ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕಬೇಡಿ : ಜ್ಞಾನವಾಪಿ ವಿವಾದದ ನಡುವೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿಯ ಚಿತ್ರೀಕರಣದ ವಿವಾದದ ಕುರಿತು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಗುರುವಾರ ಪರಸ್ಪರ ಮಾತುಕತೆ ಮತ್ತು ಸಹಮತದ ಒಪ್ಪಂದಗಳ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ನಾಗ್ಪುರದಲ್ಲಿ ಸಂಘಟನೆಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥರು, “ಜ್ಞಾನವಾಪಿ ಪ್ರಕರಣ ನಡೆಯುತ್ತಿದೆ. ಇತಿಹಾಸವನ್ನು ಬದಲಾಯಿಸಲು ಸಾಧ್ಯವಿಲ್ಲ. … Continued