ವಕ್ಫ್‌ ತಿದ್ದುಪಡಿ ಮಸೂದೆ-2025ರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್, ಅಸಾದುದ್ದೀನ್ ಓವೈಸಿ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯ ಅಂಗೀಕಾರದ ವಿರುದ್ಧ ವಿಪಕ್ಷಗಳ ಇಬ್ಬರು ಸಂಸದರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಸ್ತಾವಿತ ಕಾನೂನು “ಮುಸ್ಲಿಮರ ಬಗ್ಗೆ ತಾರತಮ್ಯ”ದ ಕಾನೂನು ಎಂದು ಕರೆದಿದ್ದಾರೆ. ವಿವಾದಾತ್ಮಕ ಮಸೂದೆಯ ಅಂಗೀಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದರು, ನಿಬಂಧನೆಗಳು “ಮುಸ್ಲಿಮರ ಮೂಲಭೂತ … Continued

ವಕ್ಫ್ ತಿದ್ದುಪಡಿ ಮಸೂದೆ : ಲೋಕಸಭೆಯಲ್ಲಿ ಅಂಗೀಕಾರದ ನಂತರ ಇಂದು ರಾಜ್ಯಸಭೆಯತ್ತ ಎಲ್ಲರ ಕಣ್ಣು; ಪಕ್ಷಗಳ ಬಲಾಬಲ ಹೇಗಿದೆ…?

ನವದೆಹಲಿ : ಲೋಕಸಭೆಯು ಬುಧವಾರ ಮಧ್ಯರಾತ್ರಿ ವಕ್ಫ್ (ತಿದ್ದುಪಡಿ) ಮಸೂದೆ 2025ಕ್ಕೆ ಅಂಗೀಕಾರ ನೀಡಿದ್ದು, ಇಂದು ರಾಜ್ಯಸಭೆಯತ್ತ ಎಲ್ಲರ ಚಿತ್ತವಿದೆ. ಲೋಕಸಭೆಯಲ್ಲಿ ಮಸೂದೆಯ ಪರವಾಗಿ 288 ಮತ್ತು ವಿರುದ್ಧವಾಗಿ 232 ಮತಗಳು ಬಂದವು. 100 ಕ್ಕೂ ಹೆಚ್ಚು ತಿದ್ದುಪಡಿಗಳನ್ನು ವಿಪಕ್ಷದ ಸದಸ್ಯರು ಪ್ರಸ್ತಾಪಿಸಿದರು, ಆದರೆ ಮತದಾನದ ಸಮಯದಲ್ಲಿ ಎಲ್ಲವನ್ನೂ ತಿರಸ್ಕರಿಸಲಾಯಿತು. ಚರ್ಚೆಯ ಸಂದರ್ಭದಲ್ಲಿ, ಸರ್ಕಾರವು ಮಸೂದೆಯನ್ನು … Continued

ರಾಜ್ಯಸಭೆ ಚೇರ್ಮನ್‌ ಜಗದೀಪ್ ಧನಕರ ವಿರುದ್ಧ ವಿಪಕ್ಷಗಳಿಂದ ಅವಿಶ್ವಾಸ ಮಂಡನೆ

ನವದೆಹಲಿ: ಸದನದಲ್ಲಿ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ರಾಜ್ಯಸಭಾ ಚೇರ್ಮನ್‌ ಜಗದೀಪ ಧನಕರ ವಿರುದ್ಧ ಮಂಗಳವಾರ ಬೆಳಿಗ್ಗೆ ಅವಿಶ್ವಾಸ ನಿರ್ಣಯ ಮಂಡಿಸಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್‌, ಆಮ್ ಆದ್ಮಿ ಪಕ್ಷ, ಸಮಾಜವಾದಿ ಪಕ್ಷ, ಡಿಎಂಕೆ ಮತ್ತು ರಾಷ್ಟ್ರೀಯ ಜನತಾ ದಳದ 50ಕ್ಕೂ ಹೆಚ್ಚು ಸಂಸದರ ಸಹಿಯೊಂದಿಗೆ ನೋಟಿಸ್ ಅನ್ನು … Continued

ಸಂಸತ್ ಅಧಿವೇಶನ: ಕಾಂಗ್ರೆಸ್​ ಸಂಸದರ ಸೀಟಿನಡಿ ಕಂತೆ ನೋಟುಗಳು ಪತ್ತೆ, ಸದನದಲ್ಲಿ ಗದ್ದಲ

ನವದೆಹಲಿ: ಕಾಂಗ್ರೆಸ್​ನ ರಾಜ್ಯಸಭಾ ಸಂಸದರೊಬ್ಬರ ಸೀಟಿನಡಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಯಾಗಿದೆ. ರಾಜ್ಯಸಭಾ ಸಂಸದರ ಸೀಟಿನ ಸಂಖ್ಯೆ 222 ರ ಅಡಿಯಲ್ಲಿ 500 ರೂ ನೋಟುಗಳ ಬಂಡಲ್ ಪತ್ತೆಯಾಗಿದೆ. ತೆಲಂಗಾಣದಿಂದ ಕಾಂಗ್ರೆಸ್​ ಸಂಸದರಾಗಿ ಆಯ್ಕೆಯಾಗಿರುವ ಅಭಿಷೇಕ್ ಮನುಸಿಂಘ್ವಿ ಅವರು ಕುಳಿತುಕೊಳ್ಳುವ ಸೀಟಿನಲ್ಲಿ ಹಣವಿತ್ತು ಎಂದು ಹೇಳಲಾಗಿದೆ. ಸಭಾಪತಿ ಜಗದೀಪ ಧನಕರ … Continued

