ಶಿರಸಿ: ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಶಿವರಾಮ ಹೆಬ್ಬಾರ ಅವಿರೋಧ ಆಯ್ಕೆ

ಶಿರಸಿ: ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಸಹಕಾರಿ (ಕೆಡಿಸಿಸಿ) ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಸತತವಾಗಿ ಎರಡನೇ ಬಾರಿಗೆ ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೊಯಿಡಾದ ಕೃಷ್ಣ ದೇಸಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. … Continued

ಬಿಜೆಪಿಯಿಂದ ಶಾಸಕರಾದ ಶಿವರಾಮ ಹೆಬ್ಬಾರ, ಎಸ್‌.ಟಿ. ಸೋಮಶೇಖರ ಉಚ್ಚಾಟನೆ

ಬೆಂಗಳೂರು: ಶಾಸಕರಾದ ಶಿವರಾಮ ಹೆಬ್ಬಾರ (Shivaram Hebbar) ಹಾಗೂ ಎಸ್.ಟಿ. ಸೋಮಶೇಖರ (ST Somashekhar) ಅವರನ್ನು ಬಿಜೆಪಿ (BJP)ಯಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಬಿಜೆಪಿ ಹೈಕಮಾಂಡ್‌ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಬಸವನಗೌಡ ಪಾಟೀಲ ಯತ್ನಾಳ್‌ ಅವರ ಉಚ್ಚಾಟನೆ ಮಾಡಿದ ಕೆಲವು ದಿನಗಳ ನಂತರ ಈ … Continued

ಪಕ್ಷದ ಶಿಸ್ತು ಉಲ್ಲಂಘನೆ ; ಶಿವರಾಮ ಹೆಬ್ಬಾರ, ಸೋಮಶೇಖರ ಸೇರಿ ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್‌ ನೋಟಿಸ್‌

ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ, ಪಕ್ಷದ ಇಮೇಜಿಗೆ ಧಕ್ಕೆ ಆಗುವಂತೆ ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖ‌ರ ಸೇರಿದಂತೆ ಐವರಿಗೆ ಕಾರಣ ಕೇಳಿ ನೋಟಿಸ್ ನೀಡಿದೆ. ಸಾರ್ವಜನಿಕ ವೇದಿಕೆಗಳಲ್ಲಿ … Continued

ಕಾಂಗ್ರೆಸ್‌ ಜೊತೆಗೆ ಹೆಜ್ಜೆ ಹಾಕ್ತಾರಾ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ..? ಚರ್ಚೆಗೆ ಗ್ರಾಸವಾಯ್ತು ಫೋಟೋಗಳು…!

ಯಲ್ಲಾಪುರ : ಮಾನಸಿಕವಾಗಿ ಬಿಜೆಪಿಯಲ್ಲಿ ಇಲ್ಲದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಏನು ಮಾತುಕತೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ತಾನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನೀರಾವರಿಗೆ ವಿಶೇಷ ಅನುದಾನ ನೀಡುವಂತೆ … Continued

ಬನವಾಸಿ: ಬಿಜೆಪಿ ತೊರೆದು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ…!

ಬನವಾಸಿ (ಶಿರಸಿ): ಯಲ್ಲಾಪುರ ಕ್ಷೇತ್ರದ ಯುವ ಮುಖಂಡ ಹಾಗೂ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ ಇಂದು, ಗುರುವಾರ ಅಧಿಕೃತವಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಟ್ಟಣದ ಟಿ‌.ಎಂ.ಎಸ್ ಎದುರು ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ  ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. … Continued

ಯುಗಾದಿ ನಂತರ ಮೊದಲ ಹಂತದಲ್ಲಿ ಶಿವರಾಮ ಹೆಬ್ಬಾರ ಪುತ್ರ, ಬೆಂಬಲಿಗರು ಕಾಂಗ್ರೆಸ್‌ ಸೇರಲು ತಯಾರಿ..?

ಶಿರಸಿ : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಸಿದ್ಧತೆ ನಡೆಸಿದ್ದು, ಯುಗಾದಿ ನಂತರ ಕಾಂಗ್ರೆಸ್ಸಿಗೆ ಸೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಶಿವರಾಮ ಹೆಬ್ಬಾರ ಮಂಗಳವಾರ ನಗರದಲ್ಲಿ ಬನವಾಸಿ ಹೋಬಳಿಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಗಳ ಬೆಂಬಲಿಗರ ಸಭೆ ನಡೆಸಿರುವುದು ಅವರು ಕಾಂಗ್ರೆಸ್ಸಿಗೆ ಸೇರುತ್ತಾರೆ … Continued

ಶಿರಸಿ: ಶಾಸಕ ಹೆಬ್ಬಾರ ಕಾಂಗ್ರೆಸ್‌ ಸೇರ್ಪಡೆಗೆ ವಿರೋಧ : ಕಾಂಗ್ರೆಸ್‌ ಕಚೇರಿಯಲ್ಲಿಯೇ ವಿರೋಧಿ ಪೋಸ್ಟರ್‌ ಅಂಟಿಸಿದ ಕಾರ್ಯಕರ್ತರು…!

ಶಿರಸಿ : ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಯೇ ಸೋಮವಾರ ಶಾಸಕ ಶಿವರಾಮ ಹೆಬ್ಬಾರ ವಿರೋಧಿ ಪೋಸ್ಟರ್ ಗಳನ್ನು ಅಂಟಿಸಲಾಗಿದೆ. ಹೆಬ್ಬಾರ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಬಿಜೆಪಿ ನಾಯಕರಿಂದ ಹಾಗೂ … Continued

ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ನಡೆ ಚರ್ಚೆಗೆ ಗ್ರಾಸ…!

ಶಿರಸಿ: ಇತ್ತೀಚಿಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಇದ್ದರೂ ಮತದಾನಕ್ಕೆ ಗೈರಾಗುವ ಮೂಲಕ ಸುದ್ದಿಯಲ್ಲಿದ್ದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರು ಫ್ಲೆಕ್ಸ್‌ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಬನವಾಸಿಯ ಕದಂಬೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರುವ … Continued

ರಾಜ್ಯಸಭೆ ಚುನಾವಣೆ | ನನಗೆ ಅನಾರೋಗ್ಯ ಇದ್ದ ಕಾರಣ ಮತದಾನ ಮಾಡ್ಲಿಕ್ಕೆ ಆಗ್ಲಿಲ್ಲ ; ಶಿವರಾಮ ಹೆಬ್ಬಾರ

ಯಲ್ಲಾಪುರ: ‘ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆಂದು ದಾಖಲಾಗಿದ್ದೆ, ಮತದಾನ ಮಾಡಲು ಆಗದೇ ಇರುವುದಕ್ಕೆ ನನಗೆ ಬೇಸರವಿದೆ. ಮಂಗಳವಾರ ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಅವರು ಮಧ್ಯಾಹ್ನದ ಒಳಗೆ … Continued

ರಾಜ್ಯಸಭಾ ಚುನಾವಣೆ : ಮತದಾನಕ್ಕೆ ಗೈರಾದ ಬಿಜೆಪಿ ಶಾಸಕ ಹೆಬ್ಬಾರ..!

ಬೆಂಗಳೂರು : ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಂದು (ಫೆಬ್ರವರಿ 27) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ವಿಧಾನಸೌಧದಲ್ಲಿ ನಡೆದಿದ್ದ ಮತದಾನ ಅಂತ್ಯವಾಗಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ. ಒಟ್ಟು … Continued