ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ನಾಪತ್ತೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಗುಚಿ ಬಿದ್ದು ಹೊಳೆ ಊಟಕ್ಕೆ ಹೋಗಿದ್ದ ಐವರಲ್ಲಿ ಮೂವರು ನೀರು ಪಾಲಾಗಿದ್ದಾರೆ ಎಂದು ವರದಿಯಾಗಿದೆ. ಹುಲಿದೇವರ ಬನದ ಸಂದೀಪ (35), ಸಿಗಂದೂರಿನ ಚೇತನ್ (30) ಹಾಗೂ ಗಿಣಿವಾರದ ರಾಜು (28) ನಾಪತ್ತೆಯಾದವರು ಎಂದು ಹೇಳಲಾಗಿದೆ. ಬುಧವಾರ ಮಧ್ಯಾಹ್ನ ಹೊಳೆ ಊಟಕ್ಕೆಂದು ಐವರು ಯುವಕರು ಕಳಸವಳ್ಳಿ ಬಳಿಯ … Continued

ವೀಡಿಯೊ..| ಶಿವಮೊಗ್ಗ: ಕಾರು ನಿಲ್ಲಿಸುವಂತೆ ಸೂಚಿಸಿದ್ದಕ್ಕೆ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಎಳೆದೊಯ್ದ ಕಾರು ಚಾಲಕ…!

ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಹೊತ್ತೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಸಹ್ಯಾದ್ರಿ ಕಾಲೇಜು ಬಳಿ ಅಧಿಕಾರಿಗಳು ನಿತ್ಯ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಆ ಮಾರ್ಗದಲ್ಲಿ ಹೋಗುತ್ತಿದ್ದ … Continued

ವಾಲಿಬಾಲ್ ತರಬೇತಿ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಶಿಕ್ಷಕ ಸಾವು

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಜಾನನ ಹಿರೇಮಠ (46) ಎಂಬವರು ಮೃತ ಶಿಕ್ಷಕರಾಗಿದ್ದಾರೆ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ … Continued

ಹೊಸನಗರ : ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ : ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹೊಸನಗರ ತಾಲೂಕಿನ ಮತ್ತಿಕೈ ಎಂಬಲ್ಲಿ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು, ನಂತರ ತಾನು ಕೂಡ ಬಾವಿಗೆ ಹಾರಿಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು ಬುಧವಾರ ರಾತ್ರಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ … Continued

ಲಿಂಗನಮಕ್ಕಿ ಜಲಾಶಯದಿಂದ 10 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಶಿವಮೊಗ್ಗ: ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ ಮಾಡುವ ಅತಿದೊಡ್ಡ ಜಲಾಶಯವಾದ ಲಿಂಗನಮಕ್ಕಿ ಅಣೆಕಟ್ಟು ಭರ್ತಿಯಾಗುತ್ತಿದ್ದು, ಗುರುವಾರ 3 ಕ್ರಸ್ಟ್ ಗೇಟ್ ಮೂಲಕ 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು. ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಸುಮಾರು 52 ಸಾವಿರ ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದೆ. ಅಣೆಕಟ್ಟಿನಲ್ಲಿ 1,814 ಅಡಿ ನೀರು ಸಂಗ್ರಹವಾಗಿದೆ. ಹೀಗಾಗಿ … Continued

