ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸಾವು

ತುಮಕೂರು : ಪಂಚರ್ ಆಗಿದ್ದ ಕಾರನ್ನು ದುರಸ್ತಿ ಮಾಡುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4ರ ಕುಂಟೇಗೌಡನಹಳ್ಳಿ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಆವಲಹಳ್ಳಿ ನಿವಾಸಿಗಳಾದ ಮಹೇಶ್(40) ಮತ್ತು ವಕೀಲರ ಸಹಕಾರ ಬ್ಯಾಂಕ್ ಉದ್ಯೋಗಿ ಉಮೇಶ(40) ಎಂದು ಗುರುತಿಸಲಾಗಿದೆ. ಮಹೇಶ … Continued

ಶಿರಾ : ಕೆರೆಗೆ ಬಿದ್ದ ಕಾರು ; ಒಂದೇ ಕುಟುಂಬದ ಮೂವರು ಸಾವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ಭಾನುವಾರ ಬೆಳಗ್ಗೆ ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಇದ್ದಾರೆ ಎಂದು ಹೇಳಲಾಗಿದೆ. ಕಾರಿನಲ್ಲಿದ್ದವರಲ್ಲಿ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಶಿರಾದ ಮೇಕೆರಹಳ್ಳಿ ಗ್ರಾಮದ ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ಎಂದು ಗುರುತಿಸಲಾಗಿದೆ. ಪ್ರವೀಣ ಎಂಬವರು ಅಪಾಯದಿಂದ ಪಾರಾಗಿದ್ದಾರೆ. … Continued