ವೀಡಿಯೊ..| ಅಯೋಧ್ಯೆಯಲ್ಲಿ ರಾಮನವಮಿ ದಿನ ಬಾಲರಾಮನ ಹಣೆಗೆ ʼಸೂರ್ಯ ರಶ್ಮಿಯ ತಿಲಕ ʼ ; ಅದ್ಭುತ ದೃಶ್ಯ ಕಣ್ತುಂಬಿಕೊಂಡ ಭಕ್ತ ಸಾಗರ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ನಡೆಯುತ್ತಿರುವ ಮೊದಲ ರಾಮನವಮಿ ಆಚರಣೆ ಸಂಭ್ರಮದಿಂದ ನಡೆಯುತ್ತಿದೆ. ಬಾಲರಾಮ (ರಾಮ ಲಲ್ಲಾ)ನ ದರ್ಶನಕ್ಕಾಗಿ ಲಕ್ಷಾಂತರ ಜನರು ಆಗಮಿಸಿದ್ದಾರೆ. ಇದೇ ವೇಳೆ ಸೂರ್ಯ ರಶ್ಮಿ ಬಾಲರಾಮನ ಹಣೆಗೆ ಸ್ಪರ್ಶಿಸುವ ʼಸೂರ್ಯ ತಿಲಕʼದ ವಿಸ್ಮಯಕಾರಿ ದೃಶ್ಯವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ದೇವಾಲಯದ ಟ್ರಸ್ಟ್‌ನಿಂದ ನಿಯೋಜಿಸಲ್ಪಟ್ಟ ಪ್ರಮುಖ ಸರ್ಕಾರಿ ಸಂಸ್ಥೆಯ ವಿಜ್ಞಾನಿಗಳು … Continued

ನಕ್ಸಲರು ಮುಚ್ಚಿಸಿದ್ದ ಶ್ರೀರಾಮ ಮಂದಿರದ ಬಾಗಿಲು ಬರೋಬ್ಬರಿ 21 ವರ್ಷಗಳ ಬಳಿಕ ತೆರೆಯಿತು…

ರಾಯಪುರ (ಛತ್ತೀಸ್‌ಗಢ) :ಛತ್ತೀಸಗಢದ ಸುಕ್ಮಾ ಜಿಲ್ಲೆಯ ಕುಗ್ರಾಮವೊಂದರ ಜನತೆ ಈಗ ಸಂಭ್ರಮಿಸುತ್ತಿದ್ದಾರೆ. ಏಕೆಂದರೆ ಅಲ್ಲಿನ ಕೆರ್ಲಪೆಂಡಾ ಎಂಬ ಗ್ರಾಮದಲ್ಲಿ ಶ್ರೀರಾಮನ ದೇಗುಲಕ್ಕೆ ಬಿದ್ದಿದ್ದ ಬೀಗ ಮುದ್ರೆ 21 ವರ್ಷಗಳ ನಂತರ ಈಗ ತೆರವಾಗಿದೆ. ನಕ್ಸಲರ ಆಜ್ಞೆಯಂತೆ ಬಾಗಿಲು ಮುಚ್ಚಿದ ದೇಗುಲ 21 ವರ್ಷಗಳ ನಂತರ ಬಾಗಿಲು ತೆರೆದಿದೆ. 21 ವರ್ಷಗಳ ಹಿಂದೆ ಈ ಗ್ರಾಮದ ಮೇಲೆ … Continued

ಅಯೋಧ್ಯೆ ಬಾಲರಾಮನ ಕಣ್ತುಂಬಿಕೊಳ್ಳಲು ಭಕ್ತ ಸಾಗರ: 11 ದಿನದಲ್ಲಿ ರಾಮಮಂದಿರಕ್ಕೆ ಭೇಟಿ ನೀಡಿದವರು ಎಷ್ಟು ಗೊತ್ತಾ..?

