ವೀಡಿಯೊ…| ಅಯೋಧ್ಯೆಯಲ್ಲಿ ಭಗವಾನ್ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ ಸಮಾರಂಭವನ್ನು ಮರಳಿನಲ್ಲಿ ಅದ್ಭುತವಾಗಿ ಚಿತ್ರಿಸಿದ ಕಲಾವಿದ | ವೀಕ್ಷಿಸಿ

ಸೋಮವಾರ ಭವ್ಯವಾದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠಾ’ (ಪ್ರತಿಷ್ಠಾಪನೆ) ಸಮಾರಂಭವನ್ನು ಅದ್ಭುತವಾಗಿ ಚಿತ್ರಿಸುವ ಮರಳು ಅನಿಮೇಷನ್ ಅನ್ನು ಒಡಿಶಾ ಮೂಲದ ಕಲಾವಿದರೊಬ್ಬರು ಹಂಚಿಕೊಂಡಿದ್ದಾರೆ. ಆರು ನಿಮಿಷಗಳ ವೀಡಿಯೊದಲ್ಲಿ ಮರಳು ಕಲಾವಿದ ಮಾನಸ್ ಸಾಹೂ ಎಂಬವರು ಬ್ರಷ್‌ನ ಬದಲಿಗೆ ಕ್ಯಾನ್ವಾಸ್ ಮತ್ತು ಮರಳಿನ ಮೇಲೆ ತನ್ನ ಕೈಗಳನ್ನು ಬಳಸಿ ಚಿತ್ರಿಸುವುದನ್ನು ತೋರಿಸುತ್ತದೆ. ಕಲಾವಿದನು ರಾಮನ … Continued

ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ : ವ್ಯಕ್ತಿ ಬಂಧನ

ಅರರಿಯಾ : ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಾಯಕನಂತೆ ಪೋಸು ನೀಡಿ, ಜನವರಿ 22 ರಂದು (ಸೋಮವಾರ) ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ 21 ವರ್ಷದ ವ್ಯಕ್ತಿಯನ್ನು ಬಿಹಾರದ ಅರರಿಯಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. . ಆರೋಪಿ ಇಂತೇಖಾಬ್ ಆಲಂ ಎಂಬಾತನನ್ನು ಶನಿವಾರ ತಡರಾತ್ರಿ ಬಲುವಾ ಕಲಿಯಗಂಜ್‌ನಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದ್ದು, ಆತ ಮಾನಸಿಕವಾಗಿ ಅಸ್ವಸ್ಥನಂತೆ … Continued

ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಹೊರಟ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ಹಾಗೂ ಕುಟುಂಬದ ಸದಸ್ಯರು ಅಯೋಧ್ಯೆಗೆ ತೆರಳಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್‌ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಪೂಜಾ ಕೈಂಕರ್ಯಗಳು ಈಗಾಗಲೇ ಆರಂಭಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಾಜಿ ಪ್ರಧಾನಿ ದೇವೇಗೌಡರು ಭಾನುವಾರ (ಜನವರಿ … Continued

ಅಯೋಧ್ಯೆಯ ರಾಮ ಮಂದಿರಕ್ಕೆ ಪಾಕ್‌ ಆಕ್ರಮಿತ ಕಾಶ್ಮೀರದಿಂದ ನೀರು ಕಳುಹಿಸಿದ ಮುಸ್ಲಿಂ ವ್ಯಕ್ತಿ…!

ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಭಗವಾನ್‌ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ ಕಳುಹಿಸಿದ್ದಾರೆ…! 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರದಲ್ಲಿ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ … Continued

ಮುಖ ಸಂಪೂರ್ಣವಾಗಿ ಕಂಡ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ : ರಾಮ ಮಂದಿರದ ಮುಖ್ಯ ಅರ್ಚಕರ ಸ್ಪಷ್ಟನೆ

ನವದೆಹಲಿ: ಶುಕ್ರವಾರ ವೈರಲ್‌ ಆಗಿರುವ ರಾಮಮಂದಿರ ಗರ್ಭಗುಡಿಯಲ್ಲಿನ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ. ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ವಿಗ್ರಹದ ಚಿತ್ರಗಳು ಹೇಗೆ ಸೋರಿಕೆಯಾದವು ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ. ಗುರುವಾರ ಬಹಿರಂಗಗೊಂಡಿದ್ದ ಚಿತ್ರದಲ್ಲಿ ವಿಗ್ರಹದ ಕಣ್ಣುಗಳಿಗೆ ಹಳದಿ … Continued

ಮಾಧ್ಯಮ, ಸೋಶಿಯಲ್ ಮೀಡಿಯಾಗಳಲ್ಲಿ ರಾಮ ಮಂದಿರದ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಬೇಡಿ : ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸಲಹೆ

ನವದೆಹಲಿ: ಮುಂಬರುವ ರಾಮಮಂದಿರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸುಳ್ಳು ಅಥವಾ ನಕಲಿ ವಿಷಯವನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರವು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಕಟ್ಟುನಿಟ್ಟಿನ ಸಲಹೆ  ನೀಡಿದೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕೆಲವು ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ಪ್ರಸಾರ ಮಾಡುವ ಸಾಧ್ಯತೆ ಬಗ್ಗೆ ಒತ್ತಿ ಹೇಳಿದ್ದು, ಇದು ಸಾಮಾಜಿಕ ಮಾಧ್ಯಮಗಳಲ್ಲಿ, … Continued

