ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿಗೆ ಗಾಯ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಮೈಸೂರಿನಲ್ಲಿ ‘ಬಘೀರ’ ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಅವರ ಕಾಲು ಮತ್ತು ಕೈಗೆ ಪೆಟ್ಟಾಗಿದ್ದು, ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೈಸೂರಿನಲ್ಲಿ ‘ಬಘೀರ’ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಿತ್ರೀಕರಣದ ವೇಳೆ ಶ್ರೀಮುರಳಿ ಅವರಿಗೆ ಗಾಯವಾಗಿದೆ. ಎರಡು ದಿನಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. … Continued

ಖ್ಯಾತ ನಟ ಪ್ರಕಾಶ ಹೆಗ್ಗೋಡು ನಿಧನ

ಬೆಂಗಳೂರು: ಖ್ಯಾತ ನಟ, ರಂಗಕರ್ಮಿ ಪ್ರಕಾಶ ಹೆಗ್ಗೋಡು ಅನಾರೋಗ್ಯದಿಂದ ಶನಿವಾರ (ಮಾರ್ಚ್‌ 30) ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಯೇಸುಪ್ರಕಾಶ್‌ ಕಲ್ಲುಕೊಪ್ಪ ಎಂದೂ ಗುರುತಿಸ್ಪಡುತ್ತಿದ್ದ ಪ್ರಕಾಶ ಹೆಗ್ಗೋಡು ಶಿವಮೊಗ್ಗ … Continued

ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣ : ಬಿಗ್‌ ಬಾಸ್‌ ಸ್ಪರ್ಧಿ ಸೋನು ಗೌಡಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪಿತ ಪ್ರಕರಣದಲ್ಲಿ ಬಿಗ್‌ಬಾಸ್ ರಿಯಾಲಿಟಿ ಶೋನ ಸ್ಪರ್ಧಿ ಹಾಗೂ ರೀಲ್ಸ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದ ಸೋನು ಶ್ರೀನಿವಾಸ ಗೌಡ ಅವರಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಸೋನು ಅವರ ಪೊಲೀಸ್ ಕಸ್ಟಡಿ ಸೋಮವಾರ ಅಂತ್ಯವಾದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರು … Continued

ನಟ-ಮಾಜಿ ಐಎಎಸ್​ ಅಧಿಕಾರಿ ಕೆ. ಶಿವರಾಮಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ಕನ್ನಡದ ನಟ ಕೆ. ಶಿವರಾಮ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, 71 ವರ್ಷ ವಯಸ್ಸಿನ ಕೆ ಶಿವರಾಮ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಕೆಲದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿತ್ತು … Continued

ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೇನ್‌ ಹ್ಯಾಮರೇಜ್‌ ಆಗಿತ್ತು. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಸದ್ಯ ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಎಂದು ವರದಿಯಾಗಿದೆ. ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ … Continued

ಸೋಲದೇವನಹಳ್ಳಿಯ ತೋಟದಲ್ಲಿ ನಡೆದ ನಟಿ ಲೀಲಾವತಿ ಅಂತ್ಯಕ್ರಿಯೆ

ಬೆಂಗಳೂರು : ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ನೆಲಮಂಗಲದ ಬಳಿಯ ಸೋಲದೇವನಹಳ್ಳಿಯ ಅವರ ತೋಟದಲ್ಲಿ ಶನಿವಾರ ನೆರವೇರಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ೮೬ ವರ್ಷದ ಲೀಲಾವತಿ ಅವರು ಶುಕ್ರವಾರ ನಿಧನರಾಗಿದ್ದರು. ನೆಲಮಂಗಲದ ಸೋಲದೇವನಹಳ್ಳಿಯ ತೋಟದಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಪುತ್ರ ವಿನೋದರಾಜ ಅವರು ಅಂತಿಮ ವಿಧಿ-ವಿಧಾನಗಳನ್ನು ನೆರವೇರಿಸಿದರು. … Continued

ಹಿರಿಯ ಹಾಸ್ಯನಟ ಬ್ಯಾಂಕ್‌ ಜನಾರ್ಧನಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ (74 ವರ್ಷ) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು ಇರಿಸಿ, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಕುಟುಂಬದ ಸಮೀಪವರ್ತಿಗಳಿಂದ ತಿಳಿದುಬಂದಿದೆ. ಇವರಿಗೆ ಆಂಜಿಯೋಗ್ರಾಂ ಆಪರೇಷನ್‌ ಮಾಡುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ. ಕನ್ನಡ ಸಿನಿಮಾ,ಟಿವಿ ಗಳಲ್ಲಿ ಹಾಸ್ಯನಟನಾಗಿ … Continued

ಖಾಸಗಿ ಜಾಗದಲ್ಲಿ ಶ್ರೀಗಂಧ ಬೆಳೆದ ರೈತರಿಗೆ ಇನ್ಮುಂದೆ ಮುಕ್ತವಾಗಿ ಮಾರಾಟ ಮಾಡಲು ಅವಕಾಶ

ಬೆಂಗಳೂರು: ಇನ್ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ (Sandalwood) ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು. ರೈತರು ತಮ್ಮ ಹೊಲ ಗದ್ದೆಗಳಲ್ಲಿ ಶ್ರೀಗಂಧ ಬೆಳೆಯುವುದನ್ನು ಉತ್ತೇಜಿಸುವುದರ ಜೊತೆಗೆ ಮಾರಾಟಕ್ಕೆ ಸರಳ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ರಾಜ್ಯ ಅರಣ್ಯ ಇಲಾಖೆ ಪ್ರಸ್ತಾಪಿಸಿದ ‘ಶ್ರೀಗಂಧ ನೀತಿ- 2022 ’ ಜಾರಿಮಾಡಲು ರಾಜ್ಯ ಸಚಿ ಸಂಪುಟ ಅನುಮೋದನೆ ನೀಡಿದೆ. … Continued

ಸ್ಯಾಂಡಲ್‌ವುಡ್ ಒತ್ತಡಕ್ಕೆ ಮಣಿದ ಸರ್ಕಾರ : ಏ.7ರ ವರೆಗೆ ಚಿತ್ರಮಂದಿರಗಳ ಪೂರ್ಣ ಭರ್ತಿಗೆ ಅವಕಾಶ..!

ಬೆಂಗಳೂರು :ಕೊರೊನಾ 2ನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಸೋಂಕು ಹೆಚ್ಚಿರುವಂತಹ ಬೆಂಗಳೂರು ನಗರ ಸೇರಿದಂತೆ 8 ಜಿಲ್ಲೆಗಳಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಸೀಟುಗಳ ಭರ್ತಿಗೆ ಮಾತ್ರ ಅವಕಾಶ ನೀಡಿ ಹೊರಡಿಸಿದ್ದ ಆದೇಶವನ್ನು ಚಿತ್ರರಂಗದ ಒತ್ತಡಕ್ಕೆ ಮಣಿದು ಹೇಳಿದ ೨೪ ತಾಸಿನಲ್ಲೇ ವಾಪಸ್‌ ಪಡೆದಿದೆ. ಹಾಗೂ ಶೇ.೧೦೦ ಸೀಟುಗಳ ಭರ್ತಿಗೆ ಅವಕಾಶ ನೀಡಿದೆ. ನಿರ್ಬಂಧದ ವಿರುದ್ಧ … Continued