ರಾಮ ಮಂದಿರ ಕಾಣಿಕೆ ಕಳವು ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆರ್‌ಎಸ್‌ಎಸ್ ಒತ್ತಾಯ, ಎಸ್‌ಐಟಿ ತನಿಖೆಗೆ ಬೆಂಬಲ

ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮಲಲ್ಲಾ ಮಂದಿರದ ಕಾಣಿಕೆ ಹುಂಡಿಗಳಿಂದ ಹಣ ಕಳವು ನಡೆದಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಯಾರೆಂದು ತನಿಖೆಯಲ್ಲಿ ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಗ್ರಹಿಸಿದೆ. ಇದೇ ವೇಳೆ, ಈ ವಿವಾದವನ್ನು “ಹಿಂದೂ ವಿರೋಧಿ ಹಾಗೂ ರಾಷ್ಟ್ರವಿರೋಧಿ ಶಕ್ತಿಗಳು” ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿವೆ … Continued

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ : ಸಿಎಂ ಯೋಗಿ ಆದಿತ್ಯನಾಥಗೆ ತನಿಖಾ ವರದಿ ಹಸ್ತಾಂತರಿಸಿದ ಎಸ್‌ಐಟಿ

 ಲಕ್ನೋ/ಅಯೋಧ್ಯೆ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆ ಹರಿದುಬರುತ್ತಿರುವ ಬೆನ್ನಲ್ಲೇ, ಕಾಣಿಕೆ ಹಣ ಮತ್ತು ಆಭರಣಗಳ ನಿರ್ವಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT)ವು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು … Continued

ಅಯೋಧ್ಯೆ ರಾಮಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ವ್ಯಕ್ತಿಯ ಬಂಧನ

ಅಯೋಧ್ಯೆ: ಅಯೋಧ್ಯೆಯ ಭವ್ಯ ರಾಮಮಂದಿರ ಸಂಕೀರ್ಣದೊಳಗೆ ನಮಾಜ್ ಮಾಡಲು ಯತ್ನಿಸಿದ ಮತ್ತು ಭದ್ರತಾ ಸಿಬ್ಬಂದಿ ತಡೆದಾಗ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಕಾಶ್ಮೀರದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಬಂಧಿತನನ್ನು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಿವಾಸಿ ಅಹ್ಮದ್ ಶೇಖ್ (55) ಎಂದು ಗುರುತಿಸಲಾಗಿದೆ. ಶುಕ್ರವಾರ ಮಂದಿರಕ್ಕೆ ಪ್ರವೇಶಿಸಿದ ಈತ, ದರ್ಶನದ ನಂತರ … Continued

ಅಯೋಧ್ಯೆಯಲ್ಲಿ ಭವ್ಯ ‘ಧರ್ಮ ಧ್ವಜ’ ಸಮಾರಂಭಕ್ಕೆ ಸಿದ್ಧತೆ ಪೂರ್ಣ ; ನಾಳೆ (ನ.25) ಪ್ರಧಾನಿ ಮೋದಿ ಧ್ವಜಾರೋಹಣ

ಅಯೋಧ್ಯೆ: ಭವ್ಯ ರಾಮ ಮಂದಿರದಲ್ಲಿ ಮಂಗಳವಾರ (ನವೆಂಬರ್ 25) ನಡೆಯಲಿರುವ ಮಹತ್ವದ ‘ಧರ್ಮ ಧ್ವಜ’ (ಕೇಸರಿ ಬಾವುಟ) ಸಮಾರಂಭಕ್ಕಾಗಿ ಅಯೋಧ್ಯೆ ನಗರವು ಅಂತಿಮ ಹಂತದ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಸಮಾರಂಭವು ರಾಮ ಮಂದಿರದ ನಿರ್ಮಾಣ ಕಾರ್ಯದ ಮುಕ್ತಾಯವಾದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮ ಮಂದಿರದ ಗೋಪುರದ … Continued

ಅಯೋಧ್ಯೆ ರಾಮಮಂದಿರದ ವಿನ್ಯಾಸ ಮಾಡಿದ ಶಿಲ್ಪಶಾಸ್ತ್ರಜ್ಞನಿಗೆ ಪದ್ಮಶ್ರೀ ಪುರಸ್ಕಾರ ; ಯಾರು ಈ ಚಂದ್ರಕಾಂತ ಸೋಂಪುರ..?

