ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್‌ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರನ್ನು ಬಿಡುಗಡೆ ಮಾಡಲಾಗಿದೆ” ಎಂದು ಏಪ್ರಿಲ್ 13 ರಂದು ಹೊರಡಿಸಲಾದ … Continued

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರದ ನಂತರ ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಸರ್ಜಿಸಿದ ಡಿ.ಕೆ. ಶಿವಕುಮಾರ

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಂಗೀಕರಿಸಿದ್ದಾರೆ. ಅಲ್ಲದೆ, ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ … Continued

ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ರಾಜೀನಾಮೆ

ನವದೆಹಲಿ: ಭ್ರಷ್ಟಾಚಾರದ ಆರೋಪದ ಮೇಲೆ ವಜಾಗೊಳಿಸುವ ಪ್ರಕ್ರಿಯೆಯನ್ನು (Impeachment) ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವರ್ಷ ದೆಹಲಿಯ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾದ ನಂತರ ವರ್ಮಾ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ನ್ಯಾಯಮೂರ್ತಿ … Continued

ಇರಾನ್ ಮೇಲೆ ಪರಮಾಣು ಅಸ್ತ್ರ ಬಳಕೆ ಸಿದ್ಧತೆ ಬಗ್ಗೆ ಎಚ್ಚರಿಸಿ ವಿಶ್ವಸಂಸ್ಥೆಯ ರಾಜತಾಂತ್ರಿಕ ಅಧಿಕಾರಿ ರಾಜೀನಾಮೆ

ವಿಶ್ವಸಂಸ್ಥೆಯ ರಾಜತಾಂತ್ರಿಕರೊಬ್ಬರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ (ECOSOC) ವಿಶೇಷ ಸಲಹಾ ಸ್ಥಾನಮಾನ ಹೊಂದಿರುವ ಅಂತಾರಾಷ್ಟ್ರೀಯ ಸಂಸ್ಥೆ ‘ಪೇಟ್ರಿಯಾಟಿಕ್ ವಿಷನ್’ (PVA) ನ ಮುಖ್ಯ ಪ್ರತಿನಿಧಿ ಮೊಹಮದ್ ಸಫಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇರಾನ್‌ನಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ಸಂಭವನೀಯ ಸನ್ನಿವೇಶಕ್ಕೆ ವಿಶ್ವಸಂಸ್ಥೆಯು ಸಿದ್ಧತೆ ನಡೆಸುತ್ತಿದೆ … Continued

ಬಿಹಾರದಲ್ಲಿ ಹೊಸ ನಾಯಕತ್ವಕ್ಕೆ ದಾರಿ: ಪರಿಷತ್ ಸದಸ್ಯತ್ವಕ್ಕೆ ನಿತೀಶಕುಮಾರ ರಾಜೀನಾಮೆ

ಪಾಟ್ನಾ: ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನಿತೀಶಕುಮಾರ ಸೋಮವಾರ (ಮಾರ್ಚ್ 30) ತಮ್ಮ ಬಿಹಾರ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ತಿಂಗಳ ಆರಂಭದಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಮಾರ್ಚ್ 16 ರಂದು ನಿತೀಶಕುಮಾರ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. … Continued

ನೈತಿಕತೆಯ ಭಿನ್ನಾಭಿಪ್ರಾಯ ಉಲ್ಲೇಖಿಸಿ ಎಚ್‌ಡಿಎಫ್‌ಸಿ ಬ್ಯಾಂಕ್ ಅಧ್ಯಕ್ಷ ಅತಾನು ಚಕ್ರವರ್ತಿ ರಾಜೀನಾಮೆ

ಮುಂಬೈ: ಭಾರತದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್‌ ಆದ ಎಚ್‌ಡಿಎಫ್‌ಸಿ (HDFC) ಬ್ಯಾಂಕ್‌ನ ಅರೆಕಾಲಿಕ ಅಧ್ಯಕ್ಷರಾದ ಅತಾನು ಚಕ್ರವರ್ತಿ ಅವರು ಬುಧವಾರ ತಡರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬ್ಯಾಂಕ್‌ನೊಂದಿಗಿನ ತಮ್ಮ “ಮೌಲ್ಯಗಳು ಮತ್ತು ನೈತಿಕತೆ”ಯ (Values and Ethics) ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯಗಳನ್ನು ಅವರು ರಾಜೀನಾಮೆಗೆ ಪ್ರಮುಖ ಕಾರಣವೆಂದು ಉಲ್ಲೇಖಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ … Continued

ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ…!

