ಸರ್ಕಾರಿ ಶಾಲೆಗೆ ಅನುಮತಿ ಇಲ್ಲದೆ ಪ್ರವೇಶ: ಸಿಜೆಪಿ ಸಂಚಾಲಕ ಅಭಿಜೀತ ದಿಪ್ಕೆ ವಿರುದ್ಧ ಎಫ್‌ಐಆರ್

 ಲಾತೂರ್:  ಅನುಮತಿ ಇಲ್ಲದೆ ಸರ್ಕಾರಿ ಶಾಲೆ ಪ್ರವೇಶಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದರ ಜೊತೆಗೆ ಶಿಕ್ಷಕರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಚಾಲಕ ಅಭಿಜೀತ ದಿಪ್ಕೆ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಾತೂರ್ ಜಿಲ್ಲೆಯ ಔಸಾ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪರಿಷತ್ ಉರ್ದು ಶಾಲೆಯ ಶಿಕ್ಷಕಿ ಸಯ್ಯದ್ ಶಮ್ಶದ್‌ಬಾನೋ … Continued

ಶಿಕ್ಷಕಿ ಕೆನ್ನೆಗೆ ಹೊಡೆದ ಬಳಿಕ 6 ವರ್ಷದ ಬಾಲಕ ಕುಸಿದುಬಿದ್ದು ಸಾವು

ವಿಶಾಖಪಟ್ಟಣಂ: ಹೋಂವರ್ಕ್ ಪೂರ್ಣಗೊಳಿಸದ ಕಾರಣ ಶಿಕ್ಷಕಿಯೊಬ್ಬರು ಹೊಡೆದರೆನ್ನಲಾದ ಘಟನೆಯ ಬಳಿಕ ಆರು ವರ್ಷದ ಬಾಲಕ ಕುಸಿದುಬಿದ್ದು ಮೃತಪಟ್ಟ ಘಟನೆ ವಿಶಾಖಪಟ್ಟಣಂನ ಒನ್‌ಟೌನ್ ಪ್ರದೇಶದಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಣಯ ತೇಜ ಎಂದು ಗುರುತಿಸಲಾಗಿದೆ.ಕುಟುಂಬದ ಆರೋಪದ ಪ್ರಕಾರ, ಹೋಂವರ್ಕ್ ಮಾಡಿರಲಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿ ಬಾಲಕನ ಕೆನ್ನೆಗೆ ಹೊಡೆದಿದ್ದಾರೆ. ಬಳಿಕ ಭಯ ಮತ್ತು ಆಘಾತದಿಂದ … Continued

ವಿದ್ಯಾರ್ಥಿನಿಯರಿಗೆ ಮೂತ್ರ ಬೆರೆಸಿದ ನೀರು ಕುಡಿಸಿದ ಸಹಪಾಠಿ ; ದೂರು ನೀಡಿದರೆ ‘ಬಾಯಿ ರುಚಿ ಕೆಟ್ಟಿದ್ರೆ ಚಾಕೊಲೇಟ್ ತಿನ್ನಿ’ ಎಂದ ಪ್ರಾಂಶುಪಾಲ

ಗುಣಾ: 5ನೇ ತರಗತಿಯ ವಿದ್ಯಾರ್ಥಿಯೊಬ್ಬ ನೀರಿನ ಬಾಟಲಿಗೆ ಮೂತ್ರ ಬೆರೆಸಿ ತನ್ನ ಇಬ್ಬರು ಸಹಪಾಠಿ ವಿದ್ಯಾರ್ಥಿನಿಯರಿಗೆ ಕುಡಿಸಿದ ಆರೋಪ ಮಧ್ಯಪ್ರದೇಶದ ಗುಣಾ ಜಿಲ್ಲೆಯ ಆರೋನ್ ಡೆವಲಪ್‌ಮೆಂಟ್‌ ಬ್ಲಾಕ್‌ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯರು ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದಾಗ, ಅವರು ಅಸಂವೇದನಾಶೀಲವಾಗಿ ಪ್ರತಿಕ್ರಿಯಿಸಿ, ಬಾಯಿ ಕೆಟ್ಟ ರುಚಿ ಬರುತ್ತಿದ್ದರೆ ₹10ರ ಚಾಕೊಲೇಟ್ … Continued

ಬೆಂಗಳೂರು : 500 ವಿದ್ಯಾರ್ಥಿಗಳು, 21 ಸಿಬ್ಬಂದಿಗೆ ತೀವ್ರ ಜ್ವರ ; ಶಾಲೆ ಬಂದ್‌

ಬೆಂಗಳೂರು: ಬೆಂಗಳೂರು ನಗರದ ರಿಚರ್ಡ್ಸ್ ಟೌನ್‌ನಲ್ಲಿರುವ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಋತುಮಾನೀಯ ಜ್ವರದಂತಹ ಕಾಯಿಲೆಯ ತೀವ್ರ ಹಾವಳಿ ಕಾಣಿಸಿಕೊಂಡಿದ್ದು, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 21 ಸಿಬ್ಬಂದಿ ಜ್ವರ, ಶೀತ, ಕೆಮ್ಮು ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದಾರೆ ಎಂದು ಶಾಲಾ ಆಡಳಿತ ತಿಳಿಸಿದೆ.  ಕನಿಷ್ಠ ಇಬ್ಬರು ವಿದ್ಯಾರ್ಥಿಗಳಲ್ಲಿ ಎಚ್‌1ಎನ್‌1 (H1N1) ಸೋಂಕು ದೃಢಪಟ್ಟಿದೆ ಎಂದು ತಿಳಿಸಲಾಗಿದೆ. ಅಲ್ಲದೆ, … Continued

