ರಾಮನವಮಿಗೂ ಮುನ್ನ ಅಯೋಧ್ಯೆ ರಾಮಮಂದಿರಕ್ಕೆ 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ ಸಮರ್ಪಿಸಿದ ನಿವೃತ್ತ ಐಎಎಸ್‌ ಅಧಿಕಾರಿ..

ರಾಮನವಮಿಗೆ ಕೆಲ ದಿನಗಳ ಮುಂಚೆ ಅಯೋಧ್ಯೆಯ ರಾಮಮಂದಿರಕ್ಕೆ ಚಿನ್ನದ ರಾಮಚರಿತಮಾನಸವನ್ನು ಸಮರ್ಪಿಸಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ನಂತರ ಇದು ಮೊದಲ ರಾಮನವಮಿ ಆಚರಣೆಯಾಗಿದೆ. ಈ ಶುಭ ಸಂದರ್ಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್ ಅವರು ಬಾಲ ರಾಮನಿಗೆ ಸುವರ್ಣ ರಾಮಾಯಣವನ್ನು ಉಡುಗೊರೆಯಾಗಿ ನೀಡಿದ್ದಾರೆ. ಚಿನ್ನದಲ್ಲಿ ಸ್ಕ್ರಿಪ್ಟ್ ಮಾಡಲಾದ ರಾಮಚರಿತಮಾನಸವನ್ನು ಮಾಜಿ ಐಎಎಸ್ ಅಧಿಕಾರಿ … Continued

ಅಯೋಧ್ಯೆಗೆ ಬರುವ ಯಾತ್ರಿಕರಿಗೆ ಉಚಿತ ಚಿಕಿತ್ಸೆ ನೀಡಲು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ : ಅಪೋಲೋ ಹಾಸ್ಪಿಟಲ್ಸ್ ಘೋಷಣೆ

ಅಯೋಧ್ಯೆ : ಅಪೋಲೋ ಹಾಸ್ಪಿಟಲ್ಸ್ ಗ್ರೂಪ್ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಯಾತ್ರಾಸ್ಥಳದಲ್ಲಿ ಅತ್ಯಾಧುನಿಕ ಮಲ್ಟಿ-ಸ್ಪೆಷಾಲಿಟಿ ತುರ್ತು ವೈದ್ಯಕೀಯ ಕೇಂದ್ರ ಪ್ರಾರಂಭಿಸುವುದಾಗಿ ಘೋಷಿಸಿದೆ. ಕೇಂದ್ರದ ಸುಧಾರಿತ ಸೇವೆಗಳ ಕುರಿತು ಮಾತನಾಡಿದ ಅಪೋಲೋ ಹಾಸ್ಪಿಟಲ್ಸ್ ಗ್ರೂಪ್ ಅಧ್ಯಕ್ಷ ಡಾ. ಪ್ರತಾಪ್ ಸಿ.ರೆಡ್ಡಿ ಈ ಮಲ್ಟಿ-ಸ್ಪೆಷಾಲಿಟಿ ತುರ್ತು ವೈದ್ಯಕೀಯ ಕೇಂದ್ರ(multi-specialty emergency medical centre)ದಲ್ಲಿ ಉತ್ತಮವಾದ ವಿಸ್ತೃತ ವೈದ್ಯಕೀಯ ಸೇವೆಗಳು … Continued

ನಿಪ್ಪಾಣಿ : 101 ವರ್ಷಗಳ ಹಳೆಯ ನಿಪ್ಪಾಣಿ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ

 ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ಪಟ್ಟಣದ ರಾಮ ಮಂದಿರವನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಪತ್ರ ಬರೆಯಲಾಗಿದೆ. ನಿಪ್ಪಾಣಿ ಹಳೆ ಪಿಬಿ ರಸ್ತೆಯ ರಾಮಮಂದಿರ ಇದಾಗಿದ್ದು, ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಎರಡು ಪತ್ರಗಳು ಬಂದಿದೆ. ಮುಂದಿನ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಎಂದು ಅನಾಮಧೇಯ … Continued

ಚಿನ್ನಾಭರಣ ನಗದು ಸೇರಿ ಒಂದೇ ತಿಂಗಳಲ್ಲಿ ಅಯೋಧ್ಯೆ ರಾಮಮಂದಿರಕ್ಕೆ ಬಂದ ದೇಣಿಗೆ ಹಣವೆಷ್ಟು ಗೊತ್ತಾ..?