ಹುಬ್ಬಳ್ಳಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ನನಗೆ ಬೇಸರವಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ಲಿಂಗರಾಜ ಪಾಟೀಲ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಪಕ್ಷ … Continued

ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ ; ಅಸ್ಸಾಂ ಮಾಜಿ ಕಾಂಗ್ರೆಸ್‌ ಅಧ್ಯಕ್ಷ ಫೆ. 22ರಂದು ಬಿಜೆಪಿಗೆ ಸೇರ್ಪಡೆ

ಗುವಾಹತಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ಸಿಗೆ ಭಾರಿ ಆಘಾತ ಎದುರಾಗಿದ್ದು, ಹಿರಿಯ ನಾಯಕ ಭೂಪೇನ್ ಬೋರಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮಂಗಳವಾರ ಈ ಮಹತ್ವದ ಘೋಷಣೆ ಮಾಡಿದ್ದು, ಫೆಬ್ರವರಿ 22 ರಂದು ಬೋರಾ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ. ಗುವಾಹತಿ ಮತ್ತು ಉತ್ತರ … Continued

ರಾಜೀನಾಮೆ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲೇ ಯು ಟರ್ನ್‌ ಹೊಡೆದ ಕಾಂಗ್ರೆಸ್ ನಾಯಕ…

ಗುವಾಹತಿ: ಅಸ್ಸಾಂ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಯೊಂದು ನಡೆದಿದ್ದು, ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಸುಮಾರು 32 ವರ್ಷಗಳ ದೀರ್ಘಕಾಲದ ಪಕ್ಷದ ಬಾಂಧವ್ಯವನ್ನು ತೊರೆಯುವುದಾಗಿ ಘೋಷಿಸಿದ ಅವರು, ‘ತಮ್ಮ ಸ್ವಾಭಿಮಾನ ರಕ್ಷಿಸಿಕೊಳ್ಳಲು ಈ ನಿರ್ಧಾರ ಕೈಗೊಂಡಿರುವುದಾಗಿ’ ಇಂದು ಬೆಳಗ್ಗೆ ತಿಳಿಸಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಅವರ ರಾಜೀನಾಮೆಯನ್ನು … Continued

ಆಂಥ್ರೊಪಿಕ್‌ನ ಎಐ ಸುರಕ್ಷತಾ ವಿಭಾಗದ ಮುಖ್ಯಸ್ಥ ಮೃಣಾಂಕ ಶರ್ಮಾ ರಾಜೀನಾಮೆ ; ‘ಜಗತ್ತು ಅಪಾಯದಲ್ಲಿದೆ’ ಎಂದು ಎಚ್ಚರಿಕೆ

ಸ್ಯಾನ್ ಫ್ರಾನ್ಸಿಸ್ಕೋ: ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ‘ಆಂಥ್ರೋಪಿಕ್’ (Anthropic) ಸಂಸ್ಥೆಯ ಸುರಕ್ಷತಾ ಸಂಶೋಧನಾ ವಿಭಾಗದ ಮುಖ್ಯಸ್ಥ ಮೃಣಾಂಕ ಶರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋಮವಾರ (ಫೆಬ್ರವರಿ 9) ಸಾಮಾಜಿಕ ಜಾಲತಾಣ ‘X’ ನಲ್ಲಿ ಅವರು ಹಂಚಿಕೊಂಡಿರುವ ಅವರ ರಾಜೀನಾಮೆ ಪತ್ರವು ತಂತ್ರಜ್ಞಾನ ಲೋಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮೃಣಾಂಕ ಶರ್ಮಾ … Continued