ಕಾರು ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಶರಣಬಸವ ವಿವಿ ಕುಲಸಚಿವರು ಸಾವು

ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಣಮಂತವಾಡಿ ಹತ್ತಿರ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಲಿಂಗರಾಜ ಶಾಸ್ತ್ರಿ (50) ಮೃತಪಟ್ಟಿದ್ದಾರೆ. ಬಸವಕಲ್ಯಾಣದಿಂದ ಕಲಬುರಗಿಗೆ ಕಾರಿನಲ್ಲಿ ಹೋಗುವಾಗ ಹಣಮಂತವಾಡಿ-ಮುಡಬಿ ಮಧ್ಯ ಕಡೋಳ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಶಾಸ್ತ್ರಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ಮತ್ತು ಪುತ್ರನಿಗೆ … Continued