ಉದ್ಧವ್‌ ಠಾಕ್ರೆಗೆ ತೀವ್ರ ಮುಖಭಂಗ: ಪಕ್ಷದ ಸಂಸದೀಯ ಸಭೆಗೆ 3 ಸಂಸದರು ಮಾತ್ರ ಹಾಜರು, 6 ಸಂಸದರು ಗೈರು…!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ದೊಡ್ಡ ಹಿನ್ನಡೆಯಲ್ಲಿ ದೆಹಲಿಯಲ್ಲಿ ಗುರುವಾರ ನಡೆದ ಶಿವಸೇನಾ (ಯುಬಿಟಿ) ಪಕ್ಷದ ಮಹತ್ವದ ಸಂಸದೀಯ ಸಭೆಗೆ ಒಂಬತ್ತು ಲೋಕಸಭಾ ಸಂಸದರ ಪೈಕಿ ಕೇವಲ ಮೂವರು ಮಾತ್ರ ಹಾಜರಾಗಿದ್ದಾರೆ. ಹೀಗಾಗಿ ಅವರು ಏಕನಾಥ ಶಿಂಧೆ ನೇತೃತ್ವದ ಆಡಳಿತಾರೂಢ ಶಿವಸೇನೆ ಸೇರ್ಪಡೆಯಾಗುವ ಸಾಧ್ಯತೆ ವದಂತಿಗಳಿಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬಂದಿವೆ. ಈ ಸಭೆಯಿಂದ … Continued

‘ಇದು ಪ್ರವಾಸಿ ಪಕ್ಷ…’: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೋಲಿನ ನಂತರ ಕಾಂಗ್ರೆಸ್ ವಿರುದ್ಧ ಶಿವಸೇನೆ (ಯುಬಿಟಿ) ವಾಗ್ದಾಳಿ

ಮುಂಬೈ: ಮುಂದಿನ ತಿಂಗಳು ನಡೆಯಲಿರುವ ಪ್ರತಿಷ್ಠಿತ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜಕೀಯ ಕಳೆಗಟ್ಟಿದೆ. ಈ ನಡುವೆ, “ನೈಜ ಶಿವಸೇನೆ” ಕಳೆದ 30 ವರ್ಷಗಳಿಂದ ಮುಂಬೈನಲ್ಲಿ ತನ್ನ ಹಿಡಿತ ಸಾಧಿಸಿದ್ದು, ಈ ಬಾರಿಯೂ ಜಯಭೇರಿ ಬಾರಿಸಲಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆನಂದ ದುಬೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಸ್ತುತತೆಯನ್ನು … Continued