡಲಾಗಿದೆ. ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ನಿರಾಸೆಯಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿ ಸೋತಿದ್ದ ವಿ … Continued

ರಾಜ್ಯಸಭೆ ಚುನಾವಣೆ: ಬಿಜೆಪಿಯ ಮೂರೂ ಅಭ್ಯರ್ಥಿಗಳು ಆಯ್ಕೆ- ಅರುಣ್ ಸಿಂಗ್ ವಿಶ್ವಾಸ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಎಲ್ಲ 3 ಅಭ್ಯರ್ಥಿಗಳುಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ “ಜಗನ್ನಾಥ ಭವನ”ದಲ್ಲಿ ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಮತ್ತು ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಉತ್ತಮ ಕೆಸಲಗಳನ್ನು ಗಮನದಲ್ಲಿಟ್ಟು … Continued