ಬಿಗ್‌ಬಾಸ್‌ ಮನೆಗೆ ಬಂದ ಚಿತ್ರ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ನಂತರ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಗೆ ಅತ್ಯಾಚಾರದ ಬೆದರಿಕೆ

ನವದೆಹಲಿ: ಚಿತ್ರನಿರ್ಮಾಪಕ ಸಾಜಿದ್ ಖಾನ್ ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಬುಧವಾರ ಹೇಳಿದ್ದಾರೆ. ತನ್ನ Instagram DM ಗಳ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡ ಅಧ್ಯಕ್ಷರು, ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ತನಗೆ ಅತ್ಯಾಚಾರ ಬೆದರಿಕೆಗಳು ಬರುತ್ತಿವೆ ಎಂದು … Continued

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಮುರುಘಾ ಶರಣರಿಗೆ ಸೆಪ್ಟೆಂಬರ್ 14ರ ವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಶರಣರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಇಂದು, ಸೋಮವಾರ ಪೊಲೀಸ್ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಮುರುಘಾ ಶರಣರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿದರು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಮುರುಘಾ ಶರಣರಿಗೆ ಸೆಪ್ಟೆಂಬರ್ 14ರವರೆಗೆ 9 … Continued

ಸ್ಥಳ ಮಹಜರ್‌ ನಡೆಸಲು ಮುರುಘಾ ಶರಣರನ್ನು ಮಠಕ್ಕೆ ಕರೆತಂದ ಪೊಲೀಸರು

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಸ್ಥಳ ಮಹಜರ್‌ ನಡೆಸಲು ಮುರುಘಾ ಮಠಕ್ಕೆ ಭಾನುವಾರ ಕರೆತಂದರು. ಪೊಲೀಸ್ ವಶದಲ್ಲಿರುವ ಆರೋಪಿ ಮುರುಘಾ ಶರಣರನ್ನು ತನಿಖಾಧಿಕಾರಿಗಳು ಶುಕ್ರವಾರ ರಾತ್ರಿಯಿಂದ ವಿಚಾರಣೆಗೆ ಒಳಪಡಿಸಿದ್ದಾರೆ. ಭಾನುವಾರ ಬೆಳಿಗ್ಗೆ 11:45 ಮುರುಘಾ ಮಠಕ್ಕೆ ಕರೆತಂದು ಸ್ಥಖ ಮಹಜರು ನಡೆಸಿದ್ದಾರೆ. ಡಿವೈಎಸ್‌ಪಿ ಕಚೇರಿಯಿಂದ … Continued

ಮುರುಘಾ ಶರಣರನ್ನು ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮೊದಲ ಆರೋಪಿಯಾಗುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ   ಆದೇಶಿಸಿದೆ. ಪೋಕ್ಸೋ ಕೇಸ್​ನಲ್ಲಿ ಸ್ವಾಮೀಜಿಯನ್ನು ನಿನ್ನೆ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಮುರುಘಾ ಶರಣರನ್ನು ಸೆಪ್ಟೆಂಬರ್ 5ರಂದು ಮತ್ತೆ ಕೋರ್ಟ್ ಮುಂದೆ … Continued

ಮಠಕ್ಕೆ ಮುರುಘಾ ಶ್ರೀಗಳು ವಾಪಸ್-ಸಂಕಟವನ್ನು ಧೈರ್ಯವಾಗಿ ಎದುರಿಸ್ತೇನೆ, ಸಹನೆಯಿಂದ ಇರಿ: ಭಕ್ತರಿಗೆ ಶ್ರೀಗಳ ಮನವಿ

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳು ಮಠಕ್ಕೆ ಆಗಮಿಸಿದ್ದಾರೆ. ಮಠದ ಆವರಣದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿd ಶ್ರೀಗಳು, ಬಂದಿರುವ ಸಂಕಟವನ್ನು ಧೈರ್ಯವಾಗಿ ಎದುರಿಸುತ್ತೇನೆ. ಈ ನೆಲದ ಕಾನೂನನ್ನು ಗೌರವಿಸಬೇಕುಯಾವುದೇ ಪಲಾಯನವಾದವಿಲ್ಲ. ಸಮಸ್ಯೆ ನಿವಾರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಇದು ಸಂಕಷ್ಟದ ಸಮಯವಾಗಿದೆ. ಯಾರಿಗೂ ಆತಂಕ ಬೇಡ. ಎಲ್ಲರೂ ಧೈರ್ಯ ಸಹನೆಯಿಂದ ಇರಿ … Continued

ಮುರುಘಾ ಶರಣರ ಮೇಲೆ ಸುಳ್ಳು ಆರೋಪ, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ: ಯಡಿಯೂರಪ್ಪ

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಸುಳ್ಳು ಆರೋಪದ ಪ್ರಕರಣ ದಾಖಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುರುಘಾ ಮಠದ ಬಗ್ಗೆ ಗೊತ್ತಿರುವ ಯಾರೂ ಕೂಡ ಮುರುಘಾ ಶರಣರ ಬಗ್ಗೆ ಇಂತಹ ಆರೋಪ ಮಾಡಲು ಸಾಧ್ಯವಿಲ್ಲ. ವ್ಯವಸ್ಥಿತ ಷಡ್ಯಂತ್ರ ಎಂಬಂತೆ … Continued

ಲೈಂಗಿಕ ಕಿರುಕುಳ ಪ್ರಕರಣ: ತಲೆಮರೆಸಿಕೊಂಡಿದ್ದ ನ್ಯಾಯವಾದಿ ರಾಜೇಶ್ ಕೋರ್ಟಿಗೆ ಶರಣು

ಮಂಗಳೂರು:ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರ್ಕಾರಿ ಅಭಿಯೋಜಕರಾಗಿದ್ದ ಕೆ.ಎಸ್.ಎನ್ ರಾಜೇಶ್ ಸೋಮವಾರ, ಡಿ. 20 ರಂದು ಕೋರ್ಟಿಗೆ ಶರಣಾಗಿದ್ದಾರೆ. ಇಲ್ಲಿನ 3 ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಅವರು ಶರಣಾಗಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ … Continued