ಪೈಪ್‌ ಸೋರಿಕೆಯಿಂದ ಶರಾವತಿ ಜಲವಿದ್ಯುತ್‌ ಕೇಂದ್ರದ ಒಳಗೆ ತುಂಬಿದ ನೀರು

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಶರಾವತಿ ಜಲವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಗುರುವಾರ (ಜೂನ್ 25) ನಿಯಮಿತ ನಿರ್ವಹಣಾ ಕಾರ್ಯದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲಿಂಗನಮಕ್ಕಿ ಜಲಾಶಯದ ವ್ಯಾಪ್ತಿಗೆ ಒಳಪಡುವ ಈ ವಿದ್ಯುತ್ ಕೇಂದ್ರದ 7ನೇ ಘಟಕದಲ್ಲಿ (Unit 7) ನಿರ್ವಹಣಾ ಕೆಲಸ ನಡೆಯುತ್ತಿದ್ದಾಗ ದಿಢೀರನೆ … Continued

ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (heart attack) ಮೃತಪಟ್ಟ ಘಟನೆ ನಡೆದಿದೆ ಎಂದುವರದಿಯಾಗಿದೆ. ಬಾಲಕ ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ.  ಕೊಡನವಳ್ಳಿ ಗ್ರಾಮದ ಗೌತಮ ಜೈನ್ ಹಾಗೂ ಶಿಲ್ಪಾ ದಂಪತಿ ಪುತ್ರ ತ್ರಿಲೋ (6) ಮೃತ ಬಾಲಕ … Continued

ಜಿ.ಆರ್.ಪಂಡಿತರ ಯಕ್ಷಗಾನದ ಚೌಕಿಮನೆ ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಬಹುಮಾನ

ಶಿರಸಿ : ಸಾಗರದ ಜಿ.ಆರ್.ಪಂಡಿತ ಅವರು ತೆಗೆದ ಯಕ್ಷಗಾನದ ಒಂದು ಮೇಕಪ್ ಫೋಟೋಕ್ಕೆ ಅಂತಾರಾಷ್ಟ್ರೀಯ ಬಹುಮಾನಕ್ಕೆ ಪಾತ್ರವಾಗಿದೆ. ಇದೇ ಏಪ್ರಿಲ್ ನಲ್ಲಿ ಯುರೋಪಿನ ಸರ್ಬಿಯಾ ದೇಶದ ನೊವಿಸಡ್ ನಗರದ ಸ್ಟರಿಜಿನೊ ಪೊಜೊರ್ಜೆ ಎಂಬ ಖ್ಯಾತ ಛಾಯಾಗ್ರಹಣ ಸಂಸ್ಥೆಯು ಆಯೋಜಿಸಿದ್ದ 18ನೇ “ಟ್ರೈಯೇನಿಯಲ್ ಫೋಟೋಗ್ರಫಿಕ್ ಆರ್ಟ್ ನಲ್ಲಿ ಥಿಯೇಟರ್” ಎಂಬ ಹೆಸರಿನ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ 13 … Continued

ಶಿವಮೊಗ್ಗ : ಪಶುವೈದ್ಯೆ ಸಾವಿಗೆ ಕಾರಣವಾಗಿದ್ದ ನೀರಾನೆ ಸಾವು

ಶಿವಮೊಗ್ಗ: ಸಮೀಪದ ತ್ಯಾವರೆಕೊಪ್ಪದ ಟೈಗರ್ ಅಂಡ್ ಲಯನ್ ಸಫಾರಿಯಲ್ಲಿ 12 ವರ್ಷದ ಹೆಣ್ಣು ನೀರಾನೆ ‘ಹಂಸಿನಿ’ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಇದೇ ನೀರಾನೆ ಮಾರ್ಚ್ 19ರಂದು ಮೃಗಾಲಯದ ಪಶುವೈದ್ಯ ತರಬೇತಿ ವಿದ್ಯಾರ್ಥಿನಿ ಸಮೀಕ್ಷಾ ರೆಡ್ಡಿ (27) ಅವರ ಸಾವಿಗೆ ಕಾರಣವಾಗಿತ್ತು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಹೆಣ್ಣು ನೀರಾನೆ (Hippopotamus) … Continued

ಭದ್ರಾವತಿ : ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌ ; 30ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ :ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಹಳ್ಳದಲ್ಲಿ ಬಿದ್ದು ೩೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಂದು ವೀರಪುರ ಗ್ರಾಮದ ಕಾಗೆಹಳ್ಳ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಸ್ಸು ನಿಯಂತ್ರಣ ಕಳೆದುಕೊಂಡು ಸೇತುವೆಯ ತಡೆಗೋಡೆಗೆ (Railing) ಡಿಕ್ಕಿ ಹೊಡೆದು ನಂತರ ಕೆಳಕ್ಕೆ ಬಿದ್ದಿದೆ ಎನ್ನಲಾಗಿದೆ. 10ಕ್ಕೂ … Continued

ಶಿವಮೊಗ್ಗ : ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶು ವೈದ್ಯೆಯೊಬ್ಬರು ನೀರಾನೆ (Hippopotamus) ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಎಂಬವರು ನೀರಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಡಾ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10:30ರ ಸುಮಾರಿಗೆ … Continued

ವೀಡಿಯೊ..| ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌

ಶಿವಮೊಗ್ಗ : ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಇಡೀ ವಾಹನ ಸಂಪೂರ್ಣವಾಗಿ ಭಸ್ಮವಾದ ಘಟನೆ ಇಂದು ಹುಲಿಕಲ್ ಘಾಟಿಯ ಫಾಲ್ಸ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಕುಂದಾಪುರ-ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಹೋಗುತ್ತಿದ್ದಾಗ ತೀವ್ರ ತಿರುವುಗಳಿರುವ … Continued

ಶಿವಮೊಗ್ಗ: ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗ: ಶಿವಮೊಗ್ಗದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಬರ್ಬರವಾಗಿ ಹೊಡೆದು ಕೊಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ವಿಶೇಷ ತರಗತಿ ಮುಗಿಸಿ ವಿದ್ಯಾರ್ಥಿಗಳು ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿಯನ್ನು ಸಂಕೇತ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC … Continued

ಸಾಗರ : ಮಾರಿಕಾಂಬೆ ದರ್ಶನದ ವೇಳೆ ಕಾಗೋಡು ತಿಮ್ಮಪ್ಪ ಅಸ್ವಸ್ಥ

ಶಿವಮೊಗ್ಗ : ಜಿಲ್ಲೆಯ ಸಾಗರ ಮಾರಿಕಾಂಬ ದೇವಿ ಜಾತ್ರೆ ಮಂಗಳವಾರದಿಂದ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ  ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ (Kagodu Thimmappa) ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ಅಸ್ವಸ್ಥತೆಯಿಂದಾಗಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ.. … Continued

ಶಿವಮೊಗ್ಗ: ತಡರಾತ್ರಿ ಹೊತ್ತಿ ಉರಿದ ಬಸ್ ; ಪ್ರಯಾಣಿಕರು ಪಾರು

ಶಿವಮೊಗ್ಗ: ಖಾಸಗಿ ಸ್ಲೀಪರ್​​ ಬಸ್ಸು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಮೂಲಕ ಬೆಂಗಳೂರಿಗೆ ಬಸ್‌ ತೆರಳುತಿತ್ತು ಎಂದು ಹೇಳಲಾಗಿದೆ. ಮಾರ್ಗ ಮಧ್ಯೆ ಸೂಡುರು ಬಳಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಾಹನವು … Continued