ರಾಮಲಲ್ಲಾ ಮೂರ್ತಿ ಕೆತ್ತನೆಗೆ ಕಪ್ಪುಶಿಲೆ ಸಿಕ್ಕ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ; ಜನವರಿ 22ಕ್ಕೆ ಭೂಮಿಪೂಜೆ

ಮೈಸೂರು : ಅಯೋಧ್ಯೆಯ ಬಾಲ ರಾಮ(ರಾಮ ಲಲ್ಲಾ)ನ ಮೂರ್ತಿ ಕೆತ್ತನೆಗೆ ಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ಶ್ರೀರಾಮನ ಮಂದಿರ ನಿರ್ಮಾಣ ಮಾಡಲಾಗುತ್ತದೆ ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ 22 ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗುತ್ತದೆ. ಎಲ್ಲರ ಬಳಿ ದೇಣಿಗೆ ಸಂಗ್ರಹ ಮಾಡಿ ಮೈಸೂರು … Continued

ಸಾವಿರಾರು ವರ್ಷ ಕಳೆದ್ರೂ ವಿವಾದ ಆಗದಂತೆ ರಾಮಮಂದಿರದ ಕೆಳಗೆ 2 ಸಾವಿರ ಅಡಿ ಆಳದಲ್ಲಿ ‘ಟೈಮ್ ಕ್ಯಾಪ್ಸುಲ್’ ಇಡ್ತಾರೆ..; ಏನಿದರ ವಿಶೇಷತೆ?

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ‘ರಾಮಮಂದಿರ’ ಅಡಿಯಲ್ಲಿ 2,000 ಅಡಿಗಳಷ್ಟು ಆಳದಲ್ಲಿ ‘ಟೈಮ್ ಕ್ಯಾಪ್ಸುಲ್’ ಅನ್ನು ಇರಿಸುತ್ತದೆ. ಈ ಟೈಮ್ ಕ್ಯಾಪ್ಸುಲ್ ರಾಮ ಜನ್ಮಭೂಮಿಯ ವಿವರವಾದ ಇತಿಹಾಸವನ್ನು ಹೊಂದಿರುತ್ತದೆ. ಟ್ರಸ್ಟ್‌ನ ಸದಸ್ಯರ ಪ್ರಕಾರ, ಭವಿಷ್ಯದಲ್ಲಿ ಇನ್ನೆಂದೂ ಈ ಪ್ರದೇಶದಲ್ಲಿ ಮಂದಿರದ ಬಗ್ಗೆ ಇಂತಹ ವಿವಾದವಾಗದಂತೆ ತೀರ್ಥ ಕ್ಷೇತ್ರ ಟ್ರಸ್ಟ್ ‘ಯೋಜನೆ’ ರೂಪಿಸಿದೆ. ಭವಿಷ್ಯದ … Continued

ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೂ ಮುನ್ನ ರಾಮ ಲಲ್ಲಾ ವಿಗ್ರಹದ ಮುಖದ ಫೋಟೋ ಬಿಡುಗಡೆ

ನವದೆಹಲಿ : ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಜನವರಿ 22 ರಂದು ನಡೆಯಲಿದ್ದು, ರಾಮ ಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗಿರುವ ರಾಮನ ವಿಗ್ರಹವನ್ನು ಸಮಾರಂಭಕ್ಕೆ ಕೆಲವು ದಿನಗಳ ಮುಂಚಿತವಾಗಿ ಶುಕ್ರವಾರ ಬಹಿರಂಗಪಡಿಸಲಾಗಿದೆ. ವಿಗ್ರಹವು ಭಗವಾನ್ ರಾಮನನ್ನು ಐದು ವರ್ಷದ ಮಗುವಿನಂತೆ ಚಿತ್ರಿಸಿದ್ದು, ಚಿನ್ನದ ಬಿಲ್ಲು ಮತ್ತು ಬಾಣವನ್ನು ಹಿಡಿದು ನಿಂತಿರುವ ಭಂಗಿಯಲ್ಲಿದೆ.ಮೈಸೂರು ಮೂಲದ ಕಲಾವಿದ ಅರುಣ ಯೋಗಿರಾಜ … Continued

ರಾಮ ಮಂದಿರ ಪ್ರಾಣ ಪ್ರತಿಷ್ಠೆ : 11 ದಿನಗಳ ಕಠಿಣ ನಿಯಮ ಪಾಲಿಸುತ್ತಿರುವ ಪ್ರಧಾನಿ ಮೋದಿ, ಬರೀ ನೆಲದ ಮೇಲೆ ಮಲಗುತ್ತಾರೆ, ಎಳೆ ನೀರು ಮಾತ್ರ ಸೇವಿಸ್ತಾರೆ….

ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ನಿಯಮಗಳು ಮತ್ತು ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಪ್ರಧಾನಿ ಮೋದಿ ವ್ರತಾಚರಣೆಗಳಿಗಾಗಿ “ಯಮ-ನಿಯಮಗಳನ್ನು” ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಜನವರಿ 12 ರಂದು ಮೋದಿ ವ್ರತಾಚರಣೆ ಆರಂಭಿಸಿದ್ದು, ಪ್ರಾಣ ಪ್ರತಿಷ್ಠೆಯ “ಐತಿಹಾಸಿಕ” … Continued