ಶಿಗ್ಗಾವಿ | ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸಾವು

ಹಾವೇರಿ : ಎರಡು ಕಾರುಗಳ ಮಧ್ಯೆ ಢಿಕ್ಕಿ ಸಂಭವಿಸಿ ಬಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ಶಿಗ್ಗಾವಿ ಬಳಿಯ ತಡಸ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ (ಡಿಸೆಂಬರ್‌ 25) ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ತಡಸ್‌ ಕ್ರಾಸ್‌ ಬಳಿಯ ತಿಮ್ಮಾಪುರದ ಬಳಿ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಎಸ್‌ಯುವಿ ನಿಯಂತ್ರಣ ತಪ್ಪಿ ರಸ್ತೆ … Continued

ಉಪಚುನಾವಣೆ : ಕರ್ನಾಟಕದ 3 ಕ್ಷೇತ್ರಗಳಲ್ಲಿ ಗೆಲುವು ಯಾರಿಗೆ ? ಎಕ್ಸಿಟ್‌ ಪೋಲ್‌ ಹೇಳಿದ್ದೇನು..?

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನವೆಂಬರ್ 13 ರಂದು ನಡೆದಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಪಿಮಾರ್ಕ್ ಎಕ್ಸಿಟ್‌ ಪೋಲ್‌ ಹೊರಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಎಷ್ಟು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಅಂದಾಜಿಸಿದೆ. ಪಿಮಾರ್ಕ್ ಸಮೀಕ್ಷೆ ಪ್ರಕಾರ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಈ … Continued

ಉಪಚುನಾವಣೆ | ಕರ್ನಾಟಕದ 3 ಕ್ಷೇತ್ರಗಳಲ್ಲಿ ಸರಾಸರಿ ಶೇ. 81.84 ಮತದಾನ ; ಚನ್ನಪಟ್ಟಣದಲ್ಲಿ ಅತಿ ಹೆಚ್ಚು

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಬುಧವಾರ ಶಾಂತಿಯುತವಾಗಿ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಸಂಜೆ 6 ಗಂಟೆ ವರೆಗೆ ನಡೆಯಿತು. ಮೂರು ಕ್ಷೇತ್ರಗಳಲ್ಲಿ ಸರಾಸರಿ ಶೇ. 81.84 ಮತದಾನ ಆಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ ಪೈಕಿ ಚನ್ನಪಟ್ಟಣ … Continued

ಬಿಜೆಪಿ ಅಧ್ಯಕ್ಷ ನಡ್ಡಾ ವಿರುದ್ಧ ಶಿಗ್ಗಾವಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಚುನಾವಣಾ ಪ್ರಚಾರದ ವೇಳೆ ನಡ್ಡಾ ಅವರು “ಬಿಜೆಪಿಗೆ ಮತ ನೀಡಿ … Continued

ವಿಧಾನಸಭಾ ಉಪಚುನಾವಣೆ: ಬಿಜೆಪಿಯಿಂದ ಸಂಡೂರು, ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ ಬೊಮ್ಮಾಯಿ ಅವರಿಗೆ ಟಿಕೆಟ್‌ ನೀಡಿದೆ. ಅದೇರೀತಿ ಬಳ್ಳಾರಿ ಜಿಲ್ಲೆಯ ಸಂಡೂರು ಬಂಗಾರು ಹನುಮಂತು … Continued

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 47 ವಿಧಾನಸಭಾ ಕ್ಷೇತ್ರ ಮತ್ತು ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್‌ 13 ರಂದು ಉಪಚುನಾವಣೆ ನಡೆಯಲಿದೆ. ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13 ರಂದು ಉಪಚುನಾವಣೆ ನಡೆಯಲಿದ್ದು, ನ.23 ರಂದು ಫಲಿತಾಂಶ … Continued

ಶಿಗ್ಗಾವಿ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ನಾಲ್ವರು ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತಿಬ್ಬರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ನೀಲಪ್ಪ ಮೂಲಿಮನಿ (23), ಸುದೀಪ ಕೋಟಿ (18), ಶಿವನಗೌಡ ಯಲ್ಲನಗೌಡ್ರ (20), … Continued

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ವಾಹನ ಡಿಕ್ಕಿ ; ಮೂವರು ಸಾವು

ಹಾವೇರಿ: ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ ಸುಮಾರು 20 ಕುರಿಗಳು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಸಂಜೆ ಈ ಅಫಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ರಾಣೆಬೆನ್ನೂರು ತಾಲೂಕಿನ … Continued

ಸೈಬರ್​ ವಂಚಕರು ಕಳುಹಿಸಿದ ಲಿಂಕ್​ ಕ್ಲಿಕ್​ ಮಾಡಿ ಹಣ ಕಳಕೊಂಡ ವಿವಿ ಕುಲಪತಿ

ಹಾವೇರಿ : ಶಿಗ್ಗಾವಿ ತಾಲೂಕಿನ ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ ಅವರಿಗೆ ಸೈಬರ್ ವಂಚಕರು 60 ಸಾವಿರ ರೂ. ಪಂಗನಾಮ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ಕುರಿತು ಅವರೇ ಶಿಗ್ಗಾವಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಧ್ಯಾಹ್ನದ ಸಮಯದಲ್ಲಿ ಧಾರವಾಡ ಎಸ್‌ಬಿಐ ಬ್ಯಾಂಕ್‌ನ ನವೀಕುಮಾರ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನನಗೆ ಫೋನ್ ಮಾಡಿದ್ದ. … Continued

ಶಿಗ್ಗಾಂವಿ : ಹೆದ್ದಾರಿ ಪಕ್ಕ ನಿಂತಿದ್ದವರಿಗೆ ಕಾರು ಡಿಕ್ಕಿ ; ಇಬ್ಬರು ಸಾವು

ಹಾವೇರಿ: ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತರನ್ನು ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಕುರುಬರ (53) ಎಂದು ಗುರುತಿಸಲಾಗಿದೆ. ಇಬ್ಬರೂ ನೀರಲಗಿ ಗ್ರಾಮದಿಂದ ಶಿಗ್ಗಾಂವಿ ಪಟ್ಟಣಕ್ಕೆ ಹೋಗಲು … Continued