ಹೊನ್ನಾವರ | ಮುಳ್ಳೋಡು ಸಮೀಪ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ತಾಲೂಕಿನ ಮುಳ್ಳೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ 200 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. … Continued

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಾರ್ವಜನಿಕರ ತೀವ್ರ ವಿರೋಧ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಶ್ರೀ ಗುತ್ತಿಕನ್ನಿಕಾ ನಗರದೇವಿ ದೇವಾಲಯದ ಸಭಾಭವನದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಕುರಿತು ನಡೆದ ಸಾರ್ವಜನಿಕ ಆಕ್ಷೇಪಣೆ ಸಭೆಯಲ್ಲಿ ಸಾರ್ವಜನಿಕರು ಯೋಜನೆಯ ವಿರುದ್ಧ ತಮ್ಮ ಬಲವಾದ ವಿರೋಧ ವ್ಯಕ್ತಪಡಿಸಿದರು. ಈ ಸಭೆ ಕೇವಲ ಒಂದು ಕಾಟಾಚಾರದ ಪ್ರಕ್ರಿಯೆ ಎಂಬಂತೆ ನಡೆಸಲಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. … Continued

ಹೊನ್ನಾವರ | ಗೇರುಸೊಪ್ಪ ಅಣೆಕಟ್ಟಿನಿಂದ ಶರಾವತಿ ನದಿಗೆ ನೀರು ಬಿಡುಗಡೆ

ಕಾರವಾರ : ಕರ್ನಾಟಕದಾದ್ಯಂತ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಲಿಂಗನಮಕ್ಕಿ ಹಾಗೂ ಗೇರುಸೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಸಂಗ್ರಹ ಹೆಚ್ಚಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಡ್ಯಾಂನಿಂದ ಒಟ್ಟಾರೆ 75000 ಕ್ಯೂಸೆಕ್‌ … Continued

ವೀಡಿಯೊ…| ಹೊನ್ನಾವರ : ಲಿಂಗನಮಕ್ಕಿ ಅಣೆಕಟ್ಟಿನಿಂದ ಶರಾವತಿ ನದಿಗೆ 15000 ಕ್ಯೂಸೆಕ್ ನೀರು ಬಿಡುಗಡೆ

ಕಾರವಾರ : ಶರಾವತಿಯ ಲಿಂಗನಮಕ್ಕಿ ಜಲಾಶಯದಿಂದ ಇಂದು ಮಂಗಳವಾರ (ಆಗಸ್ಟ್‌ 19) ನೀರನ್ನು ಹೊರಕ್ಕೆ ಬಿಡಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ ಒಟ್ಟು 15000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಮೊದಲು ಮೂರು ಗೇಟಗಗಳನ್ನು ತೆಗೆದು ನೀರನ್ನು ಹೊರಕ್ಕೆ ಕಳುಹಿಸಲಾಗಿತ್ತು. ನಂತರ 11 ಗೇಟ್‌ಗಳನ್ನು ತೆರೆದು ಒಟ್ಟು 15000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹೀಗಾಗಿ … Continued

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ ಮುನ್ಸೂಚನೆ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ಕಾರವಾರ : ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಆಗಸ್ಟ್‌ 20 ಬೆಳಗ್ಗೆ ವರೆಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರುತ್ತಿದೆ. ಜಲಾಶಯದಿಂದ ಆಗಸ್ಟ್‌ 19 … Continued

ವೀಡಿಯೊ..| ಭಾರಿ ಮಳೆ : ಗೇರುಸೊಪ್ಪಾ ಜಲಾಶಯದಿಂದ ಶರಾವತಿ ನದಿಗೆ 51835 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕಾರವಾರ : ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಮಾಡುವ ಶರವಾತಿ ನದಿ ಕಣಿವೆ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶರಾವತಿ ನದಿಗೆ ಗೇರುಸೊಪ್ಪ ಜಲಾಶಯದಿಂದ 51835 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹೀಗಾಗಿ ಗೇರುಸೊಪ್ಪಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಗೇರುಸೊಪ್ಪ ಜಲಾಶಯದಿಂದ 51835 ಸಾವಿರ ಕ್ಯೂಸೆಕ್ … Continued

ಲಿಂಗನಮಕ್ಕಿ ಆಣೆಕಟ್ಟಿನಲ್ಲಿ ನೀರು ಹೆಚ್ಚಳ: ಶರಾವತಿ ನದಿ ತೀರ ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ

ಹೊನ್ನಾವರ: ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಶರಾವತಿ ನದಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಲಿಂಗನಮಕ್ಕಿ ಜಲಾಶಯ ಭಾಗದ ಹಿನ್ನೀರಿನ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಜಲಾಶಯಕ್ಕೆ 30,397 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಕಳೆದ ತಿಂಗಳು ಸಹ ಹೆಚ್ಚಿನ … Continued