ಸಂಸತ್ತಿನಲ್ಲಿ ಪೇಪರ್ ಸೋರಿಕೆ ತಡೆ ಮಸೂದೆ ಅಂಗೀಕಾರ; ರಾಷ್ಟ್ರಪತಿ ಅಂಕಿತದ ಬಳಿಕ ಕಾನೂನಾಗಿ ಜಾರಿ

ನವದೆಹಲಿ : ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರೆ ಅಕ್ರಮಗಳನ್ನು ಕಟ್ಟುನಿಟ್ಟಾಗಿ ತಡೆಯುವ ಉದ್ದೇಶದಿಂದ ತರಲಾಗಿರುವ ಸಾರ್ವಜನಿಕ ಪರೀಕ್ಷೆ (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ-2026ಕ್ಕೆ ಸಂಸತ್ತಿನ ಉಭಯ ಸದನಗಳೂ ಅನುಮೋದನೆ ನೀಡಿವೆ.ಇದನ್ನು ಈಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಕಳುಹಿಸಲಾಗುತ್ತದೆ. ಅವರ ಅಂಕಿದ ನಂತರ ಅದು ಕಾನೂನಾಗಿ ಜಾರಿಗೆ ಬರಲಿದೆ. ಈ … Continued

ಕೇಂದ್ರ ಸಚಿವ ಸ್ಥಾನಕ್ಕೆ ರವ್ನೀತ್ ಸಿಂಗ್ ಬಿಟ್ಟು ರಾಜೀನಾಮೆ

ನವದೆಹಲಿ: ಪಂಜಾಬ್ ಬಿಜೆಪಿ ನಾಯಕ ರವ್ನೀತ್ ಸಿಂಗ್ ಬಿಟ್ಟು ಅವರು ರೈಲ್ವೆ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆಗಳ ಕೇಂದ್ರ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ, ರಾಜ್ಯಸಭಾ ಸದಸ್ಯರಾಗಿದ್ದ ಅವರ ಅವಧಿಯೂ ಜೂನ್ ತಿಂಗಳಲ್ಲೇ ಅಂತ್ಯಗೊಂಡಿತ್ತು. ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಟ್ಟು ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು … Continued

ಟಿಎಂಸಿಗೆ ಮತ್ತೊಂದು ಆಘಾತ : ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯೆಲ್ ಮಲ್ಲಿಕ್ ರಾಜೀನಾಮೆ ; ಬಿಜೆಪಿ ಸೇರ್ಪಡೆ ವದಂತಿಗೆ ಬಲ

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಗುರುವಾರ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಯೆಲ್ ಮಲ್ಲಿಕ್ ಅವರು ಈ ವರ್ಷದ ಏಪ್ರಿಲ್ 6ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, … Continued

ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿಯಾದ ಎಂ.ನಾಗರಾಜ್ ಅವಿರೋಧವಾಗಿ ಆಯ್ಕೆಯಾದವರು. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಒಟ್ಟು ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ಪೈಕಿ ರಾಜ್ಯಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಬೋಜಣ್ಣ ಸೋಮಣ್ಣ … Continued

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿ ರಾಜ್ಯಸಭಾ ಸದಸ್ಯತ್ವಕ್ಕೆ ಸುಶ್ಮಿತಾ ದೇವ್ ರಾಜೀನಾಮೆ

ನವದೆಹಲಿ: ಪಕ್ಷದೊಳಗಿನ ಭಿನ್ನಮತ ಮತ್ತು ಸರಣಿ ಬಂಡಾಯದಿಂದ ಕಂಗಾಲಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ (TMC) ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ತೀವ್ರ ಆಘಾತ ಎದುರಾಗಿದೆ. ಟಿಎಂಸಿ ಹಿರಿಯ ನಾಯಕಿ ಸುಶ್ಮಿತಾ ದೇವ್ ಅವರು ಬುಧವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿಗಳಾದ ಸಿ. ಪಿ. ರಾಧಾಕೃಷ್ಣನ್ … Continued

ಸಂಸತ್ತಿನಲ್ಲಿ ಟಿಎಂಸಿಗೆ ಮೊದಲ ಆಘಾತ: ರಾಜ್ಯಸಭಾ ಸ್ಥಾನ-ಪಕ್ಷಕ್ಕೆ ಹಿರಿಯ ನಾಯಕ ಸುಖೇಂದು ಶೇಖರ ರಾಯ್ ರಾಜೀನಾಮೆ !

