ನ್ಯಾಷನಲ್ ಹೆರಾಲ್ಡ್ ಪ್ರಕರಣ : ರಾಹುಲ್, ಸೋನಿಯಾ ಗಾಂಧಿಗೆ ರಿಲೀಫ್

ನವದೆಹಲಿ : ನ್ಯಾಷನಲ್ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯವು  ರಿಲೀಫ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ED) ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ಮಂಗಳವಾರ ನಿರಾಕರಿಸಿದೆ. ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ಅವರು ಈ … Continued

ಐಆರ್‌ ಸಿಟಿಸಿ ಹಗರಣ: ಲಾಲು, ತೇಜಸ್ವಿ ಯಾದವ್, ರಾಬ್ಡಿ ದೇವಿ ವಿರುದ್ಧ ನ್ಯಾಯಾಲಯ ಆರೋಪ ನಿಗದಿ

 ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿ ಯಾದವ್ ಮತ್ತು ಇತರರ ವಿರುದ್ಧದ ಬಹುಚರ್ಚಿತ ಐಆರ್‌ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಇಂದು, ಸೋಮವಾರ (ಸೋಮವಾರ) ವಿವಿಧ ಕ್ರಿಮಿನಲ್ ಆರೋಪಗಳನ್ನು ನಿಗದಿಪಡಿಸಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಭ್ರಷ್ಟಾಚಾರ ನಿಯಂತ್ರಣ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ ; ಎಎಪಿ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್‌ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಜಾರಿ ನಿರ್ದೇಶನಾಲಯವು ಜೈನ್‌ ಅವರನ್ನು ಮೇ 2022ರಂದು ಬಂಧಿಸಿತ್ತು. ಈ ನಡುವೆ ಜೈನ್‌ ಅವರು 2023ರ ಮೇ ಹಾಗೂ 2024ರ ಮಾರ್ಚ್‌ ನಡುವೆ ವೈದ್ಯಕೀಯ ಜಾಮೀನಿನ ಮೇಲೆ ಜೈಲಿನಿಂದ ಹೊರಗಿದ್ದರು. … Continued

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಜಾಮೀನು

ನವದೆಹಲಿ: 2021-22ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್‌ನಲ್ಲಿ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಎರಡು ದಿನಗಳ ಕಾಲ ಕೇಜ್ರಿವಾಲ ಮತ್ತು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ ನಂತರ ರಜಾಕಾಲದ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು ಜಾಮೀನು ನೀಡಿ … Continued

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : ಡಬ್ಲ್ಯೂ ಎಫ್‌ ಐ ಮಾಜಿ ಮುಖ್ಯಸ್ಥನ ವಿರುದ್ಧ ದೋಷಾರೋಪಣೆ ರೂಪಿಸಲು ಕೋರ್ಟ್‌ ಆದೇಶ

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾದ ಪ್ರಕರಣದಲ್ಲಿ ಡಬ್ಲೂಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ ಶರಣ್‌ ಸಿಂಗ್ ವಿರುದ್ಧ ದೋಷಾರೋಪಣೆ ರೂಪಿಸಲು ದೆಹಲಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. ದೆಹಲಿಯ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ಪ್ರಿಯಾಂಕಾ ರಜಪೂತ ಅವರು ಈ ಆದೇಶ ಹೊರಡಿಸಿದ್ದಾರೆ. “1ರಿಂದ 5ರವರೆಗಿನ ಸಂತ್ರಸ್ತೆಯರಿಗೆ ಸಂಬಂಧಿಸಿದಂತೆ ಮೊದಲನೇ ಆರೋಪಿ ಬ್ರಿಜ್‌ … Continued

ನ್ಯಾಯಾಲಯದಲ್ಲಿ ರಾಜಕೀಯ ಭಾಷಣ ಮಾಡಿದ್ದಕ್ಕೆ ಎಎಪಿಯ ಸಂಜಯ್ ಸಿಂಗ್ ಗೆ ಎಚ್ಚರಿಕೆ ನೀಡಿದ ಕೋರ್ಟ್‌

ನವದೆಹಲಿ: ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಎಎಪಿ ಸಂಸದ ಸಂಜಯ ಸಿಂಗ್ ಅವರಿಗೆ “ರಾಜಕೀಯ ಭಾಷಣ” ನೀಡದಂತೆ ಎಚ್ಚರಿಕೆ ನೀಡಿದೆ. ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‌ ಅವರು ಕೈಗಾರಿಕೋದ್ಯಮಿ ಗೌತಮ ಅದಾನಿ ಅವರ ಹೆಸರನ್ನು ನ್ಯಾಯಾಲಯದಲ್ಲಿ ಪ್ರಸ್ತಾಪಿಸಿದ್ದರು. … Continued