ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿ ನೇಮಕ ಮಾಡಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

ನವದೆಹಲಿ: ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿ ನೇಮಕ ಮಾಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಶುಕ್ರವಾರ, ಮುಂಬೈನಲ್ಲಿ ಭಾರತೀಯ ಬ್ಯಾಂಕ್‌ಗಳ ಸಂಘದ 75ನೇ ವಾರ್ಷಿಕ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಸೀತಾರಾಮನ್ ಶುಕ್ರವಾರ ಈ ಹೇಳಿಕೆ ನೀಡಿದ್ದಾರೆ. ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಮಾತನಾಡುವ ರೀತಿಯಲ್ಲಿ “ಒಳಗೊಳ್ಳುವಿಕೆಯನ್ನು ತೋರಿಸಬೇಕು. ನೀವು ಪ್ರಾದೇಶಿಕ ಭಾಷೆ ಮಾತನಾಡದ … Continued

ಕೇಂದ್ರ ಬಜೆಟ್ 2022: ರಕ್ಷಣಾ ಸಂಶೋಧನೆ -ಅಭಿವೃದ್ಧಿಯನ್ನು ಉದ್ಯಮಕ್ಕೆ ಮುಕ್ತ

ನವದೆಹಲಿ: ಕೇಂದ್ರ ಬಜೆಟ್ 2022ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಯನ್ನು (ಆರ್ & ಡಿ) ಉದ್ಯಮ, ಸ್ಟಾರ್ಟ್‌ಅಪ್‌ಗಳು ಮತ್ತು ಅಕಾಡೆಮಿಗಳಿಗೆ ತೆರೆಯಲಾಗುವುದು ಎಂದು ಘೋಷಿಸಿದರು. ಮಿಲಿಟರಿ ಪ್ಲಾಟ್‌ಫಾರ್ಮ್‌ ಮತ್ತು ಸಲಕರಣೆಗಳ ವಿನ್ಯಾಸ ಮತ್ತು ಅಭಿವೃದ್ಧಿಯನ್ನು ಕೈಗೊಳ್ಳಲು ಖಾಸಗಿ ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು. ರಕ್ಷಣಾ ಕ್ಷೇತ್ರದಲ್ಲಿ ಆರ್ & ಡಿ ಬಜೆಟ್‌ನ … Continued