ಅಯೋಧ್ಯಾ : ಜನವರಿ 22 ರಂದು ರಾಮಮಂದಿರದ ಉದ್ಘಾಟನೆ ನಂತರ, ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದ ಟ್ರಸ್ಟ್‌ನ ಕಚೇರಿ ಪ್ರಭಾರಿ ಪ್ರಕಾಶ ಗುಪ್ತಾ ಪ್ರಕಾರ, ಕಳೆದ 11 ದಿನಗಳಲ್ಲಿ ಸುಮಾರು 8 ಕೋಟಿ ರೂಪಾಯಿಗಳನ್ನು ಕಾಣಿಕೆ ಪೆಟ್ಟಿಗೆಗಳಲ್ಲಿ ಸಂಗ್ರಹವಾಗಿದೆ. ಚೆಕ್ ಮತ್ತು ಆನ್‌ಲೈನ್ ಮೂಲಕ ಪಡೆದ … Continued

“ದಯವಿಟ್ಟು ಬೇರೆ ಕಾಲೋನಿಗೆ ಹೋಗಿ…”: ರಾಮಮಂದಿರ ವಿರೋಧಿ ಪೋಸ್ಟ್‌ ನಂತರ ಮಣಿಶಂಕರ್ ಅಯ್ಯರ್ ಮಗಳಿಗೆ ಮನೆ ತೊರೆಯುವಂತೆ ನೋಟಿಸ್‌

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಪುತ್ರಿ ಸುರಣ್ಯಾ ಅಯ್ಯರ್ ಅವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ತೆರೆಯುವುದನ್ನು ಖಂಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ದೆಹಲಿಯ ಜಂಗ್‌ಪುರದ ನಿವಾಸಿ ಕಲ್ಯಾಣ ಸಂಘ (ಆರ್‌ಡಬ್ಲ್ಯೂಎ) ಅವರಿಗೆ ತಮ್ಮ ಮನೆ ಬಿಟ್ಟು ಹೋಗುವಂತೆ ಸೂಚಿಸಿದೆ. ಈ ಕುರಿತು ದೆಹಲಿಯ ಜಂಗ್ಪುರ ವಿಸ್ತರಣೆಯ ನಿವಾಸಿಗಳ ಕಲ್ಯಾಣ ಸಂಘ(RWA)ವು … Continued

ರಾಮಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯ ಇಮಾಮ್ ವಿರುದ್ಧ ಫತ್ವಾ, ಬೆದರಿಕೆ ಕರೆ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಿದ ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಡಾ.ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ವಿರುದ್ಧ ಫತ್ವಾ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಫತ್ವಾವನ್ನು ಭಾನುವಾರ ಹೊರಡಿಸಲಾಗಿದೆ. ಆದರೆ ರಾಮ ಮಂದಿರದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಿನದಿಂದಲೂ ತನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು … Continued

ರಾಮಮಂದಿರ ಪ್ರತಿಷ್ಠಾಪನೆ ಪ್ರಾದೇಶಿಕ ಶಾಂತಿಗೆ ದೊಡ್ಡ ಬೆದರಿಕೆ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಕ್ಯಾತೆ

ವಿಶ್ವಸಂಸ್ಥೆ : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯು ‘ಪ್ರದೇಶದ ಶಾಂತಿ’ಗೆ ‘ದೊಡ್ಡ ಬೆದರಿಕೆಯಾಗಿದೆ’ ಎಂದು ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರಿಗೆ ಪತ್ರ ಬರೆದು ಎಚ್ಚರಿಸುವ ಮೂಲಕ ಪಾಕಿಸ್ತಾನವು ರಾಮ ಮೀದರದ ಉದ್ಘಾಟನೆಗೆ ಕ್ಯಾತೆ ತೆಗೆದಿದೆ. ಅಯೋಧ್ಯೆಯಲ್ಲಿ ಧ್ವಂಸಗೊಂಡ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮತ್ತು ಪವಿತ್ರೀಕರಣವನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ ಎಂದು ಪಾಕಿಸ್ತಾನದ ವಿಶ್ವ ಸಂಸ್ಥೆಯ ಕಾಯಂ … Continued

ಉದ್ಘಾಟನೆಯಾದ 2ನೇ ದಿನವೇ ಅಯೋಧ್ಯೆ ರಾಮ ಮಂದಿರದೊಳಕ್ಕೆ ಮಂಗ(ಹುನುಮಂತ)ನ ಪ್ರವೇಶ….