ಅಯೋಧ್ಯೆ : ನೂತನವಾಗಿ ನಿರ್ಮಿಸಲಾದ ಅಯೋಧ್ಯೆ ರಾಮಮಂದಿರದಲ್ಲಿ ಜನವರಿ 22 ರಂದು ಪ್ರಾಣ ಪ್ರತಿಷ್ಠೆ ಸಮಾರಂಭ ನಡೆದಾಗಿನಿಂದ ಒಂದು ತಿಂಗಳಲ್ಲಿ ಸಾಕಷ್ಟು ದೇಣಿಗೆ ಹರಿದು ಬಂದಿದೆ. ಇದರಲ್ಲಿ ಸುಮಾರು 25 ಕೋಟಿ ಮೌಲ್ಯದ 25 ಕೆಜಿ ಚಿನ್ನ ಮತ್ತು ಬೆಳ್ಳಿ ಆಭರಣಗಳು ಸೇರಿವೆ. ಈ ಮಾಹಿತಿಯನ್ನು ರಾಮಮಂದಿರ ಟ್ರಸ್ಟ್ ಅಧಿಕಾರಿಗಳು ಹಂಚಿಕೊಂಡಿದ್ದಾರೆ. ರಾಮಮಂದಿರ ಟ್ರಸ್ಟ್‌ನ ಉಸ್ತುವಾರಿ … Continued

ಅಯೋಧ್ಯೆ ರಾಮ ಮಂದಿರ: ಕ್ಯೂ ನಿರ್ವಹಣೆಗಾಗಿ ಟ್ರಸ್ಟ್ ಟಿಟಿಡಿಯಿಂದ ನೆರವು ಕೋರಿದ ರಾಮಮಂದಿರ ಟ್ರಸ್ಟ್

ಅಯೋಧ್ಯೆ : ಅಯೋಧ್ಯೆಗೆ ಭೇಟಿ ನೀಡುವ ಶ್ರೀರಾಮ ಭಕ್ತರಿಗೆ ಸುರಕ್ಷಿತ ಮಾರ್ಗ ಮತ್ತು ಸಂಚಾರ ಕಲ್ಪಿಸಲು ಒಂದು ಪ್ರಮುಖ ಹೆಜ್ಜೆಯಾಗಿ ಅಯೋಧ್ಯೆ ರಾಮಮಂದಿರ ಟ್ರಸ್ಟ್ ಈಗ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಅನ್ನು ಸಂಪರ್ಕಿಸಿದೆ. ಭಕ್ತರ ದಟ್ಟಣೆ ತಪ್ಪಿಸಲು ಸುವ್ಯವಸ್ಥೆ, ಸರತಿ ಸಾಲು ನಿರ್ವಹಣಾ ವ್ಯವಸ್ಥೆ ಇತ್ಯಾದಿಗಳ ಕುರಿತು ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ಪ್ರತಿನಿಧಿಗಳಿಗೆ ಟಿಟಿಡಿ … Continued

ಶ್ರೀರಾಮನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ : ಕಾಂಗ್ರೆಸ್ಸಿಗೆ ಆಚಾರ್ಯ ಪ್ರಮೋದ್ ಕೃಷ್ಣಂ ತಿರುಗೇಟು

ಲಕ್ನೋ : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಪಕ್ಷವು ತನ್ನನ್ನು ‘ಬಿಡುಗಡೆʼ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಅಯೋಧ್ಯೆ ಬಾಲರಾಮನ ಕಣ್ತುಂಬಿಕೊಳ್ಳಲು ಭಕ್ತ ಸಾಗರ: 11 ದಿನದಲ್ಲಿ ರಾಮಮಂದಿರಕ್ಕೆ ಭೇಟಿ ನೀಡಿದವರು ಎಷ್ಟು ಗೊತ್ತಾ..?

