ನನ್ನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ನವಿಲು : ಅರಣ್ಯ ಇಲಾಖೆಗೆ ದೂರು ನೀಡಿದ ಮಹಿಳೆ…!

ರಾಮನಗರ : ತನ್ನ ಮೇಲೆ ನವಿಲೊಂದರ ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ಅರಣ್ಯ ಇಲಾಖೆಗೆ ದೂರು ನೀಡಿರುವ ವಿದ್ಯಮಾನವೊಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರದ ಲಿಂಗಮ್ಮ ಎಂಬವರು ಜೂನ್‌ 28ರಂದು ತನ್ನ ಮೇಲೆ ನವಿಲೊಂದು ದಾಳಿ ಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ದೂರು … Continued

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ –ಜೆಡಿಎಸ್ ಮೈತ್ರಿ ಸುಳಿವು ನೀಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ

ರಾಮನಗರ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಹೆಚ್ಚು ಸ್ಥಾನಗಳನ್ನು ಗೆಲ್ಲಲು ರಾಜ್ಯದಲ್ಲಿ ಬಿಜೆಪಿಯು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹದ ಮಧ್ಯೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಈ ಬಗ್ಗೆ ಸುಳಿವು ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆಯಾಗಬಹುದು. ಜೆಡಿಎಸ್ ಜೊತೆ ಹೊಂದಾಣಿಕೆ ಆಗಬಹುದು. … Continued

ಕನಕಪುರ :ಕಾಡಾನೆ ದಾಳಿಗೆ ಅಕ್ಕ ಸ್ಥಳದಲ್ಲೇ ಸಾವು, ತಂಗಿಗೆ ಗಂಭೀರ ಗಾಯ

ರಾಮನಗರ: ಅಕ್ಕ-ತಂಗಿ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಅಕ್ಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಹಾಗೂ ತಂಗಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಕ್ಕ ಜಯಮ್ಮ (೫೦)ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತಂಗಿ ವೆಂಕಟಲಕ್ಷ್ಮಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದು ಕನಕಪುರ … Continued

ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ : ಸಂಸದ ಡಿ.ಕೆ.ಸುರೇಶ

ರಾಮನಗರ : ಮುಂಬರುವ ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆದ ನಂತರ ನಿರ್ಧಾರ ತೆಗೆದುಕೊಳ್ಳುತ್ತೇನೆ. ಯಾರೂ ಸೂಕ್ತ ಎಂದು ಅವರು ತೀರ್ಮಾನ ಮಾಡಿದರೆ ಅವರಿಗೆ ಬೆಂಬಲ ನೀಡುತ್ತೇನೆ. ರಾಜಕೀಯ ಸಾಕಾಗಿದೆ ಎಂದು ಸಂಸದ ಡಿ.ಕೆ. ಸುರೇಶ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ … Continued

ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ : ಕೋಪದಲ್ಲಿ ಕ್ರೇನಿಗೆ ಗುದ್ದಿ ದಂತ ಮುರಿದುಕೊಂಡ ಆನೆ..!

ರಾಮನಗರ: ಐದು ದಿನಗಳ ಅಂತರದಲ್ಲಿ ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ ಸಿಕ್ಕಿದೆ. ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಸಿಕ್ಕಿಬಿದ್ದ 40 ವರ್ಷದ ಗಂಡಾನೆಯನ್ನು ಲಾರಿಗೆ ಹತ್ತಿಸುವ ವೇಳೆ ಅದರ ದಂತ ಮುರಿದು ಹೋಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಬಳಿಯ … Continued

ರಾಮನಗರ : ಸಾಧಾರಣ ಮಳೆಗೆ ಜಲಾವೃತಗೊಂಡ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ | ವೀಕ್ಷಿಸಿ

