ಪ್ರಧಾನಿ ಮೋದಿ ಸಂಪುಟಕ್ಕೆ ಸುರೇಶ ಗೋಪಿ ರಾಜೀನಾಮೆ? ಕೇರಳ ಸಂಸದ ಹೇಳಿದ್ದೇನು..?

ನವದೆಹಲಿ: ಕೇಂದ್ರ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ ಗೋಪಿ ಅವರು ತಾನು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾಧ್ಯಮ ವರದಿಯಾಗಿದ್ದನ್ನು ತಳ್ಳಿಹಾಕಿದ್ದಾರೆ ಹಾಗೂ ಅದು ತಪ್ಪು ಸುದ್ದಿ ಎಂದು ಹೇಳಿದ್ದಾರೆ. ಕೆಲ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ತಳ್ಳಿಹಾಕಿರುವ ಸುರೇಶ ಗೋಪಿ, ಸೋಮವಾರ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, … Continued

ವಾಲ್ಮೀಕಿ ನಿಗಮ ಹಗರಣ; ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ನಾಗೇಂದ್ರ

ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ. ತಾನು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ಆರೋಪದ … Continued

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ..?

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಗುರುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಸೂಚಿಸಿದ್ದರಿಂದ ಇಂದೇ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ವಾಲ್ಮೀಕಿ … Continued

ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

ರಾಯ್ಪುರ: ಕಾಂಗ್ರೆಸ್ಸಿನ ಛತ್ತೀಸ್‌ಗಢದ ರಾಜ್ಯ ಘಟಕದಲ್ಲಿ ತನಗೆ ಮೌಖಿಕ ನಿಂದನೆ, ಅವಮಾನ ಮತ್ತು ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೆಲವು ದಿನಗಳ ನಂತರ, ಕಾಂಗ್ರೆಸ್ ನಾಯಕಿ ಹಾಗೂ ರಾಷ್ಟ್ರೀಯ ಮಾಧ್ಯಮ ಸಂಯೋಜಕಿ ರಾಧಿಕಾ ಖೇರಾ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು … Continued

ಪೇಟಿಎಂ ಸಿಇಒ ಸ್ಥಾನಕ್ಕೆ ಭವೇಶ ಗುಪ್ತಾ ದಿಢೀರ್‌ ರಾಜೀನಾಮೆ

ನವದೆಹಲಿ : ಪೇಟಿಎಂ(Paytm)ನ ಮೂಲ ಕಂಪನಿ ಒನ್‌97 (One97) ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವೇಶ ಗುಪ್ತಾ ಅವರು ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ. ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ. ಪಾವತಿ … Continued

ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನವದೆಹಲಿ : ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡ ಕುರಿತು ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಎರಡು ದಿನಗಳಲ್ಲಿಯೇ ಮತ್ತಿಬ್ಬರು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೋಕಸಭೆ ಕ್ಷೇತ್ರಗಳ ಕಾಂಗ್ರೆಸ್ ವೀಕ್ಷಕರೂ ಆಗಿರುವ ನಾಯಕರಾದ ನೀರಜ್ ಬಸೋಯಾ … Continued

ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್ಸಿಗೆ ಶಾಕ್‌ : ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ನವದೆಹಲಿ: ಲೋಕಸಭೆ ಚುನಾವಣೆ ನಡುವೆಯೇ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕಾಂಗ್ರೆಸ್‌ ಪಕ್ಷದ ದೆಹಲಿ ರಾಜ್ಯಾಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ ಅವರು ತಮ್ಮ ರಾಜೀನಾಮೆಗೆ 2024 ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗೆ … Continued

ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ಅವರು ಪಕ್ಷದ ಪ್ರಚಾರ ಸಮಿತಿಗೆ ರಾಜೀನಾಮೆ ನೀಡಿದ್ದು ಮಹಾರಾಷ್ಟ್ರದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಒಬ್ಬರೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ … Continued

ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

ಹುಬ್ಬಳ್ಳಿ: ವಿಧಾನ ಪರಿಷತ್‌ ಬಿಜೆಪಿ‌ ಸದಸ್ಯ ಕೆ.ಪಿ.ನಂಜುಂಡಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿನ‌ ಸಭಾಪತಿಯವರ ಗೃಹ ಕಚೇರಿಗೆ ಆಗಮಿಸಿದ ಕೆ.ಪಿ.ನಂಜುಂಡಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ. ಅವರು ಬುಧವಾರ (ಏಪ್ರಿಲ್‌  24) ಬೆಳಿಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ರಾಜೀನಾಮೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು…!

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಆಪ್ತರಾಗಿದ್ದ ತಜೀಂದರ್ ಸಿಂಗ್ ಬಿಟ್ಟು ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಹಿಮಾಚಲ ಪ್ರದೇಶ ಉಸ್ತುವಾರಿ ಸ್ಥಾನವನ್ನೂ ತ್ಯಜಿಸಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ, “ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ … Continued