ಅಯೋಧ್ಯೆ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮದ ವೇಳೆ 1 ಲಕ್ಷ ತಿರುಪತಿ ಲಡ್ಡುಗಳ ವಿತರಣೆ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಮಹಾಮಸ್ತಕಾಭಿಷೇಕದಲ್ಲಿ ಭಾಗವಹಿಸುವ ಎಲ್ಲಾ ಅತಿಥಿಗಳು ಮತ್ತು ಭಕ್ತರಿಗೆ ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ದೇವರ ಪ್ರಸಿದ್ಧ ಪ್ರಸಾದವಾದ ‘ಶ್ರೀವಾರಿ ಲಡ್ಡು’ ಅನ್ನು ನೀಡಲಾಗುತ್ತದೆ. ವಿಶ್ವವಿಖ್ಯಾತ ವೆಂಕಟೇಶ್ವರ ದೇವಸ್ಥಾನದ ವ್ಯವಹಾರಗಳನ್ನು ನಿರ್ವಹಿಸುತ್ತಿರುವ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಒಂದು ಲಕ್ಷ ‘ಶ್ರೀವಾರಿ ಲಡ್ಡು’ … Continued

ಬಾಬ್ರಿ ಮಸೀದಿ ಪರ ಪ್ರಮುಖ ದಾವೆದಾರ ಇಕ್ಬಾಲ್ ಅನ್ಸಾರಿಗೂ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಬಾಬ್ರಿ ಮಸೀದಿ ಪರ ದಾವೆದಾರರಾಗಿದ್ದ ಇಕ್ಬಾಲ್ ಅನ್ಸಾರಿ ಅವರನ್ನೂ ಆಹ್ವಾನಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರಿಗೆ ಆಹ್ವಾನ ನೀಡಲಾಗಿದೆ. ಇಕ್ಬಾಲ್ ಅನ್ಸಾರಿ ಅವರು ಬಾಬರಿ ಮಸೀದಿಯ ಪ್ರಮುಖ … Continued

ಅಯೋಧ್ಯೆ ರಾಮ ಮಂದಿರ : ನಾಗರಶೈಲಿಯ ದೇವಾಲಯ ; 392 ಕಂಬಗಳು, 44 ದ್ವಾರಗಳು, ಹತ್ತು ಹಲವು ವಿಶೇಷತೆಗಳು- ಮಾಹಿತಿ ಇಲ್ಲಿದೆ…

ಅಯೋಧ್ಯೆ: ಇದೇ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿರುವ ಮತ್ತು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಅಯೋಧ್ಯೆಯ ರಾಮ ಮಂದಿರವು ಹಲವು ವಿಶೇಷತೆಗಳನ್ನು ಒಳಗೊಂಡಿದೆ. ರಾಮ ಮಂದಿರದ ವಿಶೇಷತೆಗಳ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇವಾಲಯದ ಪ್ರಮುಖ ವೈಶಿಷ್ಟ್ಯಗಳನ್ನು ಹಂಚಿಕೊಂಡಿದೆ. * ರಾಮಮಂದಿರವನ್ನು ನಾಗರ ಶೈಲಿಯಲ್ಲಿ ನಿರ್ಮಿಸಲಾಗಿದೆ. … Continued

ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಇಡೀ ಜಗತ್ತಿಗೆ ಸೇರಿದವನು : ಫಾರೂಕ್ ಅಬ್ದುಲ್ಲಾ

ಅಯೋಧ್ಯಾ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಹಕರಿಸಿದ ಜನರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ಅಭಿನಂದಿಸಿದ್ದಾರೆ. ರಾಮಮಂದಿರದ ಮಹಾ ಉದ್ಘಾಟನೆ ಜನವರಿ 22 ರಂದು ನಡೆಯಲಿದೆ. “ಅಯೋಧ್ಯೆ ರಾಮ ಮಂದಿರವು ಉದ್ಘಾಟನೆಗೊಳ್ಳಲಿದೆ. ದೇವಾಲಯಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಅದು ಈಗ ಸಿದ್ಧವಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ … Continued

ವೀಡಿಯೊ..| ಭಗವಾನ್‌ ರಾಮನ ದರ್ಶನಕ್ಕೆ ಅಯೋಧ್ಯೆಗೆ ಪಾದಯಾತ್ರೆ ಹೊರಟ ಮುಸ್ಲಿಂ ಯುವತಿ…!

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು, ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಲೋಕಾರ್ಪಣೆ ಮಾಡಲಿದ್ದಾರೆ. ಗರ್ಭಗುಡಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈಗಾಗಲೇ ಸಾವಿರಾರು ಗಣ್ಯರಿಗೆ ರಾಮಮಂದಿರ ಟ್ರಸ್ಟ್‌ನಿಂದ ಆಹ್ವಾನ ಕಳುಹಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಭರದ ಸಿದ್ಧತೆ ನಡೆಸಲಾಗುತ್ತಿದೆ. ಈ ಮಧ್ಯೆ ಶ್ರೀರಾಮನ ದರ್ಶನಕ್ಕಾಗಿ ಮುಂಬೈನ ಮುಸ್ಲಿಂ … Continued

ಭಗವಾನ್‌ ರಾಮ ಆಹ್ವಾನಿಸಿದವರು ಮಾತ್ರ ಬರ್ತಾರೆ”: ರಾಮಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ ಸಿಪಿಐ(ಎಂ) ಸೀತಾರಾಮ ಯೆಚೂರಿ ಬಗ್ಗೆ ಬಿಜೆಪಿ

ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಹಾಜರಾಗುವುದಿಲ್ಲ ಎಂದು ಸಿಪಿಐ(ಎಂ) ಮಂಗಳವಾರ ಖಚಿತಪಡಿಸಿದ ನಂತರ ವಿವಾದ ಭುಗಿಲೆದ್ದಿದೆ. ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, “ಎಲ್ಲರಿಗೂ ಆಹ್ವಾನ ಕಳುಹಿಸಲಾಗಿದೆ (ಆದರೆ) ಭಗವಾನ್ ರಾಮ ಕರೆದವರು ಮಾತ್ರ ಬರುತ್ತಾರೆ” ಎಂದು ಹೇಳಿದ್ದಾರೆ. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ … Continued

ವೀಡಿಯೊ..| 5,000 ಅಮೆರಿಕನ್ ವಜ್ರಗಳು-2 ಕೆಜಿ ಬೆಳ್ಳಿ ಬಳಸಿ ʼರಾಮಮಂದಿರʼ ನೆಕ್ಲೇಸ್ ತಯಾರಿಕೆ : ವಜ್ರದ ವ್ಯಾಪಾರಿಯಿಂದ ಅಯೋಧ್ಯಾ ರಾಮನಿಗೆ ನೆಕ್ಲೇಸ್ ಸಮರ್ಪಣೆ

ಸೂರತ್: ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುನ್ನ ವಜ್ರದ ವ್ಯಾಪಾರಿಯೊಬ್ಬರು ರಾಮಮಂದಿರದ ನೆಕ್ಲೇಸ್ ಅನ್ನು ತಯಾರಿಸಿದ್ದಾರೆ. ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸಿರುವ ಈ ನೆಕ್ಲೇಸ್ ಅನ್ನು 5,000 ಅಮೆರಿಕನ್ ವಜ್ರಗಳು ಮತ್ತು ಎರಡು ಕೆಜಿ ಬೆಳ್ಳಿಯನ್ನು ಬಳಸಿ ತಯಾರಿಸಲಾಗಿದೆ. ‘ಡೈಮಂಡ್-ಸಿಟಿ’ ಸೂರತ್‌ನಲ್ಲಿ ವಜ್ರದ ವ್ಯಾಪಾರದಿಂದ ನೆಕ್ಲೇಸ್ ಮಾಡಲಾಗಿದೆ. ನೆಕ್ಲೇಸ್ ತಯಾರಿಕೆಯಲ್ಲಿ ಏನು ಬಳಸಲಾಗಿದೆ? ಒಟ್ಟು 40 ಕುಶಲಕರ್ಮಿಗಳು … Continued

ಅಯೋಧ್ಯೆ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಎಲ್‌ಕೆ ಅಡ್ವಾಣಿ, ಮುರಳಿಮನೋಹರ ಜೋಶಿಗೆ ಮನವಿ: ರಾಮಮಂದಿರ ಟ್ರಸ್ಟ್

ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿ ಹಿರಿಯರಾದ ಎಲ್‌.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣ ಮುಂದಿನ ತಿಂಗಳು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ ಎಂದು ದೇವಸ್ಥಾನದ ಟ್ರಸ್ಟ್ ಸೋಮವಾರ ತಿಳಿಸಿದೆ. “ಇಬ್ಬರೂ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಪಾಲ್ಗೊಳ್ಳದಂತೆ … Continued

“ಹಿಂದೂಗಳ ಕನಸು ನನಸಾಗಲಿ”: ರಾಮಮಂದಿರ ಉದ್ಘಾಟನೆಗೆ ಬಗ್ಗೆ ತೆಲಂಗಾಣ ಬಿಆರ್‌ಎಸ್‌ ನಾಯಕಿ ಕವಿತಾ

ಹೈದರಾಬಾದ್ : ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ಸಿದ್ಧತೆಗಳು ನಡೆಯುತ್ತಿದ್ದು, ಕೋಟ್ಯಂತರ ಹಿಂದೂಗಳ ಕನಸು ನನಸಾಗಿದೆ ಎಂದು ತೆಲಂಗಾಣದ ನಿರ್ಗಮಿತ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಪತ್ರಿ ಮತ್ತು ಬಿಆರ್‌ಎಸ್ ವಿಧಾನ ಪರಿಷತ್‌ ಸದಸ್ಯೆ ಕಲ್ವಕುಂಟ್ಲಾ ಕವಿತಾ ಭಾನುವಾರ ಹೇಳಿದ್ದಾರೆ. X ನಲ್ಲಿ ಬರೆದ ಪೋಸ್ಟ್‌ನಲ್ಲಿ, ಅವರು ಉದ್ಘಾಟನೆಗೊಳ್ಳಲಿರುವ ಭವ್ಯವಾದ ರಾಮಮಂದಿರದ ಬಗ್ಗೆ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. … Continued

ಅಯೋಧ್ಯೆ ರಾಮಮಂದಿರದ 20 ಅರ್ಚಕರ ಹುದ್ದೆಗಳಿಗೆ 3000 ಅರ್ಜಿಗಳು

ಅಯೋಧ್ಯೆ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದಲ್ಲಿ 20 ಅರ್ಚಕರ ಹುದ್ದೆಗೆ ಸುಮಾರು 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಚಕರ ನೇಮಕಾತಿಗೆ ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ ಜಾಹೀರಾತು ನೀಡಿತ್ತು. ಅದರಂತೆ 3,000 ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಆ ಪೈಕಿ 200 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. … Continued