ಬೆಂಗಳೂರು: ಆರು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಕರ್ನಾಟಕದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ, ರಾಮನಗರದಲ್ಲಿ ಭಾರಿ ಮಳೆಯ ನಂತರ ಕೆರೆಯಾಗಿ ಮಾರ್ಪಟ್ಟಿದೆ. ಇದು ಕೆಲವು ಬಂಪರ್-ಟು ಬಂಪರ್ ಅಪಘಾತಗಳಿಗೆ ಕಾರಣವಾಯಿತು ಮತ್ತು ಹೆದ್ದಾರಿಯಲ್ಲಿ ನೀರು ತುಂಬಿದ್ದರಿಂದ ವಾಹನಗಳು ತೆವಳುತ್ತ ಹೋಗಲು ಕಾರಣವಾಯಿತು. ಅಧಿಕಾರಿಗಳ ನಿರಾಸಕ್ತಿ ಮತ್ತು ನಿರ್ಲಕ್ಷ್ಯವನ್ನು ತೋರಿಸುತ್ತಾ, ಕೋಪಗೊಂಡ ವಾಹನ ಸವಾರರು. 8,400 … Continued

ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

ರಾಮನಗರ : ಸಾಲಗಾರರ ಕಾಟಕ್ಕೆ ಹೆದರಿ ಒಂದೇ ಕುಟುಂಬದ ಏಳು ಮಂದಿ ಇಲಿಪಾಷಾಣ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ದೊಡ್ಡಮಣ್ಣುಗುಡ್ಡೆದೊಡ್ಡಿಯಲ್ಲಿ ನಡೆದಿದೆ. ಇವರಲ್ಲಿ ಮಹಿಳೆಯೊಬ್ಬಳು ಮೃತಪಟ್ಟಿದ್ದು, ಆರು ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೃತಪಟ್ಟ ಮಹಿಳೆಯನ್ನು ಮಂಗಳಮ್ಮ (28) ಎಂದು ಗುರುತಿಸಲಾಗಿದೆ. ಉಳಿದ ಆರು ಮಂದಿಯನ್ನು ಮಂಡ್ಯದ ವಿಮ್ಸ್‌ಗೆ ದಾಖಲಿಸಿ ತೀವ್ರ ನಿಗಾ … Continued

ಬೊಲೆರೊ ಡಿಕ್ಕಿ: ಮೂವರು ಮಹಿಳೆಯರು ಸಾವು

ಕಾರವಾರ : ಭೀಕರ ಅಪಘಾತವೊಂದರಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಸೀತಾವಾಡದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಖಾನಾಪುರದ ಫಾರ್ಲಿಯ ಪಾರ್ವತಿ ಗಾವಡಾ (55), ದುರ್ಗೆ ಕೋಲ್ಸೇಕರ್ (55), ತುಳಸಿ ಗಾವಡಾ (50) ಎಂದು ಗುರುತಿಸಲಾಗಿದೆ. ಬಿಪಿನ್‌ ತಾಳ್ವೆ ಎಂಬ … Continued

ಊಟದ ವಿಚಾರಕ್ಕೆ ಜಗಳ: ತಾಯಿ, ಮಗ ಆತ್ಮಹತ್ಯೆ

ರಾಮನಗರ: ಕೌಟುಂಬಿಕ ಕಲಹದಿಂದ ನೊಂದು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಲೇಔಟ್‍ನಲ್ಲಿ ನಡೆದ ವರದಿಯಾಗಿದೆ. ಮೃತರನ್ನು ವಿಜಯಲಕ್ಷ್ಮೀ (50) ಹಾಗೂ ಹರ್ಷ (25) ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮೀ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ ಎನ್ನಲಾಗಿದೆ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು … Continued

ಮಗನಿಗಾಗಿ ರಾಮನಗರ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಪತ್ನಿ, ರಾಮನಗರ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಪುತ್ರ ನಿಖಿಲ್‌ಗಾಗಿ ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಪ್ರತಿನಿಧಿಸುತ್ತಿರುವ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್‌ ಸ್ಪರ್ಧಿಸಲಿದ್ದಾರೆ ಎಂದು ಸ್ವತಃ ಅನಿತಾ ಕುಮಾರಸ್ವಾಮಿ ಶನಿವಾರ ಘೋಷಿಸಿದ್ದು, ಈ ಮೂಲಕ ಊಹಾಪೋಹಹಳಿಗೆ ತೆರೆ … Continued