ಹಾವೇರಿ | ನೀರು ಹಾಯಿಸಲು ಹೋದ ಸಹೋದರರ ಮೇಲೆ ಚಿರತೆ ದಾಳಿ ; ಓರ್ವ ಸಾವು
ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ್ದು, ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಿರತೆ ದಾಳಿಯಿಂದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಎಂಬವರು ಮೃತಟ್ಟಿದ್ದಾರೆ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಸಹೋದರ ಗಣೇಶ ಬಳಗಾವಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. … Continued