ಭಾರತದ ಶೂಟಿಂಗ್ ದಂತಕಥೆ ಜಸ್ಪಾಲ್ ರಾಣಾ 49ನೇ ವಯಸ್ಸಿನಲ್ಲೇ ನಿಧನ

ನವದೆಹಲಿ: ಭಾರತದ ಖ್ಯಾತ ಶೂಟರ್ ಹಾಗೂ ಹೈ-ಪರ್ಫಾರ್ಮೆನ್ಸ್ ಪಿಸ್ತೂಲ್ ತರಬೇತುದಾರರಾದ ಜಸ್ಪಾಲ್ ರಾಣಾ (49) ಅವರು ಇಂದು ಶುಕ್ರವಾರ (ಜೂನ್‌ 12) ಬೆಳಗಿನ ಜಾವ ನವದೆಹಲಿಯಲ್ಲಿ ನಿಧನರಾಗಿದ್ದಾರೆ. ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ (NRAI) ಅಧ್ಯಕ್ಷರಾದ ಕಲಿಕೇಶ ನಾರಾಯಣ್ ಸಿಂಗ್ ದಿಯೋ ಅವರು ಈ ದುಃಖದ ಸಂಗತಿಯನ್ನು ದೃಢಪಡಿಸಿದ್ದಾರೆ. ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್‌ … Continued

ವೀಡಿಯೊ | ಟ್ರಂಪ್‌ ಪಾಲ್ಗೊಂಡಿದ್ದ ಅಮೆರಿಕ ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ ; ದಾಳಿ ಮಾಡಲು ಬಂದಿದ್ದ ವ್ಯಕ್ತಿ ಯಾರು ?

 ವಾಷಿಂಗ್ಟನ್:  ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ  ವರದಿಗಾರರ ವಾರ್ಷಿಕ ಔತಣಕೂಟ ಕಾರ್ಯಕ್ರಮದಲ್ಲಿ ಹಠಾತ್ ಶೂಟೌಟ್ ಸದ್ದು ಕೇಳಿಬಂದಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸುರಕ್ಷಿತವಾಗಿ ಅಧಿಕಾರಿಗಳು ಸ್ಥಳಾಂತರಿಸಿದ ಘಟನೆ ನಡೆಯಿತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಭಾಗವಹಿಸಿದ್ದ ಹೈ-ಪ್ರೊಫೈಲ್ ‘ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ … Continued

ಕೆನಡಾ ಶಾಲೆಯಲ್ಲಿ ಮನಬಂದಂತೆ ಗುಂಡು ಹಾರಿಸಿದ ಮಹಿಳೆ; 10 ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ಒಟ್ಟಾವ: ಕೆನಡಾದ ಬ್ರಿಟಿಷ್ ಕೊಲಂಬಿಯಾದ ‘ಟಂಬ್ಲರ್ ರಿಡ್ಜ್’ (Tumbler Ridge) ಎಂಬಲ್ಲಿರುವ ಪ್ರೌಢಶಾಲೆಯೊಂದರಲ್ಲಿ ಬುಧವಾರ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಶೂಟರ್ ಸೇರಿದಂತೆ 10 ಜನರು ಸಾವಿಗೀಡಾಗಿದ್ದಾರೆ ಮತ್ತು ಕನಿಷ್ಠ 25 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯಾಹ್ನ ಸುಮಾರು 1:20ಕ್ಕೆ ಟಂಬ್ಲರ್ ರಿಡ್ಜ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. … Continued

57ನೇ ವಯಸ್ಸಿನಲ್ಲಿ ರಾಜ್ಯಮಟ್ಟದ ಶೂಟಿಂಗ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಟ ಜಗ್ಗೇಶ ಪತ್ನಿ…!

 ಬೆಂಗಳೂರು : ‘ವಯಸ್ಸು ಕೇವಲ ಸಂಖ್ಯೆಯಷ್ಟೇ ಹೊರತು ಸಾಧನೆಗೆ ಅಲ್ಲ’ ಎಂಬುದನ್ನು ಖ್ಯಾತ ನಟ ಜಗ್ಗೇಶ ಪತ್ನಿ ಹಾಗೂ ಆಹಾರ ತಜ್ಞೆಯೂ  ಪರಿಮಳಾ ಜಗ್ಗೇಶ ಅವರು ಸಾಬೀತು ಪಡಿಸಿದ್ದಾರೆ. ಅವರು ತಮ್ಮ  57  ವಯಸ್ಸಿನಲ್ಲಿ ಇತ್ತೀಚಿಗೆ ನಡೆದ ರಾಜ್ಯಮಟ್ಟದ ಶೂಟಿಂಗ್ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ (KSRA) ವತಿಯಿಂದ … Continued

ಅಮೆರಿಕ | ಪತ್ನಿ, 3 ಸಂಬಂಧಿಕರನ್ನು ಗುಂಡಿಟ್ಟು ಕೊಂದ ಭಾರತೀಯ ಮೂಲದ ವ್ಯಕ್ತಿ ; ಕಪಾಟಿನಲ್ಲಿ ಅಡಗಿ ಪಾರಾದ ಮಕ್ಕಳು

