ಉದ್ಧವ್‌ ಠಾಕ್ರೆಗೆ ಮಹಾ ಶಾಕ್ : ಶಿಂದೆ ಪಾಳಯ ಸೇರಿದ ಪಕ್ಷದ ಆರು ಬಂಡಾಯ ಸಂಸದರು !

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ, ಶಿವಸೇನಾ (ಯುಬಿಟಿ) ಪಕ್ಷದ ಆರೂ ಜನ ಬಂಡಾಯ ಸಂಸದರು ಸೋಮವಾರ ಮುಂಬೈನಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಆಡಳಿತಾರೂಢ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಉದ್ಧವ್ ಠಾಕ್ರೆ ಬಣಕ್ಕೆ ಬಿದ್ದ ಬಲವಾದ ಆಘಾತವಾಗಿದೆ. ಮುಂಬೈನಲ್ಲಿ  ಸೋಮವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ … Continued

ಉದ್ಧವ್ ಠಾಕ್ರೆ ಬಣಕ್ಕೆ ಹಿನ್ನಡೆ : ಶಿಂಧೆ ಶಿವಸೇನೆಗೆ ಜಿಗಿದ ಸಂಸದ ಓಮ್ರಾಜೆ ನಿಂಬಾಳ್ಕರ್

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಧಾರಾಶಿವ್ ಕ್ಷೇತ್ರದ ಸಂಸದ ಓಮ್ರಾಜೆ ನಿಂಬಾಳ್ಕರ್ ಅವರು ಉದ್ಧವ್ ಬಣವನ್ನು ತೊರೆದು, ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ತಮ್ಮ ಗೋವರ್ಧನವಾಡಿಯ ನಿವಾಸದಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ … Continued

ಬಂಡಾಯದ ಬಿರುಗಾಳಿ: ನಂಬಿಕೆ ಇಲ್ಲದಿದ್ರೆ ಶಿವಸೇನೆ ಮುಖ್ಯಸ್ಥನ ಸ್ಥಾನ ತ್ಯಜಿಸಲು ಸಿದ್ಧ ಎಂದ ಉದ್ಧವ್ ಠಾಕ್ರೆ

ಮುಂಬೈ: ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಬಂಡಾಯದ ಬಿರುಗಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಪಕ್ಷದ ಕಾರ್ಯಕರ್ತರಿಗೆ ತಮ್ಮ ನಾಯಕತ್ವದ ಮೇಲೆ ವಿಶ್ವಾಸವಿಲ್ಲದಿದ್ದರೆ ತಕ್ಷಣವೇ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ ಎಂದು ಪಕ್ಷದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಹೇಳಿದ್ದಾರೆ. ಕಾರ್ಯಕರ್ತರು ತಾವು ಈ ಸ್ಥಾನಕ್ಕೆ ಯೋಗ್ಯರಲ್ಲ ಎಂದು ಭಾವಿಸಿದರೆ, ಪಕ್ಷದ ಚುಕ್ಕಾಣಿಯನ್ನು ಯಾವುದೇ ಸಾಮಾನ್ಯ … Continued

ವೀಡಿಯೊ..| ಕಳಪೆ ಗುಣಮಟ್ಟದ ಆಹಾರ ನೀಡಿದ್ದಾರೆಂದು ಕ್ಯಾಂಟೀನ್ ಮ್ಯಾನೇಜರ್‌ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ…!

ಮುಂಬೈ: ಮುಂಬೈನ ಆಕಾಶವಾಣಿ ಶಾಸಕರ ನಿವಾಸದಲ್ಲಿ ಶಾಸಕ ಸಂಜಯ ಗಾಯಕ್ವಾಡ್, ತಮಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡು ಕ್ಯಾಂಟೀನ್ ಮ್ಯನೇಜರ್‌ ಅವರನ್ನು ಥಳಿಸುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಬುಲ್ದಾನಾ ಕ್ಷೇತ್ರ ಪ್ರತಿನಿಧಿಸುವ ಶಾಸಕ ಸಂಜಯ ಗಾಯಕವಾಡ್ ಅವರು ಶಾಸಕರ ಅತಿಥಿ ಗೃಹ ಕ್ಯಾಂಟೀನ್‌ನಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದರು ಎಂದು … Continued

ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

ಮುಂಬೈ: ರಾಜಕೀಯದಲ್ಲಿ ಎರಡು ದಶಕಗಳಿಂದ ಬೇರೆಬೇರೆಯಾಗಿದ್ದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ ಠಾಕ್ರೆ ಇಂದು, ಶನಿವಾರ ಮುಂಬೈನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮತ್ತೆ ಒಂದಾಗಿದ್ದಾರೆ. ‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿದ್ದು, 2005 ರ … Continued