12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ನವದೆಹಲಿ: ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 22 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ತ್ರಿಪುರಾ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಆಗಸ್ಟ್ 26 … Continued

ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ, ಇಂದು ನಾಮಪತ್ರ ಸಲ್ಲಿಕೆ

ನವದೆಹಲಿ: ಐದು ಬಾರಿ ಲೋಕಸಭಾ ಸದಸ್ಯೆಯಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೆಬ್ರವರಿ 27 ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವು ಬುಧವಾರ ಪ್ರಕಟಿಸಿದೆ. ಅವರು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗಾಗಿ ಅವರು ಉತ್ತರ ಪ್ರದೇಶದ ರಾಯ್‌ ಬರೇಲಿ ಲೋಕಸಭಾ … Continued

ವೀಡಿಯೊ…| ಬಿಜೆಪಿ 400 ಸ್ಥಾನ ಗೆಲ್ಲಲಿದೆ : ರಾಜ್ಯಸಭೆಯಲ್ಲಿ ಹೀಗೆಂದು ಭವಿಷ್ಯ ನುಡಿದ ಮಲ್ಲಿಕಾರ್ಜುನ್ ಖರ್ಗೆ…!

ನವದೆಹಲಿ: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣವು ಆಡಳಿತ ಪಕ್ಷದ ಸಾಲಿನಲ್ಲಿ ಭಾರೀ ಖುಷಿಗೆ ಕಾರಣವಾದ ಪ್ರಸಂಗವು ರಾಜ್ಯಸಭೆಯಲ್ಲಿ ನಡೆದಿದೆ. ಖರ್ಗೆ ಅವರ ಮಾತಿಗೆ ಆಡಳಿತ ಪಕ್ಷದ ಸಂಸದರೆಲ್ಲರೂ ಬೆಂಚ್‌ ಗುದ್ದಿ ಸ್ವಾಗತಿಸಿದ ಅಪರೂಪದ ವಿದ್ಯಮಾನ ಇದಾಗಿದೆ. ಆಡಳಿತಾರೂಢ ಬಿಜೆಪಿ ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಅಬ್ ತೋ 400 ಪಾರ್’ ಹೋ … Continued

ಡೆರೆಕ್ ಒʼ ಬ್ರೆಯಾನ್‌ ಸದನದಿಂದ ಅಮಾನತುಗೊಂಡಿಲ್ಲ: ಉಪರಾಷ್ಟ್ರಪತಿ ಜಗದೀಪ ಧನಕರ ಸ್ಪಷ್ಟನೆ

ನವದೆಹಲಿ: ರಾಜ್ಯಸಭೆ ಕಲಾಪ ವೇಳೆ ಗದ್ದಲ ಮಾಡಿದ ಹಿನ್ನೆಲೆ ಟಿಎಂಸಿ ಸಂಸದ ಡೆರೆಕ್ ಓ’ಬ್ರೆಯಾನ್ ಅವರನ್ನು ಸದನದಿಂದ ಹೊರನಡೆಯಬೇಕು ಎಂದು ಸಭಾಧ್ಯಕ್ಷರು ಸೂಚಿಸಿದ್ದರೂ ಬಳಿಕ ಡೆರೆಕ್ ಓ’ಬ್ರೇನ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ಮತಕ್ಕೆ ಹಾಕಿಲ್ಲ. ಹೀಗಾಗಿ ಅವರು ಕಲಾಪದಲ್ಲಿ ಭಾಗಿಯಾಗಬಹುದು ಎಂದು ರಾಜ್ಯಸಭೆಯ ಅಧ್ಯಕ್ಷರಾದ ಜಗದೀಪ್ ಧನಕರ ಸ್ಪಷ್ಟನೆ ನೀಡಿದ್ದಾರೆ. ತಾವು ಡೆರೆಕ್ ಓ’ಬ್ರೆಯಾನ್ ಅವರನ್ನು … Continued

ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್‌ ಆಫ್ ಮಾಡಿದ ಆರೋಪ ; ‘ಇಂಡಿಯಾ’ ಮೈತ್ರಿ ಪಕ್ಷದ ಸದಸ್ಯರಿಂದ ಸಭಾತ್ಯಾಗ

ನವದೆಹಲಿ: ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್‌ ಆಫ್ ಮಾಡಲಾಗಿದೆ ಎಂದು ಆರೋಪಿಸಿ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆ ಖಂಡಿಸಿ ಇಂದು ಮಂಗಳವಾರ ಸಭಾತ್ಯಾಗ ಮಾಡಿದವು. ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ … Continued

ರಾಜ್ಯಸಭೆ, ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತು ನಾಳೆ, ಶುಕ್ರವಾರ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರುಮುಂದಿನ ತಿಂಗಳು … Continued