ವೀಡಿಯೊ..| ಸಾಗರ : ಬಾಳೆಹಳ್ಳಿಯಲ್ಲಿ ಮನೆಯಂಗಳಕ್ಕೇ ಬಂದು ವಿಹರಿಸಿದ ಕಾಡೆಮ್ಮೆಗಳ ಹಿಂಡು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಾಗರ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವರದಹಳ್ಳಿ ಸಮೀಪದ ಬಾಳೆಹಳ್ಳಿಯಲ್ಲಿ ಮನೆಯ ಅಂಗಳಕ್ಕೇ ಕಾಡೆಮ್ಮೆಗಳ ಹಿಂಡು ಸೋಮವಾರ ಬೆಳಗಿನ ಜಾವ ಆಗಮಿಸಿದ್ದವು. ಸಾಗರ ತಾಲೂಕಿನ ಕರ್ಕಿಕೊಪ್ಪದ ಬಾಳೆಹಳ್ಳಿಯ ರವೀಂದ್ರಮೂರ್ತಿ ಅವರ ಮನೆ ಅಂಗಳದಲ್ಲಿ ಸೋಮವಾರ ಬೆಳಿಗ್ಗೆ ೪:೩೦ರ ಸುಮಾರಿಗೆ ಕಾಡೆಮ್ಮೆಗಳ ಗುಂಪು ಕಾಣಿಸಿಕೊಂಡಿವೆ. ಗುಂಪಿನಲ್ಲಿ ದೊಡ್ಡದು-ಸಣ್ಣದು ಸೇರಿ ಸುಮಾರು ೮-೧೦- ಕಾಡೆಮ್ಮೆ-ಕಾಡುಕೋಣಗಳು ಇದ್ದವು. ಈ ಗುಂಪು … Continued

ಶಿವಮೊಗ್ಗ : ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ ; ಬಿಜೆಪಿ ನಾಯಕ ಭಾನುಪ್ರಕಾಶ ನಿಧನ

ಶಿವಮೊಗ್ಗ: ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ ಅವರು ತೀವ್ರವಾಗಿ ಅಸ್ವಸ್ಥಗೊಂಡು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಗೋಪಿ ಸರ್ಕಲ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಪ್ರತಿಭಟನೆ ಕಾರ್ಯಕ್ರಮದ ನಂತರ ಭಾನುಪ್ರಕಾಶ ಅವರಿಗೆ ಹೃದಯಾಘಾತವಾಗಿದೆ. ಅವರು ಅಲ್ಲಿಯೇ … Continued

ಖ್ಯಾತ ಇತಿಹಾಸ ಸಂಶೋಧಕ ಡಾ. ಕೆಳದಿ ಗುಂಡಾ ಜೋಯಿಸ ಇನ್ನಿಲ್ಲ

ಸಾಗರ : ಖ್ಯಾತ ಇತಿಹಾಸ ಸಂಶೋಧಕ ಡಾ. ಕೆಳದಿ ಗುಂಡಾ ಜೋಯಿಸ ಅವರು ಭಾನುವಾರ (ಜೂನ್ 2) ಸಂಜೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಇತಿಹಾಸ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಅವರು ವಿಶೇಷವಾಗಿ ಕೆಳದಿ ಅರಸರ ಬಗ್ಗೆ ಅಧ್ಯಯನ ಮಾಡಿದ್ದರು. ಅಲ್ಲದೆ, ಕೆಳದಿ ಮ್ಯೂಸಿಯಂ ಪ್ರಾರಂಭಿಸಿ, ಅರಸರ ಕಾಲದ ಗ್ರಂಥಗಳು ಹಾಗೂ … Continued

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು

ಶಿವಮೊಗ್ಗ : ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಗೋಡು ತಿಮ್ಮಪ್ಪನವರಿಗೆ ಜ್ವರ ಹಾಗೂ ತೀವ್ರ ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕುಟುಂಬದವರು … Continued

ಶಿವಮೊಗ್ಗ : ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಹಾಡಹಗಲೇ ಜೋಡಿ ಕೊಲೆ ನಡೆದಿದೆ., ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮತ್ತೊಬ್ಬ ಗಾಯಗೊಂಡಿದ್ದಾನೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ರೌಡಿಗಳ ನಡುವೆ ನಡೆದ ಗಲಾಟೆಯಿಂದಾಗ ಮರ್ಡರ್ ಆಗಿರಬಹುದು ಎಂದು ಶಂಕಿಸಲಾಗಿದೆ. ಲಷ್ಕರ್ ಮೊಹಲ್ಲಾದ ಜನತಾ … Continued