ಹಾವೇರಿ | ನೀರು ಹಾಯಿಸಲು ಹೋದ ಸಹೋದರರ ಮೇಲೆ ಚಿರತೆ ದಾಳಿ ; ಓರ್ವ ಸಾವು

ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ್ದು, ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಿರತೆ ದಾಳಿಯಿಂದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಎಂಬವರು ಮೃತಟ್ಟಿದ್ದಾರೆ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಸಹೋದರ ಗಣೇಶ ಬಳಗಾವಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. … Continued

ರಟ್ಟಿಹಳ್ಳಿ: ಮೆರವಣಿಗೆ ವೇಳೆ ಕಲ್ಲು ತೂರಾಟ, 15 ಮಂದಿ ಪೊಲೀಸ್ ವಶಕ್ಕೆ

ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದ ಮೆರವಣಿಗೆಯ ವೇಳೆ ನಿರ್ದಿಷ್ಟ ಸಮುದಾಯದ ಮನೆಗಳು ಹಾಗೂ ಪ್ರಾರ್ಥನಾ ಸ್ಥಳಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಅದು ಮಂಗಳವಾರ ಈ ಪ್ರದೇಶದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಯಿತು. ಪೊಲೀಸರು 15 ಮಂದಿಯನ್ನು ವಶಕ್ಕೆ ಪಡೆದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಇಂದು ಮಂಗಳವಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯೊಂದಿಗೆ ಹಿಂದೂ ಸಂಘಟನೆಗಳ ಸದಸ್ಯರು … Continued