ಡಿಸಿಎಂ ಏಕನಾಥ ಶಿಂಧೆಯನ್ನು ದ್ರೋಹಿ ಎಂದು ಕರೆದ ಕುನಾಲ್‌ ಕಾಮ್ರಾ ; ಕಾರ್ಯಕ್ರಮ ನಡೆದ ಸ್ಥಳ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಪಕ್ಷ ಬದಲಿಸಿದ್ದಕ್ಕಾಗಿ ಹಾಸ್ಯನಟ ಕುನಾಲ್ ಕಾಮ್ರಾ ಅವರನ್ನು ಗೇಲಿ ಮಾಡಿದ ವೀಡಿಯೊ ಕಾಣಿಸಿಕೊಂಡ ಕೆಲವೇ ಗಂಟೆಗಳ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿಂಧೆ ಸೇನಾ ಶಾಸಕ ಮುರ್ಜಿ ಪಟೇಲ್ ಅವರ ದೂರಿನ ಮೇರೆಗೆ ಹಾಸ್ಯನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈಗ ಅವರು ಈಗ ಏಕನಾಥ ಶಿಂಧೆ … Continued

ಸಿಗದ ಸಚಿವ ಸ್ಥಾನ ; ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಶಿವಸೇನೆ ಶಾಸಕ

ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ ಕಾರಣಕ್ಕೆ ಶಿವಸೇನೆಯ ಏಕನಾಥ ಶಿಂಧೆ ಬಣದ ಶಾಸಕರೊಬ್ಬರು ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನರೇಂದ್ರ ಭೋಂಡೇಕರ್ ಅವರು ಶಿವಸೇನೆಯ ಉಪನಾಯಕ ಮತ್ತು ವಿದರ್ಭದ ಪಕ್ಷದ ಸಂಯೋಜಕರಾಗಿದ್ದರು, ಅಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಮಹಾಯುತಿ 62 ಸ್ಥಾನಗಳಲ್ಲಿ 47 ಸ್ಥಾನಗಳನ್ನು … Continued

ಮಹಾರಾಷ್ಟ್ರ ಚುನಾವಣೆಯಲ್ಲಿ ಉದ್ಧವ ಠಾಕ್ರೆ ಮುಖ ಉಳಿಸಲು ರಾಜ ಠಾಕ್ರೆ ಪಕ್ಷದಿಂದ ಪರೋಕ್ಷ ಸಹಾಯ ; ಅದು ಆಗಿದ್ದು ಹೇಗೆ..?

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಭಾರಿ ಜಯ ಗಳಿಸಿದೆ. ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಬಹಳ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗಳಿಸಿದೆ. ಅದರಲ್ಲಿಯೂ ಇಷ್ಟು ಸ್ಥಾನ ಗಳಿಸಲು ಸೋದರಸಂಬಂಧಿ ರಾಜ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ … Continued

ವೀಡಿಯೊ..| ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದ್ರೆ 11 ಲಕ್ಷ ರೂ. ಬಹುಮಾನ ; ವಿವಾದದ ಕಿಡಿ ಹೊತ್ತಿಸಿದ ಶಿವಸೇನೆ (ಏಕನಾಥ ಶಿಂಧೆ) ಶಾಸಕ

ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಶಿವಸೇನಾ (ಏಕನಾಥ ಶಿಂಧೆ ಬಣ) ಶಾಸಕ ಸಂಜಯ ಗಾಯಕ್ವಾಡ್ ಅವರು ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಗಾಯಕ್ವಾಡ ಅವರು ತಮ್ಮ ವಿಲಕ್ಷಣ ಹೇಳಿಕೆಯಲ್ಲಿ, “ ವಿದೇಶದಲ್ಲಿದ್ದಾಗ, ರಾಹುಲ್ ಗಾಂಧಿ ಅವರು ಭಾರತದಲ್ಲಿ … Continued

ಶಿವಸೇನಾ ಮುಖಂಡ ಸಂದೀಪ ಥಾಪರ್ ಮೇಲೆ ಮಾರಕಾಸ್ತ್ರದಿಂದ ‘ನಿಹಾಂಗ್ ಸಿಖ್ಖʼರ ದಾಳಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶಿವಸೇನೆಯ ಪಂಜಾಬ್ ನಾಯಕ ಸಂದೀಪ ಥಾಪರ್ ಗೋರಾ (58) ಅವರ ಮೇಲೆ ಲೂಧಿಯಾನದಲ್ಲಿ ನಿಹಾಂಗ್ ಸಿಖ್ ವೇಷಧಾರಿ ವ್ಯಕ್ತಿಗಳು ಕತ್ತಿಗಳಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಸಂದೀಪ ಥಾಪರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪಂಜಾಬ್‌ ಶಿವಸೇನೆ ಮುಖಂಡ ಸಂದೀಪ ಥಾಪರ್ ಮೇಲೆ ಶುಕ್ರವಾರ ಮುಂಜಾನೆ ಸಾರ್ವಜನಿಕರ ಮುಂದೆಯೇ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಖಡ್ಗಗಳಿಂದ ದಾಳಿ … Continued