ಕುಮಟಾ : ಶಾಲೆಯ ಪಕ್ಕವೇ ಭೂ ಕುಸಿತ ; ಕಟ್ಟಡಕ್ಕೆ ಬಂದು ಅಪ್ಪಳಿಸಿದ ಬೃಹತ್‌ ಬಂಡೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ನೆಲ್ಲೇರಿಯ ಕರ್ನಾಟಕ ಸರ್ಕಾರಿ ಶಾಲೆಯ ಪಕ್ಕದಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತದಿಂದಾಗಿ ಬೃಹತ್ ಬಂಡೆಯೊಂದು ಉರುಳಿ ಶಾಲಾ ಕಟ್ಟಡದಕ್ಕೆ ಬಂದು ಅಪ್ಪಳಿಸಿದ ಘಟನೆ ವರದಿಯಾಗಿದೆ. ಆದರೆ, ಶಾಲಾ ಆಡಳಿತ ಮಂಡಳಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳನ್ನು ಅಪಾಯದ ಪ್ರದೇಶದಲ್ಲಿದ್ದ ತರಗತಿ ಕೊಠಡಿಗಳಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ಯಾವುದೇ ವಿದ್ಯಾರ್ಥಿ … Continued

ಬೆಂಗಳೂರು | ತರಗತಿಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾವು : ಶಾಲಾ ಸಿಬ್ಬಂದಿ ನಿರ್ಲಕ್ಷ್ಯ ಕಾರಣ ಎಂದು ಕುಟುಂಬದ ಆರೋಪ

ಬೆಂಗಳೂರು: ನಗರದ ಬನ್ನೇರಘಟ್ಟ ರಸ್ತೆಯ ವೀವರ್ಸ್ ಕಾಲೋನಿಯ ಖಾಸಗಿ ಶಾಲೆಯೊಂದರಲ್ಲಿ 12 ವರ್ಷದ ವಿದ್ಯಾರ್ಥಿಯೊಬ್ಬ ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅಮೂಲ್ಯ ಸಮಯ ವ್ಯರ್ಥವಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯದೆ ವಿಳಂಬ ಮಾಡಿದ ಕಾರಣ ಮಗನ ಜೀವ ಉಳಿಯಲಿಲ್ಲ ಎಂದು ಮೃತ ಬಾಲಕನ ಕುಟುಂಬ ಆರೋಪ ಮಾಡಿದೆ. … Continued

ಬೆಂಗಳೂರು ಶಾಲೆಯಲ್ಲಿ ಭಾರೀ ಅಗ್ನಿ ಅವಘಡ

ಬೆಂಗಳೂರು : ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ಸ್ಥಳೀಯ ಶಾಲಾ ಕಟ್ಟಡವೊಂದರಲ್ಲಿ ಇಂದು, ಶನಿವಾರ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಇದರಿಂದಾಗಿ ‘ಕೌಸಲ್ಯ ಶಾಲೆ’ಯ (Kousalya School) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಕಟ್ಟಡದಿಂದ ದಟ್ಟವಾದ ಹೊಗೆ ಆಕಾಶಕ್ಕೆ ಮುಟ್ಟುವಂತೆ ಹರಡಿದೆ. ಶನಿವಾರ ಬೆಳಿಗ್ಗೆ 10:15 ರ ಸುಮಾರಿಗೆ ಶಾಲೆಯ 4ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ … Continued

ಕರ್ನಾಟಕದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಸಿ ಸರ್ಕಾರ ಅಧಿಕೃತ ಆದೇಶ

ಕರ್ನಾಟಕದಲ್ಲಿ 1ನೇ ತರಗತಿಗೆ ದಾಖಲಾತಿಗೆ 60 ದಿನ ವಯೋಮಿತಿ ಸಡಿಲಿಸಿ ಸರ್ಕಾರ ಅಧಿಕೃತ ಆದೇಶ ಬೆಂಗಳೂರು : 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ, ಒಟ್ಟು 60 ದಿನಗಳು ವಿನಾಯಿತಿ ನೀಡಿದ್ದು, 5 ವರ್ಷ 10 ತಿಂಗಳು ಪೂರ್ಣಗೊಂಡಿದ್ದ ಮಕ್ಕಳಿಗೆ … Continued

ವೀಡಿಯೊಗಳು | ಕಾರವಾರ : ಶಾಲಾ ಕೊಠಡಿಯೊಳಗೆ ಬಂದ ಕಾಳಿಂಗ ಸರ್ಪ…!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗುಡ್ಡಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿ ಕೊಠಡಿಯಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತರಗತಿಯಲ್ಲಿ ಬೃಹತ್‌ ಹಾವಿನ ಆರ್ಭಟಕ್ಕೆ  ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ಕಳುಹಿಸಿದ … Continued

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ವ್ಯಸನವನ್ನು  ಗಮನದಲ್ಲಿಟ್ಟುಕೊಂಡು ಈ ಕ್ರಮಕ್ಕೆ ಮುಂದಾಗಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, … Continued