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ಸಂಸತ್ತಿನಲ್ಲಿ ಮೊದಲ ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ರಾಜ್ಯಸಭಾ ಸಂಸದ ಸುಖೇಂದು ಶೇಖರ ರಾಯ್ ಅವರು ಸೋಮವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೆ, ಟಿಎಂಸಿ ಪಕ್ಷವನ್ನೂ ತೊರೆದಿದ್ದಾರೆ. ಪಶ್ಚಿಮ ಬಂಗಾಳದ ಬಹುಪಾಲು ಟಿಎಂಸಿ ಶಾಸಕರು ಬಂಡಾಯವೆದ್ದಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಪಕ್ಷವು … Continued

ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ (Rajya Sabha elections) ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಧಾನಸೌಧದಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ 3 ಸ್ಥಾನಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ವಕ್ತಾರ ಪವನ್ ಖೇರಾ, ಮನ್ಸೂರ್ ಅಲಿಖಾನ್ ಅವರನ್ನು ಅಭ್ಯರ್ಥಿಗಳಾಗಿ ಕಾಂಗ್ರೆಸ್ ಹೆಸರಿಸಿದೆ. ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷದ … Continued

ರಾಜ್ಯಸಭಾ ಚುನಾವಣೆ: 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮುಂಬರುವ 2026ರ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆ ಹಾಗೂ ಒಡಿಶಾ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗುರುವಾರ 11  ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ (CEC) ಸಭೆಯ ಬಳಿಕ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ಸಿಂಗ್ ಅಭ್ಯರ್ಥಿಗಳ … Continued

ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ ; ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸಿಗುವುದೇ 3ನೇ 2ರಷ್ಟು ಬಹುಮತ ?

ನವದೆಹಲಿ: ಜೂನ್ ಮತ್ತು ಜುಲೈ ತಿಂಗಳಿನಲ್ಲಿ ತೆರವಾಗಲಿರುವ 10 ರಾಜ್ಯಗಳ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಮತದಾನ ಮುಗಿದ ತಕ್ಷಣ ಅಂದೇ ಸಂಜೆ ಮತ ಎಣಿಕೆ ಕಾರ್ಯವೂ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಪ್ರಸಕ್ತ ಸಾಲಿನ ಜೂನ್ 21 ರಿಂದ ಜುಲೈ 19 … Continued

ಕ್ಷೇತ್ರ ಮರುವಿಂಗಡಣೆ | ದಕ್ಷಿಣದ ರಾಜ್ಯಗಳ ಲೋಕಸಭಾ ಸ್ಥಾನಗಳಲ್ಲಿ ಹೆಚ್ಚಳ: ಅಂಕಿ-ಅಂಶ ಹಂಚಿಕೊಂಡ ಅಮಿತ್ ಶಾ ; ಕರ್ನಾಟಕಕ್ಕೆ ಸಿಗುವ ಸ್ಥಾನಗಳೆಷ್ಟು..?

ನವದೆಹಲಿ: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯ (Delimitation) ನಂತರ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂಬ ಆರೋಪಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಗುರುವಾರ (ಏಪ್ರಿಲ್ 16) ಲೋಕಸಭೆಯಲ್ಲಿ ಮಾತನಾಡಿದ ಅವರು, ಮರುವಿಂಗಡಣೆಯ ನಂತರ ದಕ್ಷಿಣದ ರಾಜ್ಯಗಳ ಸಂಸದರ ಸಂಖ್ಯೆ ಕುಸಿಯುವ ಬದಲಿಗೆ 195ಕ್ಕೆ ಏರಿಕೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ … Continued