ಅಯೋಧ್ಯಾ : ಜನವರಿ 22 ರಂದು ರಾಮಮಂದಿರದ ಉದ್ಘಾಟನೆ ನಂತರ, ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದ ಟ್ರಸ್ಟ್‌ನ ಕಚೇರಿ ಪ್ರಭಾರಿ ಪ್ರಕಾಶ ಗುಪ್ತಾ ಪ್ರಕಾರ, ಕಳೆದ 11 ದಿನಗಳಲ್ಲಿ ಸುಮಾರು 8 ಕೋಟಿ ರೂಪಾಯಿಗಳನ್ನು ಕಾಣಿಕೆ ಪೆಟ್ಟಿಗೆಗಳಲ್ಲಿ ಸಂಗ್ರಹವಾಗಿದೆ. ಚೆಕ್ ಮತ್ತು ಆನ್‌ಲೈನ್ ಮೂಲಕ ಪಡೆದ … Continued

“ದಯವಿಟ್ಟು ಬೇರೆ ಕಾಲೋನಿಗೆ ಹೋಗಿ…”: ರಾಮಮಂದಿರ ವಿರೋಧಿ ಪೋಸ್ಟ್‌ ನಂತರ ಮಣಿಶಂಕರ್ ಅಯ್ಯರ್ ಮಗಳಿಗೆ ಮನೆ ತೊರೆಯುವಂತೆ ನೋಟಿಸ್‌

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಪುತ್ರಿ ಸುರಣ್ಯಾ ಅಯ್ಯರ್ ಅವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ತೆರೆಯುವುದನ್ನು ಖಂಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ದೆಹಲಿಯ ಜಂಗ್‌ಪುರದ ನಿವಾಸಿ ಕಲ್ಯಾಣ ಸಂಘ (ಆರ್‌ಡಬ್ಲ್ಯೂಎ) ಅವರಿಗೆ ತಮ್ಮ ಮನೆ ಬಿಟ್ಟು ಹೋಗುವಂತೆ ಸೂಚಿಸಿದೆ. ಈ ಕುರಿತು ದೆಹಲಿಯ ಜಂಗ್ಪುರ ವಿಸ್ತರಣೆಯ ನಿವಾಸಿಗಳ ಕಲ್ಯಾಣ ಸಂಘ(RWA)ವು … Continued

ರಾಮಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯ ಇಮಾಮ್ ವಿರುದ್ಧ ಫತ್ವಾ, ಬೆದರಿಕೆ ಕರೆ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಿದ ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಡಾ.ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ವಿರುದ್ಧ ಫತ್ವಾ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಫತ್ವಾವನ್ನು ಭಾನುವಾರ ಹೊರಡಿಸಲಾಗಿದೆ. ಆದರೆ ರಾಮ ಮಂದಿರದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಿನದಿಂದಲೂ ತನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು … Continued

ರಾಮಮಂದಿರ ಪ್ರತಿಷ್ಠಾಪನೆ ಪ್ರಾದೇಶಿಕ ಶಾಂತಿಗೆ ದೊಡ್ಡ ಬೆದರಿಕೆ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಕ್ಯಾತೆ

ವಿಶ್ವಸಂಸ್ಥೆ : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯು ‘ಪ್ರದೇಶದ ಶಾಂತಿ’ಗೆ ‘ದೊಡ್ಡ ಬೆದರಿಕೆಯಾಗಿದೆ’ ಎಂದು ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರಿಗೆ ಪತ್ರ ಬರೆದು ಎಚ್ಚರಿಸುವ ಮೂಲಕ ಪಾಕಿಸ್ತಾನವು ರಾಮ ಮೀದರದ ಉದ್ಘಾಟನೆಗೆ ಕ್ಯಾತೆ ತೆಗೆದಿದೆ. ಅಯೋಧ್ಯೆಯಲ್ಲಿ ಧ್ವಂಸಗೊಂಡ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮತ್ತು ಪವಿತ್ರೀಕರಣವನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ ಎಂದು ಪಾಕಿಸ್ತಾನದ ವಿಶ್ವ ಸಂಸ್ಥೆಯ ಕಾಯಂ … Continued