ಸಿಡಿ, ಹನಿಟ್ರ್ಯಾಪ್‌ ಬ್ಲ್ಯಾಕ್‌ ಮೇಲ್‌ ಕಡಿವಾಣಕ್ಕೆ ರಾಜಕೀಯ ವಲಯದಲ್ಲಿ ಕಾನೂನು ಅಸ್ತ್ರದ ಚರ್ಚೆ

ಬೆಂಗಳೂರು: ಅಶ್ಲೀಲ ಸಿಡಿ ಮುಂದಿಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡುವವರನ್ನು ಮಟ್ಟ ಹಾಕಲು ಕಠಿಣ ಕಾನೂನು ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ. ರಾಸಲೀಲೆ ಸಿಡಿ ಬಹಿರಂಗವಾದ ನಂತರ ರಾಜಕೀಯ ಕ್ಷೇತ್ರದಲ್ಲಿ ಈ ಚರ್ಚೆಗಳು ಆರಂಭವಾಗಿವೆ. ಈ ರೀತಿಯ ಮಾನಹಾನಿಯಾಗುವಂತಹ ಸಿಡಿಗಳನ್ನು ಏಕಾಏಕೀ ಬಹಿರಂಗ ಪಡಿಸದಂತೆ ತಡೆಯಾಜ್ಞೆ ನೀಡಲು ಕೆಲವು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ನ್ಯಾಯಾಲಯ ಕೂಡ … Continued

ದಿನೇಶ ಕಲ್ಹಳ್ಳಿಗೆ ಸಂಕಷ್ಟ: ಅಶ್ಲೀಲ ವಿಡಿಯೋ ಬಿಡುಗಡೆ ವಿರುದ್ಧ ಮಹಿಳೆಯಿಂದ ದೂರು ದಾಖಲು

ಬೆಂಗಳೂರು : ಈಗ ದಿನೇಶ ಕಲ್ಹಳ್ಳಿ ಅವರಿಗೆ ಸಂಕಷ್ಟ ಎದುರಾಗಿದೆ. ಅದೂ ಮಹಿಳೆಯೊಬ್ಬರಿಂದ. ದಿನೇಶ್ ಕಲ್ಹಳ್ಳಿ ಹೆಣ್ಣಿನ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಮುಲಾನಿಯವರು ಇನ್ನೂ ಇಂಥ ಕೆಲ ಸಿಡಿಗಳಿವೆ ಎಂದಿದ್ದಾರೆ. ಈ ಮೂಲಕ ಯುವತಿ ಕುಟುಂಬದ ಮರ್ಯಾದೆ ತೆಗೆದಿದ್ದಾರೆ. ಹೀಗಾಗಿ ದಿನೇಶ್ ಕಲ್ಹಳ್ಳಿ ಹಾಗೂ ಮುಲಾನಿ ವಿರುದ್ಧ ಕ್ರಮ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ … Continued

ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದ ಮಾಹಿತಿಯಿದೆ: ಎಚ್‌ಡಿಕೆ ಬಾಂಬ್‌…!

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ … Continued

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ: ದೂರು ನೀಡಿದ ದಿನೇಶ್‌ ಕಲ್ಹಳ್ಳಿಗೆ ಇಂದು ನೋಟಿಸ್‌?

ಬೆಂಗಳೂರು: ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಬಯಲು ಮಾಡಿದ, ದೂರುದಾರ ದಿನೇಶ್‌ ಕಲ್ಲಹಳ್ಳಿಗೆ ಬುಧವಾರ ಸಂಜೆಯೊಳಗೆ ಕಬ್ಬನ್‌ ಪಾರ್ಕ್‌ ಪೊಲೀಸರು ನೋಟಿಸ್‌ ನೀಡಲಿದ್ದಾರೆ. ಸಂತ್ರಸ್ತೆ ಬಗ್ಗೆ ದೂರುದಾರ ದಿನೇಶ್‌ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್‌ ಪೊಲೀಸರು ನೋಟಿಸ್‌ ನೀಡಲಿದ್ದು, ಸಿಡಿ, ಸಂತ್ರಸ್ತೆ ಬಗ್ಗೆ ಮತ್ತಷ್ಟು ಮಾಹಿತಿ ನೀಡುವ ಕುರಿತು ಗುರುವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ … Continued

ರಾಸಲೀಲೆ ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಬುಧವಾರ ರಾಜೀನಾಮೆ ನೀಡಿದ್ದಾರೆ. ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಜಾರಕಿಹೊಳಿಯಿಂದ ಈ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು … Continued

ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯದಿದ್ದರೆ ರಾಷ್ಟ್ರಪತಿಗೆ ದೂರು : ಕಾಂಗ್ರೆಸ್ ಎಚ್ಚರಿಕೆ

ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಡಬೇಕು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು, ಇಲ್ಲದೇ ಹೋದರೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿಯವರಿಗೆ ದೂರು ನೀಡಲಾಗುವುದು ಎಂದು ಕಾಂಗ್ರೆಸ್‌ ಎಚ್ಚರಿಸಿದೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿಂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮೇಶ್ ಜಾರಕಿಹೊಳಿ ರಾಜೀನಾಮೆ … Continued

ಆ ಯುವತಿ ಯಾರೆಂಬುದೇ ಗೊತ್ತಿಲ್ಲ:, ಈ ಬಗ್ಗೆ ಸಮಗ್ರ ತನಿಖೆಯಾಗಲಿ: ರಮೇಶ ಜಾರಕಿಹೊಳಿ

ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರೆಂಬುದೇ ನನಗೆ ಗೊತ್ತಿಲ್ಲ. ಇದೆಲ್ಲ ನನ್ನ ವಿರುದ್ಧ ನಡೆಸಿದ ಷಡ್ಯಂತ್ರ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಜಾರಕಿಹೊಳಿ ಅವರದ್ದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣ ಕುರಿತಂತೆ ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿರುವ ಜಾರಕಿಹೊಳಿ, ನಾನು ಅತ್ಯಂತ … Continued

ನೌಕರಿ ಭರವಸೆ ನೀಡಿ ಯುವತಿ ಮೇಲೆ ಸಚಿವರಿಂದ ಲೈಂಗಿಕ ದೌರ್ಜನ್ಯವೋ ಅಥವಾ ಬ್ಲ್ಯಾಕ್‌ಮೇಲೋ..?

ಬೆಂಗಳೂರು: ರಾಜ್ಯದ ಜಲಸಂಪನ್ಮೂಲ ಸಚಿವ ಹಾಗೂ ಪ್ರಬಾವಿ ರಾಜಕಾರಣಿ ರಮೇಶ್ ಜಾರಕಿಹೊಳಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ಸಿಡಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸುತ್ತಿದೆ. ಯುವತಿಗೆ ಕೆಪಿಟಿಸಿಎಲ್ ನಲ್ಲಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಸಚಿವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಎಂಬುವವರು ಈ … Continued