‘ನಾನು ಶ್ರೀರಾಮನ ಬಳಿ ಕ್ಷಮೆಯಾಚಿಸುತ್ತೇನೆ, ಯಾಕೆಂದರೆ…’ : ಅಯೋಧ್ಯೆ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನಂತರ ಪ್ರಧಾನಿ ಮೋದಿ

ಅಯೋಧ್ಯಾ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜನವರಿ 22) ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಿದರು ಮತ್ತು ಮಂದಿರ ನಿರ್ಮಾಣವು “ಭಾರತೀಯ ಸಮಾಜದಲ್ಲಿ ತಾಳ್ಮೆ, ಶಾಂತಿ ಮತ್ತು ಸೌಹಾರ್ದತೆಯ ಸಂಕೇತ” ಎಂದು ಹೇಳಿದರು. ಇದು ಕೇವಲ ಒಂದು ಕ್ಷಣವಲ್ಲ ಎಂದ ಅವರು ಇದು ನಮ್ರತೆಯ ಗೆಲುವು. ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆಯನ್ನು ಪ್ರಧಾನಿ ಮೋದಿ … Continued

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಲಾಲ ಕೃಷ್ಣ ಅಡ್ವಾಣಿ ಪಾಲ್ಗೊಳ್ಳುತ್ತಿಲ್ಲ…

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ತೀವ್ರ ಚಳಿಯ ಕಾರಣ ಇಂದು, ಸೋಮವಾರ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. 96ರ ಹರೆಯದ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಎಚ್‌ಪಿಯ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕಕುಮಾರ … Continued

ಪ್ರಧಾನಿ ಮೋದಿ ಅಯೋಧ್ಯೆ ಕಾರ್ಯಕ್ರಮದ ವೇಳಾಪಟ್ಟಿ ಹೀಗಿದೆ….ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ ಇಲ್ಲಿ ನೋಡಿ

ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಲೈವ್‌  [  ಅಯೋಧ್ಯಾ : ಅಯೋಧ್ಯೆಯಲ್ಲಿ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿದ್ದು ಪೂಜಾರಿಗಳು ವಿವಿಧ ಪೂಜಾ ವಿಧಿ ವಿಧಾನಗಳನ್ನು ಶಾಸ್ತ್ರೊಕ್ತವಾಗಿ ನೆರವೇರಿಸುತ್ತಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್‌ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಭಾಗಿಯಾಗುತ್ತಿದ್ದಾರೆ. ಬಾಲರಾಮನ … Continued

ಅಯೋಧ್ಯೆ ರಾಮಮಂದಿರ ನಿರ್ಮಾಣದಲ್ಲಿ ಕಬ್ಬಿಣ- ಉಕ್ಕನ್ನು ಬಳಸಿಯೇ ಇಲ್ಲ, ಯಾಕೆಂದರೆ….

ನವದೆಹಲಿ : ಅಯೋಧ್ಯೆಯಲ್ಲಿರುವ ರಾಮ ಲಲ್ಲಾ ಅಥವಾ ಭಗವಾನ್ ಬಾಲರಾಮನ ಭವ್ಯವಾದ ದೇವಾಲಯದ ನಿರ್ಮಾಣ ವಿಜ್ಞಾನವನ್ನು ಒಳಗೊಂಡಿರುವ ಸಾಂಪ್ರದಾಯಿಕ ಭಾರತೀಯ ಪರಂಪರೆಯ ವಾಸ್ತುಶಿಲ್ಪದ ಸಂಯೋಜನೆಯಾಗಿದ್ದು ಇದು ಶತಮಾನಗಳವರೆಗೆ ಉಳಿಯುತ್ತದೆ ಎಂದು ವಿಶ್ಲೇಸಲಾಗಿದೆ. ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇವಾಲಯ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೃಪೇಂದ್ರ ಮಿಶ್ರಾ ಅವರು “ದೇವಾಲಯವನ್ನು ಸಾವಿರ ವರ್ಷಗಳಿಗೂ ಹೆಚ್ಚು … Continued

ವೀಡಿಯೊ…| ಅಯೋಧ್ಯೆಯಲ್ಲಿ ಭಗವಾನ್ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ ಸಮಾರಂಭವನ್ನು ಮರಳಿನಲ್ಲಿ ಅದ್ಭುತವಾಗಿ ಚಿತ್ರಿಸಿದ ಕಲಾವಿದ | ವೀಕ್ಷಿಸಿ