ನವದೆಹಲಿ: ಭಾರತದ 76 ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಶನಿವಾರ ಕೇಂದ್ರ ಸರ್ಕಾರವು ಶನಿವಾರ ವಿವಿಧ ಕ್ಷೇತ್ರಗಳ 139 ಗಣ್ಯ ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದರಲ್ಲಿ ಏಳು ಪದ್ಮವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ಕಳೆದ ವರ್ಷ ಜನವರಿಯಲ್ಲಿ ಉದ್ಘಾಟನೆಗೊಂಡ ಅಯೋಧ್ಯೆಯಲ್ಲಿ ರಾಮಮಂದಿರದ ವಿನ್ಯಾಸ ಮಾಡಿದ ಚಂದ್ರಕಾಂತ ಸೋಂಪುರ ಅವರು (81) … Continued

ಉತ್ತರ ಪ್ರದೇಶದ ಅತ್ಯಂತ ಜನಪ್ರಿಯ ಪ್ರವಾಸಿ ಸ್ಥಳ ; ತಾಜ್ ಮಹಲ್ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಅಯೋಧ್ಯೆ ರಾಮಮಂದಿರ

ನವದೆಹಲಿ: ಈಗ ಅಯೋಧ್ಯೆಯು ಆಗ್ರಾದ ತಾಜ್ ಮಹಲ್‌ ಅನ್ನು ಹಿಂದಿಕ್ಕಿ ಈಗ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಭೇಟಿ ನೀಡುವ ಸ್ಥಳವಾಗಿ ಹೊರಹೊಮ್ಮಿದೆ. ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಯ ಪ್ರಕಾರ, 2024 ರ ಜನವರಿ-ಸೆಪ್ಟೆಂಬರ್ ನಡುವೆ ಅಯೋಧ್ಯೆಗೆ 13.55 ಕೋಟಿ ದೇಶೀಯ ಪ್ರವಾಸಿಗರು ಮತ್ತು 3,153 ವಿದೇಶಿಯರು ಭೇಟಿ ನೀಡಿದ್ದಾರೆ. ಇದು ಹೊಸ ದಾಖಲೆಯಾಗಿದೆ. ನಿರೀಕ್ಷಿತ … Continued

ಅಕ್ಟೋಬರ್ 28 ರಿಂದ ಅಯೋಧ್ಯೆಯಲ್ಲಿ 4 ದಿನಗಳ ದೀಪೋತ್ಸವ ; ಬೆಳಗಲಿವೆ 25 ಲಕ್ಷ ದೀಪಗಳು…!

ಲಕ್ನೋ : ಈ ವರ್ಷದ ಜನವರಿಯಲ್ಲಿ ಭಗವಾನ್ ರಾಮನ ಐತಿಹಾಸಿಕ ‘ಪ್ರಾಣ ಪ್ರತಿಷ್ಠೆ’ಗೆ ಸಾಕ್ಷಿಯಾದ ಅಯೋಧ್ಯೆಯಲ್ಲಿ ಅಕ್ಟೋಬರ್ 28 ರಿಂದ ನಾಲ್ಕು ದಿನಗಳ ದೀಪೋತ್ಸವ ಆಚರಣೆ ನಡೆಯಲಿದೆ. ಇದು ಭಗವಾನ್ ರಾಮನ ದೇವಾಲಯ ಉದ್ಘಾಟನೆಯಾದ ನಂತರ ಮೊದಲ ಕಾರ್ಯಕ್ರಮವಾಗಿದೆ. ದೀಪೋತ್ಸವ ಆಚರಣೆಗಳು ಅಕ್ಟೋಬರ್ 28 ರಿಂದ ಅಕ್ಟೋಬರ್ 31ರ ವರೆಗೆ ನಡೆಯಲಿದೆ ಎಂದು ಉತ್ತರ ಪ್ರದೇಶ … Continued