ವಾಷಿಂಗ್ಟನ್/ಅಟ್ಲಾಂಟಾ: ಅಮೆರಿಕದ ಜಾರ್ಜಿಯಾ ರಾಜ್ಯದ ಲಾರೆನ್ಸ್‌ವಿಲ್ಲೆ ನಗರದಲ್ಲಿ ನಡೆದ ಭೀಕರ ಗುಂಡಿನ ದಾಳಿಗೆ ಭಾರತೀಯ ಮೂಲದ ಮಹಿಳೆ ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಹತ್ಯಾಕಾಂಡ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಕಾಲಮಾನ ಶುಕ್ರವಾರ ಮುಂಜಾನೆ ಸುಮಾರು 2:30ರ ಸುಮಾರಿಗೆ ಘಟನೆ ನಡೆದಿದೆ. ಅಟ್ಲಾಂಟಾ ಸಮೀಪದ ಲಾರೆನ್ಸ್‌ವಿಲ್ಲೆ ನಗರದ ಮನೆಯೊಂದರಲ್ಲಿ ಗುಂಡು … Continued

ಬಾಂಡಿ ಬೀಚ್‌ ಭೀಕರ ಗುಂಡಿನ ದಾಳಿ : ಆರೋಪಿ ಸಾಜಿದ್ ಅಕ್ರಮ್ ಹೈದರಾಬಾದ್ ಮೂಲದವನು ; ತೆಲಂಗಾಣ ಪೊಲೀಸರು

ಹೈದರಾಬಾದ್: ಆಸ್ಟ್ರೇಲಿಯಾದ ಸಿಡ್ನಿಯ ಬಾಂಡಿ ಬೀಚ್‌ನಲ್ಲಿ ನಡೆದ ಭೀಕರ ಗುಂಡಿನ ದಾಳಿಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಸಾಜಿದ್ ಅಕ್ರಮ್ ಮೂಲತಃ ಹೈದರಾಬಾದ್‌ನವನು ಎಂದು ತೆಲಂಗಾಣ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಈ ಮೊದಲು ಮಾಧ್ಯಮಗಳು ಈತ ಪಾಕಿಸ್ತಾನಿ ಪ್ರಜೆ ಎಂದು ವರದಿ ಮಾಡಿದ್ದವು, ಆದರೆ ಪೊಲೀಸರು ಈಗ ಆ ವರದಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಕಳೆದ ಭಾನುವಾರ ಸಿಡ್ನಿಯ … Continued

ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ … Continued

ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ, ಇಬ್ಬರು ಮಕ್ಕಳು ಸಾವು

ಸಹರಾನ್ಪುರ: ಉತ್ತರ ಪ್ರದೇಶದ ಸಹರಾನಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಬಿಜೆಪಿ ಮುಖಂಡ ಯೋಗೇಶ ರೋಹಿಲ್ಲಾ ಅವರು ಪತ್ನಿ ಮತ್ತು ಮೂವರು ಮಕ್ಕಳಿಗೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಹರಾನಪುರ ಜಿಲ್ಲೆಯ ಗಂಗೋಹ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗತೇಡ ಗ್ರಾಮದಲ್ಲಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ಅವರ ಮಗ ಮತ್ತು 11 ವರ್ಷದ … Continued

ಬೀದರ | ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, 93 ಲಕ್ಷ ರೂ. ಲೂಟಿ

ಬೀದರ: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದ ಘಟನೆ ಬೀದರಿನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುರುವಾರ ನಡೆದಿದೆ. ಎಸ್​ಬಿಐ ಬ್ಯಾಂಕ್​ ಮತ್ತು ಎಟಿಎಂಗೆ ಹಣ ತುಂಬಿಸುವ ಸಂದರ್ಭದಲ್ಲಿ ಈ ದರೋಡೆ ನಡೆದಿದೆ. ಬ್ಯಾಂಕ್‌ಗೆ ಹಣ ತುಂಬಿಸುವುದಕ್ಕೆ ಸಿಬ್ಬಂದಿ ಬಂದ ಸಂದರ್ಭದಲ್ಲಿ ಅವರ ಮೇಲೆ ಗುಂಡು ಹಾರಿಸಿ, … Continued

ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್ ಶೂಟರ್‌ಗಳು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನವರು: ಮೂಲಗಳು

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಶಂಕಿತರು ತಾವು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಹತ್ಯೆಯ ಹೊಣೆಗಾರಿಕೆಯನ್ನು ಇನ್ನೂ ಒಪ್ಪಿಕೊಳ್ಳದಿರುವಾಗ ಪೊಲೀಸರು ಈ ಬಗ್ಗೆ ಪರಿಶೀಲಿಸಿಲ್ಲ. ಈ ಘಟನೆ ಮಹಾರಾಷ್ಟ್ರ ರಾಜ್ಯ ಚುನಾವಣೆಗೆ ಮುನ್ನ ಭದ್ರತಾ … Continued