ಸೋಮವಾರ ಭವ್ಯವಾದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠಾ’ (ಪ್ರತಿಷ್ಠಾಪನೆ) ಸಮಾರಂಭವನ್ನು ಅದ್ಭುತವಾಗಿ ಚಿತ್ರಿಸುವ ಮರಳು ಅನಿಮೇಷನ್ ಅನ್ನು ಒಡಿಶಾ ಮೂಲದ ಕಲಾವಿದರೊಬ್ಬರು ಹಂಚಿಕೊಂಡಿದ್ದಾರೆ. ಆರು ನಿಮಿಷಗಳ ವೀಡಿಯೊದಲ್ಲಿ ಮರಳು ಕಲಾವಿದ ಮಾನಸ್ ಸಾಹೂ ಎಂಬವರು ಬ್ರಷ್‌ನ ಬದಲಿಗೆ ಕ್ಯಾನ್ವಾಸ್ ಮತ್ತು ಮರಳಿನ ಮೇಲೆ ತನ್ನ ಕೈಗಳನ್ನು ಬಳಸಿ ಚಿತ್ರಿಸುವುದನ್ನು ತೋರಿಸುತ್ತದೆ. ಕಲಾವಿದನು ರಾಮನ … Continued

ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ : ವ್ಯಕ್ತಿ ಬಂಧನ

ಅರರಿಯಾ : ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಾಯಕನಂತೆ ಪೋಸು ನೀಡಿ, ಜನವರಿ 22 ರಂದು (ಸೋಮವಾರ) ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ 21 ವರ್ಷದ ವ್ಯಕ್ತಿಯನ್ನು ಬಿಹಾರದ ಅರರಿಯಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. . ಆರೋಪಿ ಇಂತೇಖಾಬ್ ಆಲಂ ಎಂಬಾತನನ್ನು ಶನಿವಾರ ತಡರಾತ್ರಿ ಬಲುವಾ ಕಲಿಯಗಂಜ್‌ನಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದ್ದು, ಆತ ಮಾನಸಿಕವಾಗಿ ಅಸ್ವಸ್ಥನಂತೆ … Continued

ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಹೊರಟ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ಹಾಗೂ ಕುಟುಂಬದ ಸದಸ್ಯರು ಅಯೋಧ್ಯೆಗೆ ತೆರಳಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್‌ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಪೂಜಾ ಕೈಂಕರ್ಯಗಳು ಈಗಾಗಲೇ ಆರಂಭಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಾಜಿ ಪ್ರಧಾನಿ ದೇವೇಗೌಡರು ಭಾನುವಾರ (ಜನವರಿ … Continued

ಅಯೋಧ್ಯೆಯ ರಾಮ ಮಂದಿರಕ್ಕೆ ಪಾಕ್‌ ಆಕ್ರಮಿತ ಕಾಶ್ಮೀರದಿಂದ ನೀರು ಕಳುಹಿಸಿದ ಮುಸ್ಲಿಂ ವ್ಯಕ್ತಿ…!

ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಭಗವಾನ್‌ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ ಕಳುಹಿಸಿದ್ದಾರೆ…! 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರದಲ್ಲಿ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ … Continued

ಮುಖ ಸಂಪೂರ್ಣವಾಗಿ ಕಂಡ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ : ರಾಮ ಮಂದಿರದ ಮುಖ್ಯ ಅರ್ಚಕರ ಸ್ಪಷ್ಟನೆ

ನವದೆಹಲಿ: ಶುಕ್ರವಾರ ವೈರಲ್‌ ಆಗಿರುವ ರಾಮಮಂದಿರ ಗರ್ಭಗುಡಿಯಲ್ಲಿನ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ. ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ವಿಗ್ರಹದ ಚಿತ್ರಗಳು ಹೇಗೆ ಸೋರಿಕೆಯಾದವು ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ. ಗುರುವಾರ ಬಹಿರಂಗಗೊಂಡಿದ್ದ ಚಿತ್ರದಲ್ಲಿ ವಿಗ್ರಹದ ಕಣ್ಣುಗಳಿಗೆ ಹಳದಿ … Continued

ಮಾಧ್ಯಮ, ಸೋಶಿಯಲ್ ಮೀಡಿಯಾಗಳಲ್ಲಿ ರಾಮ ಮಂದಿರದ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಬೇಡಿ : ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸಲಹೆ

ನವದೆಹಲಿ: ಮುಂಬರುವ ರಾಮಮಂದಿರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸುಳ್ಳು ಅಥವಾ ನಕಲಿ ವಿಷಯವನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರವು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಕಟ್ಟುನಿಟ್ಟಿನ ಸಲಹೆ  ನೀಡಿದೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕೆಲವು ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ಪ್ರಸಾರ ಮಾಡುವ ಸಾಧ್ಯತೆ ಬಗ್ಗೆ ಒತ್ತಿ ಹೇಳಿದ್ದು, ಇದು ಸಾಮಾಜಿಕ ಮಾಧ್ಯಮಗಳಲ್ಲಿ, … Continued