ಅಯೋಧ್ಯೆ: ಭಗವಾನ್‌ ರಾಮ ಇರುವಲ್ಲಿ ಹನುಮಂತ ಇದ್ದೇ ಇರುತ್ತಾನೆ ಎನ್ನುವುದು ಬಲವಾದ ನಂಬಿಕೆ. ಈ ನಂಬಿಕೆಗೆ ಕಾಕತಾಳೀಯವಾದ ಘಟನೆ ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿದೆ. ಮಂದಿರ ಉದ್ಘಾಟನೆಯಾದ ಮಾರನೇ ದಿನ ಮಂಗವೊಂದು ಮಂದಿರದ ಗರ್ಭಗುಡಿ ಪ್ರವೇಶಿಸಿ, ರಾಮನನ್ನು ಕಣ್ತುಂಬಿಕೊಂಡ ಘಟನೆ ನಡೆದಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಾಮಾಜಿಕ ಜಾಲತಾಣ … Continued

ವೀಡಿಯೊ…| ನಾವು ಅಯೋಧ್ಯೆಯಲ್ಲಿ ಏನು ನೋಡಿದ್ದೇವೆ…”: ರಾಮ ಮಂದಿರ ಕಾರ್ಯಕ್ರಮದ ಮಿಂಚು ನೋಟ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸೋಮವಾರ ಉದ್ಘಾಟನೆ ಮಾಡಿದ ಕುರಿತಾದ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ ಮತ್ತು “ಮುಂದಿನ ವರ್ಷಗಳಲ್ಲಿ ಇದು ನಮ್ಮ ನೆನಪಿನಲ್ಲಿ ಉಳಿಯುತ್ತದೆ” ಎಂದು ಹೇಳಿದ್ದಾರೆ. ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿಯ ಛತ್ರಿಯನ್ನು ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ … Continued

ವೀಡಿಯೊ…| ‘ಪ್ರಾಣ ಪ್ರತಿಷ್ಠೆ’ಯ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ಭಾರೀ ಸಂಖ್ಯೆಯ ಭಕ್ತರ ನೂಕುನುಗ್ಗಲು

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿಯವರ ಯಜಮಾನತ್ವದಲ್ಲಿ ಮತ್ತು ಸಾಧು-ಸಂತರು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ವಿಧಿವತ್ತಾಗಿ ನಡೆದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಒಂದು ದಿನದ ನಂತರ ಅಯೋಧ್ಯೆಯ ರಾಮಮಂದಿರವನ್ನು ಇಂದು, ಮಂಗಳವಾರ ಬೆಳಿಗ್ಗೆ ಸಾರ್ವಜನಿಕರಿಗೆ ತೆರೆಯಲಾಗುತ್ತಿದೆ. ತೆರೆಯುವ ಮುನ್ನವೇ ದೇವಸ್ಥಾನದ ಮುಂಭಾಗದಲ್ಲಿ ಜನಸಾಗರವೇ ಕಂಡುಬಂತು. ಬೆಳಗಿನ ಜಾವ 3 ಗಂಟೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದ … Continued

ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ವಿಗ್ರಹದ ಮೇಲೆ ಯಾವೆಲ್ಲ ಆಭರಣಗಳಿವೆ…?

ಅಯೋಧ್ಯೆ: ರಾಮ ಮಂದಿರದಲ್ಲಿ ಭಗವಾನ್‌ ರಾಮ ಲಲ್ಲಾ ವಿಗ್ರಹ ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅದ್ಧೂರಿ ಸಮಾರಂಭದಲ್ಲಿ ನೆರವೇರಿಸಿದರು. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಾವಿರಾರು ಸಂತರು, ಕಲಾವಿದರು, ಸೆಲೆಬ್ರಿಟಿಗಳು, ಉದ್ಯಮಿಗಳು, ರಾಜಕಾರಣಿಗಳು ಸೇರಿದಂತೆ ಏಳು ಸಾವಿರಕ್ಕೂ ಹೆಚ್ಚು ವಿಶೇಷ ಆಹ್ವಾನಿತರು ಭಾಗವಹಿಸಿದ್ದರು. ಜನವರಿ 23 ರಿಂದ ಭಕ್ತರಿಗಾಗಿ ದೇವಾಲಯವನ್ನು … Continued