ಅಯೋಧ್ಯೆ ರಾಮಮಂದಿರಕ್ಕೆ ಬರೋಬ್ಬರಿ 2100 ಕೋಟಿ ರೂ. ಚೆಕ್‌ ಕೊಟ್ಟ ದಾನಿ ; ಆದ್ರೆ ಇಲ್ಲೊಂದು ಟ್ವಿಸ್ಟ್‌ ; ಅದೇನಂದ್ರೆ…

ಲಕ್ನೋ : ಅಯೋಧ್ಯೆಯ ರಾಮಮಂದಿರದ ಟ್ರಸ್ಟ್‌ಗೆ ದಾನಿಯೊಬ್ಬರು ಬರೋಬ್ಬರಿ 2,100 ಕೋಟಿ ರೂ.. ಮೊತ್ತದ ಚೆಕ್‌ ಕಳಹಿಸಿದ್ದಾರೆ. ಈ ಚೆಕ್‌ ಮೇಲೆ ದಾನಿ ಹೆಸರು, ವಿಳಾಸ, ಫೋನ್‌ ನಂಬರ್‌ ಇದೆ. ಆದರೆ ಇಲ್ಲೊಂದು ಟ್ವಿಸ್ಟ್‌ ಇದೆ. ಟ್ವಿಸ್ಟ್ ಏನೆಂದರೆ ಚೆಕ್ ಕಳುಹಿಸಿದ ದಾನಿ ಅದನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿ ಹೆಸರಿಗೆ ಟ್ರಸ್ಟ್‌ಗೆ ಪೋಸ್ಟ್‌ ಮಾಡಿದ್ದು, … Continued

ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್ ಬಳಕೆ ನಿಷೇಧ

ಅಯೋಧ್ಯೆ : ಜನವರಿ 22ರಂದು ಉದ್ಘಾಟನೆಗೊಂಡ ಅಯೋಧ್ಯೆಯ ರಾಮಮಂದಿರದ ಆವರಣ ಮತ್ತು ಮಂದಿರದ ಒಳಗೆ ಇನ್ಮುಂದೆ ಮೊಬೈಲ್ ಬಳಕೆ ಮಾಡುವಂತಿಲ್ಲ. ದೇಗುಲದ ಆವರಣದ ಮತ್ತು ಮಂದಿರದ ಒಳಗೆ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ. ರಾಮಮಂದಿರ ಟ್ರಸ್ಟ್ ನ ಪದಾಧಿಕಾರಿಗಳು ಐಜಿ ಹಾಗೂ ಕಮಿಷನರ್ ಜೊತೆಗಿನ ಸಭೆ ನಡೆಸಲಾಗಿದ್ದು, ಭದ್ರತಾ ದೃಷ್ಟಿಯಿಂದ  … Continued

ಇಂಡಿಯಾ ಮೈತ್ರಿಕೂಟ ಅಧಿಕಾರ ಬಂದ್ರೆ ಅಯೋಧ್ಯೆ ರಾಮಮಂದಿರ ಶುದ್ಧೀಕರಿಸ್ತೇವೆ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕನ ಹೇಳಿಕೆ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ಭಾರತ ಬಣ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಶುದ್ಧೀಕರಿಸಲಾಗುತ್ತದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಶುಕ್ರವಾರ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಕುರಿತು ಮಾತನಾಡಿದ ನಾನಾ ಪಟೋಲೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೇರಿದರೆ, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಶುದ್ಧೀಕರಿಸಲಾಗುತ್ತದೆ. ಅಲ್ಲಿರುವುದು … Continued