ಸ್ವಪಕ್ಷದ ಸಂಸದರಿಂದಲೇ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆಗೆ ಒತ್ತಾಯ ; ಅಕ್ಟೋಬರ್ 28ರ ವರೆಗೆ ಗಡುವು

ಒಟ್ಟಾವಾ: ಸಿಬಿಸಿ ನ್ಯೂಸ್‌ನ ವರದಿಯ ಪ್ರಕಾರ, ಸಂಸತ್ತಿನ ಹಿಲ್‌ನಲ್ಲಿ ಸಭೆ ನಡೆಸಿದ್ದ ಲಿಬರಲ್ ಪಕ್ಷದ ಸಂಸದರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಸಭೆಯ ಸಮಯದಲ್ಲಿ, ಭಿನ್ನಮತೀಯ ಸಂಸದರು ಟ್ರುಡೊಗೆ ತಮ್ಮ ಆಕ್ಷೇಪಗಳನ್ನು ತಿಳಿಸಿದ್ದಾರೆ. ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಇದು ಟ್ರುಡೊ ಪಕ್ಷದೊಳಗೆ ಅವರ ಬಗ್ಗೆ ಹೆಚ್ಚುತ್ತಿರುವ ಅಸಮಾಧಾನವನ್ನು … Continued

ವಿಧಾನ ಪರಿಷತ್‌ ಸ್ಥಾನಕ್ಕೆ ಬಿಜೆಪಿಯ ಸಿ.ಪಿ.ಯೋಗೇಶ್ವರ ರಾಜೀನಾಮೆ…!

ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ. ಯೋಗೇಶ್ವರ ಅವರು ಸೋಮವಾರ ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು, ಸೋಮವಾರ ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು … Continued

ಸಿದ್ದರಾಮಯ್ಯ ಕುಟುಂಬದ ಸೈಟ್‌ ವಿವಾದದ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರಿಗೌಡ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಇತರ ಸದಸ್ಯರ ಮೇಲಿನ ಮುಡಾ ಭೂ ಹಗರಣದ ಆರೋಪಗಳ ಕುರಿತು ಲೋಕಾಯುಕ್ತ ತನಿಖೆ ನಡೆಯುತ್ತಿರುವ ಮಧ್ಯೆಯೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದ ಅಧ್ಯಕ್ಷ ಕೆ. ಮರಿಗೌಡ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌ … Continued

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ದಿಢೀರ್‌ ರಾಜೀನಾಮೆ

ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕಿನ 14 ನಿರ್ದೇಶಕರು ರಮೇಶ ಕತ್ತಿ ಕರೆದ ಸಭೆಗೆ ಗೈರಾಗಿ ಪ್ರತ್ಯೇಕವಾಗಿ ಸಭೆ ನಡೆಸಿ ರಮೇಶ ಕತ್ತಿ ವಿರುದ್ಧ ಅವಿಶ್ವಾಸಕ್ಕೆ ಮುಂದಾಗಿದ್ದ ಹಿನ್ನೆಲೆಯಲ್ಲಿ ರಮೇಶ ಕತ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನ ಬ್ಯಾಂಕ್ ವ್ಯವಸ್ಥಾಪಕರಿಗೆ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ಎಎಪಿ ನಾಯಕಿ ಅತಿಶಿ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ: ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ನೂತನ ಮುಖ್ಯಮಂತ್ರಿ ಹುದ್ದೆಗೆ ಸಚಿವೆ ಆತಿಶಿ ಹೆಸರನ್ನು ಪ್ರಸ್ತಾಪಿಸಿದ್ದು, ಪಕ್ಷವು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರು ಜಾಮೀನು ಪಡೆದು ಹೊರಬಂದ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ದೆಹಲಿ ಜನತೆ ತಮ್ಮನ್ನು … Continued

ದೆಹಲಿ ಸಿಎಂ ಸ್ಥಾನಕ್ಕೆ ಮಂಗಳವಾರ ಅರವಿಂದ ಕೇಜ್ರಿವಾಲ್ ರಾಜೀನಾಮೆ ಸಾಧ್ಯತೆ ; ಮುಂದಿನ ಸಿಎಂ ಆಯ್ಕೆಗಾಗಿ ಸರಣಿ ಸಭೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆಪ್ಟೆಂಬರ್ 17) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಶಾಸಕ ಸೌರಭ ಭಾರದ್ವಾಜ ಹೇಳಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ಈ ವೇಳೆ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ. … Continued

ವೀಡಿಯೊ…| ಎರಡು ದಿನದಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ; ಅರವಿಂದ ಕೇಜ್ರಿವಾಲ್ ಘೋಷಣೆ…!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಇಂದು, ಭಾನುವಾರ (ಸೆಪ್ಟೆಂಬರ್ 15) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಾರದು ಎಂದು ನಿರ್ಧರಿಸಿರುವುದಾಗಿ ಹೇಳಿದ್ದಾರೆ. … Continued

ಟಿಎಂಸಿಗೆ ಆಘಾತ | ಮಮತಾ ಸರ್ಕಾರ ಕೋಲ್ಕತ್ತಾ ಪ್ರತಿಭಟನೆ ನಿಭಾಯಿಸಿದ ರೀತಿಗೆ ಅಸಮಾಧಾನ ; ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ : ಟಿಎಂಸಿ ರಾಜ್ಯಸಭಾ ಸಂಸದ ಜವಾಹರ ಸರ್ಕಾರ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಮಮತಾ ಸರ್ಕಾರವು ಪ್ರತಿಭಟನೆಗಳನ್ನು ನಿಭಾಯಿಸಿದ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಿರುವ ರಾಜೀನಾಮೆ … Continued

ಅಧಿಕಾರಿ ಅಮಾನತಿನಿಂದ ಮುಡಾ ನಿರ್ಣಯ ತಪ್ಪೆಂಬುದು ಸಾಬೀತು ; ರವಿಕುಮಾರ

ಬೆಂಗಳೂರು : ಅಕ್ರಮವಾಗಿ ನೀಡಲಾದ ಮೈಸೂರು ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಬೇಕು ಹಾಗೂ ಅಕ್ರಮದ ಆ ತಪ್ಪಿಗೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ಕಾನೂನು, ನಿಯಮ, ನಿರ್ದೇಶನಗಳಿಗೆ ಅವರು … Continued