ತೆಲಂಗಾಣ ರಾಜ್ಯಪಾಲರ ಹುದ್ದೆಗೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್‌ : ಲೋಕಸಭೆ ಚುನಾವಣೆಗೆ ಮುನ್ನ ತೆಲಂಗಾಣ ರಾಜ್ಯಪಾಲ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ತಮಿಳಿಸೈ ಸೌಂದರರಾಜನ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯನ್ನು ಪುದುಚೇರಿ ರಾಜಭವನ ಖಚಿತಪಡಿಸಿದೆ. ವರದಿಗಳ ಪ್ರಕಾರ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. “ತೆಲಂಗಾಣದ ಗೌರವಾನ್ವಿತ ರಾಜ್ಯಪಾಲರು ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ ತಮಿಳಿಸೈ ಸೌಂದರರಾಜನ್ … Continued

ಸುಪ್ರೀಂ ಕೋರ್ಟ್ ವಿಚಾರಣೆಗೂ ಮುನ್ನ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮನೋಜ ಸೋಂಕರ್

ಚಂಡೀಗಢ : ಮತ ಎಣಿಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನಿಗದಿತ ವಿಚಾರಣೆ ನಡೆಸಲಿರುವ ಒಂದು ದಿನ ಮೊದಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮನೋಜ ಸೋಂಕರ್ ಅವರು ಭಾನುವಾರ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಂಚೆ … Continued

ಪಂಜಾಬ್ ರಾಜ್ಯಪಾಲರ ಹುದ್ದೆಗೆ ಬನ್ವಾರಿಲಾಲ ಪುರೋಹಿತ್ ರಾಜೀನಾಮೆ

ನವದೆಹಲಿ: ಪಂಜಾಬ್ ಗವರ್ನರ್ ಬನ್ವಾರಿಲಾಲ ಪುರೋಹಿತ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆಗೆ “ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳನ್ನು” ಉಲ್ಲೇಖಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಪಂಜಾಬ್ ಹಾಗೂ ಚಂಡೀಗಢದ ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.”ದಯವಿಟ್ಟು ಅದನ್ನೇ ಸ್ವೀಕರಿಸಿ ಎಂದು ರಾಷ್ಡ್ರಪತಿ ಮುರ್ಮು … Continued

ಬಿಹಾರದಲ್ಲಿ ರಾಜಕೀಯ ಬೆಳವಣಿಗೆ :ಸಿಎಂ ಸ್ಥಾನಕ್ಕೆ ನಿತೀಶಕುಮಾರ ರಾಜೀನಾಮೆ, ಇಂದು ಸಂಜೆ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ..!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶಕುಮಾರ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿನ ಎಲ್ಲಾ ವದಂತಿಗಳಿಗೆ ತೆರೆಬಿದ್ದಿದೆ. ಅವರು ಇಂದು, ಭಾನುವಾರ ಸಂಜೆ ಅಥವಾ ನಾಳೆ ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇಂದು, ಭಾನುವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ … Continued

‘ನನಗೆ ಬೆಂಬಲವಿಲ್ಲ ಮಾತ್ರವಲ್ಲ…’: 25 ವರ್ಷಗಳ ನಂತರ ಬಿಜೆಪಿಗೆ ನಟಿ ಗೌತಮಿ ರಾಜೀನಾಮೆ

ಚೆನ್ನೈ: ತಮ್ಮ ಆಸ್ತಿ ಕಬಳಿಸಿದ ವ್ಯಕ್ತಿಗೆ ಪಕ್ಷದ ಹಿರಿಯರು ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಟಿ ಗೌತಮಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಗೌತಮಿ ಅವರು ತಮ್ಮ ದುಸ್ಥಿತಿಯನ್ನು ‘X’ ನಲ್ಲಿ ತಿಳಿಸಿದ್ದಾರೆ, ತಾನು ಕಳೆದ 25 ವರ್ಷಗಳಿಂದ ಬಿಜೆಪಿಯ ಸದಸ್ಯನಾಗಿದ್ದೆ ಮತ್ತು ಪ್ರಾಮಾಣಿಕ ಬದ್ಧತೆಯಿಂದ ಕೆಲಸ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಪಕ್ಷದಿಂದ ಬೆಂಬಲದ ಕೊರತೆಯನ್ನು … Continued

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್‌ ಈಶ್ವರಪ್ಪ

ಬೆಂಗಳೂರು: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು, ಸಂಜೆ ರಾತ್ರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಿನ್ನೆ ನೀಡಿದ್ದ ಹೇಳಿಕೆಯಂತೆ ಶುಕ್ರವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನಾನು ಆರೋಪಿಯಲ್ಲ ಎಂದು ಹೇಳಿರುವ ಈಶ್ವರಪ್ಪ ನೈತಿಕ … Continued